AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಬೆದರಿಕೆ ಬರುತ್ತಿದೆ, ಅಮ್ಮನ ಕ್ಲಿನಿಕ್​ಗೆ ನುಗ್ಗಿದ್ದಾರೆ; ರಣವೀರ್ ಅಲ್ಲಾಹಬಾಡಿಯಾ

ನನಗೆ ಕೊಲೆ ಬೆದರಿಕೆಗಳು ಬರುತ್ತಿವೆ, ನನ್ನ ತಾಯಿಯ ಕ್ಲಿನಿಕ್‌ಗೆ ಜನರು ನುಗ್ಗಿದ್ದಾರೆ ಎಂದು ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋ ವಿವಾದದ ನಂತರ ರಣವೀರ್ ಅಲ್ಲಾಹ್​ಬಾಡಿಯಾ ಆಘಾತಕಾರಿ ವಿವರಗಳನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ರಣವೀರ್ ಅಲ್ಲಾಹ್​ಬಾಡಿಯಾ ವಿರುದ್ಧ ಹಲವು ಕೇಸ್​ಗಳು ದಾಖಲಾಗಿವೆ. ಈಗಾಗಲೇ ಹಲವು ಬಾರಿ ರಣವೀರ್ ತನ್ನಿಂದಾದ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ. ತಮ್ಮ ಕುಟುಂಬದ ವಿರುದ್ಧದ ಕಿರುಕುಳ ಮತ್ತು ಕೊಲೆ ಬೆದರಿಕೆಗಳನ್ನು ನಿಲ್ಲಿಸುವಂತೆ ಸಾರ್ವಜನಿಕರ ಬಳಿ ಮನವಿ ಮಾಡಿದ್ದಾರೆ.

ಕೊಲೆ ಬೆದರಿಕೆ ಬರುತ್ತಿದೆ, ಅಮ್ಮನ ಕ್ಲಿನಿಕ್​ಗೆ ನುಗ್ಗಿದ್ದಾರೆ; ರಣವೀರ್ ಅಲ್ಲಾಹಬಾಡಿಯಾ
Ranveer Allahbadia
Follow us
ಸುಷ್ಮಾ ಚಕ್ರೆ
|

Updated on: Feb 15, 2025 | 10:05 PM

ನವದೆಹಲಿ: ಸಮಯ್ ರೈನಾ ಅವರ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ‘ಪೋಷಕರ ಲೈಂಗಿಕತೆ’ ಹೇಳಿಕೆ ನೀಡಿದ ನಂತರ ರಣವೀರ್ ಅಲ್ಲಾಬಾಡಿಯಾ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಅಶ್ಲೀಲ ಭಾಷೆಯನ್ನು ಬಳಸಿದ್ದಕ್ಕಾಗಿ ಅವರನ್ನು ಟೀಕಿಸಲಾಗುತ್ತಿತ್ತು. ರಣವೀರ್ ಮತ್ತು ಆ ಶೋನ ನಿರೂಪಕ ಸಮಯ್ ವಿರುದ್ಧ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪೋಷಕರ ಬಗ್ಗೆ ನನ್ನ ಹೇಳಿಕೆಯು ಅಸೂಕ್ಷ್ಮ ಮತ್ತು ಅಗೌರವದಿಂದ ಕೂಡಿತ್ತು. ಉತ್ತಮವಾಗಿ ಕಾರ್ಯನಿರ್ವಹಿಸುವುದು ನನ್ನ ನೈತಿಕ ಜವಾಬ್ದಾರಿ. ಅದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ ಎಂದು ರಣವೀರ್ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ರಣವೀರ್ ಅಲ್ಲಾಹಬಾಡಿಯಾ ಒಬ್ಬ ಯೂಟ್ಯೂಬರ್ ಆಗಿದ್ದು, ಜನಪ್ರಿಯ ವ್ಯಕ್ತಿಗಳೊಂದಿಗೆ ಪಾಡ್‌ಕ್ಯಾಸ್ಟ್‌ ಶೋಗಳನ್ನು ಮಾಡುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಅನುಯಾಯಿಗಳನ್ನು ಹೊಂದಿರುವ ಯೂಟ್ಯೂಬರ್ ದಿನದಿಂದ ದಿನಕ್ಕೆ ಜನಪ್ರಿಯರಾಗುತ್ತಿದ್ದರು. ಆದರೆ, ಸಮಯ್ ರೈನಾ ಅವರ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ನಂತರ, ಅವರ ಜೀವನವು ಅಸ್ತವ್ಯಸ್ತವಾಗಿದೆ. ಯೂಟ್ಯೂಬರ್ ರಾಷ್ಟ್ರವ್ಯಾಪಿ ಮಟ್ಟದಲ್ಲಿ ಹಲವಾರು ಎಫ್‌ಐಆರ್‌ಗಳು ಮತ್ತು ಆನ್‌ಲೈನ್ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಅಶ್ಲೀಲ ಹೇಳಿಕೆ ವಿವಾದ; ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ವಿರುದ್ಧ ಮಹಿಳಾ ಆಯೋಗ ಸಮನ್ಸ್ ಜಾರಿ

ಇದೀಗ ಮತ್ತೊಂದು ಕ್ಷಮೆಯಾಚನೆಯ ವಿಡಿಯೋ ಮಾಡಿರುವ ಯೂಟ್ಯೂಬರ್ ರಣವೀರ್ ಅಧಿಕಾರಿಗಳೊಂದಿಗೆ ಸಹಕರಿಸುವುದಾಗಿ ಮತ್ತು ಸೂಕ್ತ ಕಾರ್ಯವಿಧಾನವನ್ನು ಅನುಸರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ವಿವಾದದ ನಂತರ ಕೊಲೆ ಬೆದರಿಕೆಗಳ ಬಗ್ಗೆ ರಣವೀರ್ ಅಲ್ಲಾಬಾಡಿಯಾ ಬಹಿರಂಗ ಪಡಿಸಿದ್ದಾರೆ.

ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ರಣವೀರ್ ಅಲ್ಲಾಬಾಡಿಯಾ ಕ್ಷಮೆ ಯಾಚನೆಯನ್ನು ಪೋಸ್ಟ್ ಮಾಡಿದ್ದಾರೆ. ನಾನು ವಿವಾದದ ಬಗ್ಗೆ ಪೊಲೀಸರೊಂದಿಗೆ ಸಹಕರಿಸುತ್ತಿದ್ದೇನೆ ಮತ್ತು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಫೆಬ್ರವರಿ 11ರಂದು, ರಣವೀರ್ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕುರಿತು ತಮ್ಮ ಕಾಮೆಂಟ್‌ಗಳಿಗೆ ಕ್ಷಮೆಯಾಚಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಇಂದು ಅವರು ಮತ್ತೊಮ್ಮೆ ಕ್ಷಮೆ ಯಾಚಿಸಿದ್ದಾರೆ.

ಇದನ್ನೂ ಓದಿ: ‘ಪೋಷಕರು ಕಬ್ಬಡಿ ಆಡೋದು ನೋಡಿ ಮಕ್ಕಳು ಮಲಗ್ತಾರೆ’; ರಣವೀರ್ ಬಳಿಕ ಇಕ್ಕಟಿಗೆ ಸಿಲುಕಿದ ಕಪಿಲ್ ಶರ್ಮಾ

“ನನ್ನನ್ನು ಕೊಲ್ಲಲು ಮತ್ತು ನನ್ನ ಕುಟುಂಬಕ್ಕೆ ನೋವುಂಟು ಮಾಡಲು ಬಯಸುವ ಜನರಿಂದ ಜೀವ ಬೆದರಿಕೆಗಳು ಬರುತ್ತಿದೆ. ಜನರು ರೋಗಿಗಳಂತೆ ನಟಿಸುತ್ತಾ ನನ್ನ ತಾಯಿಯ ಕ್ಲಿನಿಕ್‌ಗೆ ನುಗ್ಗಿದ್ದಾರೆ. ನನಗೆ ಭಯವಾಗುತ್ತಿದೆ ಮತ್ತು ಏನು ಮಾಡಬೇಕೆಂದು ನನಗೆ ತಿಳಿಯುತ್ತಿಲ್ಲ” ಎಂದು ರಣವೀರ್ ಬರೆದಿದ್ದಾರೆ.

ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಣವೀರ್ ಅಲ್ಲಾಬಾಡಿಯಾ ಆ ಶೋನಲ್ಲಿ ಭಾಗವಹಿಸಿದ್ದ ಯುವಕನೊಬ್ಬನ ಬಳಿ ಆತನ ತಂದೆ-ತಾಯಿಯ ಬಗ್ಗೆ ಮುಜುಗರಕಾರಿಯಾಗಿ ಮಾತನಾಡಿದ್ದರು. ನಿಮ್ಮ ತಂದೆ-ತಾಯಿ ಲೈಂಗಿಕ ಕ್ರಿಯೆ ನಡೆಸುವುದನ್ನು ನೋಡುತ್ತಲೇ ದಿನ ದೂಡುತ್ತೀರಾ? ಅಥವಾ ನೀವು ಕೂಡ ಅವರೊಂದಿಗೆ ಸೇರಿಕೊಳ್ಳಲು ಬಯಸುತ್ತೀರಾ? ಎಂದು ರಣವೀರ್ ಕೇಳಿದ ಪ್ರಶ್ನೆಗೆ ಆ ಯುವಕ ತಲೆ ತಗ್ಗಿಸಿ ನಿಂತಿದ್ದ. ಇದನ್ನು ಕೇಳಿದ ಇತರೆ ತೀರ್ಪುಗಾರರು ಚಪ್ಪಾಳೆ ತಟ್ಟಿ ನಕ್ಕಿದ್ದರು. ಆದರೆ, ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!