AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜತೆ ನಾನು ಮಾತಾಡುತ್ತೇನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್​ ಯಡಿಯೂರಪ್ಪ ಮುಂದುವರೆಯಲು ಎಂ.ಬಿ.ಪಾಟೀಲ್ ಮತ್ತು ಶಿವಶಂಕರಪ್ಪ ಬೆಂಬಲ ಸೂಚಿಸಿರುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಹಾಗೂ ಶಿವಶಂಕರಪ್ಪ ಜತೆ ಈ ಸಂಬಂಧ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜತೆ ನಾನು ಮಾತಾಡುತ್ತೇನೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿದ್ದರಾಮಯ್ಯ
TV9 Web
| Edited By: |

Updated on: Jul 21, 2021 | 11:00 AM

Share

ದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(CM BS Yediyurappa) ಪರ ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ನಾಯಕರು ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ತೆರವುಗೊಳಿಸುತ್ತಾರೆ ಎಂಬ ಮಾತು ಬಲಗೊಳ್ಳೊತ್ತಿದ್ದಂತೆಯೇ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ. ಸದ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಬಿ.ಎಸ್​ ಯಡಿಯೂರಪ್ಪ ಮುಂದುವರೆಯಲು ಎಂ.ಬಿ.ಪಾಟೀಲ್ ಮತ್ತು ಶಿವಶಂಕರಪ್ಪ ಬೆಂಬಲ ಸೂಚಿಸಿರುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಹಾಗೂ ಶಿವಶಂಕರಪ್ಪ ಜತೆ ಈ ಸಂಬಂಧ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಮೌನಕ್ಕೆ ಶರಣಾದ ಸುತ್ತೂರು ಮಠದ ಶ್ರೀಗಳು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ​​ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಬಹುತೇಕ ಎಲ್ಲಾ ಮಠಾಧೀಶರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರ ಪರವಾಗಿ ಮಾತನಾಡುತ್ತಿದ್ದಾರೆ. ಆದರೆ ಸುತ್ತೂರು ಮಠದ ಶ್ರೀಗಳು ಮಾತ್ರ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರೀಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.

ಕೆಲ ದಿನಗಳಿಂದ ಶಕ್ತಿ ಕೇಂದ್ರವಾಗಿದ್ದ ಸುತ್ತೂರು ಮಠಕ್ಕೆ ಸಚಿವರು, ಶಾಸಕರು, ಬಂಡಾಯ ನಾಯಕರು ಭೇಟಿ ನೀಡಿದ್ದರು. ಸಿ.ಪಿ.ಯೋಗೇಶ್ವರ್, ಅರವಿಂದ ಬೆಲ್ಲದ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಆರ್​.ಅಶೋಕ್ ಸೇರಿದಂತೆ ಹಲವು ಬಿಜೆಪಿ‌ ನಾಯಕರು ಕೂಡ ಭೇಟಿ ನೀಡಿದ್ದರು. ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾವುದೇ ಅಭಿಪ್ರಾಯ ನೀಡದ ಸುತ್ತೂರು ಶ್ರೀಗಳ ಈ ಮೌನ ರಾಜ್ಯದಲ್ಲಿ ಕುತೂಹಲ ಉಂಟುಮಾಡಿದೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್​ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯವಿಲ್ಲ; ದೆಹಲಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಉದ್ದೇಶಿಸಿದ್ದ ಬಿಜೆಪಿ ಶಾಸಕಾಂಗ ಸಭೆ ದಿಢೀರ್ ರದ್ದು

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?