AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜತೆ ನಾನು ಮಾತಾಡುತ್ತೇನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್​ ಯಡಿಯೂರಪ್ಪ ಮುಂದುವರೆಯಲು ಎಂ.ಬಿ.ಪಾಟೀಲ್ ಮತ್ತು ಶಿವಶಂಕರಪ್ಪ ಬೆಂಬಲ ಸೂಚಿಸಿರುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಹಾಗೂ ಶಿವಶಂಕರಪ್ಪ ಜತೆ ಈ ಸಂಬಂಧ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜತೆ ನಾನು ಮಾತಾಡುತ್ತೇನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿದ್ದರಾಮಯ್ಯ
TV9 Web
| Edited By: |

Updated on: Jul 21, 2021 | 11:00 AM

Share

ದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(CM BS Yediyurappa) ಪರ ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ನಾಯಕರು ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ತೆರವುಗೊಳಿಸುತ್ತಾರೆ ಎಂಬ ಮಾತು ಬಲಗೊಳ್ಳೊತ್ತಿದ್ದಂತೆಯೇ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ. ಸದ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್​ ಯಡಿಯೂರಪ್ಪ ಮುಂದುವರೆಯಲು ಎಂ.ಬಿ.ಪಾಟೀಲ್ ಮತ್ತು ಶಿವಶಂಕರಪ್ಪ ಬೆಂಬಲ ಸೂಚಿಸಿರುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಹಾಗೂ ಶಿವಶಂಕರಪ್ಪ ಜತೆ ಈ ಸಂಬಂಧ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಮೌನಕ್ಕೆ ಶರಣಾದ ಸುತ್ತೂರು ಮಠದ ಶ್ರೀಗಳು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ​​ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಬಹುತೇಕ ಎಲ್ಲಾ ಮಠಾಧೀಶರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರ ಪರವಾಗಿ ಮಾತನಾಡುತ್ತಿದ್ದಾರೆ. ಆದರೆ ಸುತ್ತೂರು ಮಠದ ಶ್ರೀಗಳು ಮಾತ್ರ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರೀಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.

ಕೆಲ ದಿನಗಳಿಂದ ಶಕ್ತಿ ಕೇಂದ್ರವಾಗಿದ್ದ ಸುತ್ತೂರು ಮಠಕ್ಕೆ ಸಚಿವರು, ಶಾಸಕರು, ಬಂಡಾಯ ನಾಯಕರು ಭೇಟಿ ನೀಡಿದ್ದರು. ಸಿ.ಪಿ.ಯೋಗೇಶ್ವರ್, ಅರವಿಂದ ಬೆಲ್ಲದ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಆರ್​.ಅಶೋಕ್ ಸೇರಿದಂತೆ ಹಲವು ಬಿಜೆಪಿ‌ ನಾಯಕರು ಕೂಡ ಭೇಟಿ ನೀಡಿದ್ದರು. ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾವುದೇ ಅಭಿಪ್ರಾಯ ನೀಡದ ಸುತ್ತೂರು ಶ್ರೀಗಳ ಈ ಮೌನ ರಾಜ್ಯದಲ್ಲಿ ಕುತೂಹಲ ಉಂಟುಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್​ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉದ್ದೇಶಿಸಿದ್ದ ಬಿಜೆಪಿ ಶಾಸಕಾಂಗ ಸಭೆ ದಿಢೀರ್ ರದ್ದು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ