AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಟೀಕೆಗಳನ್ನು ಅನುಮೋದಿಸುವುದಿಲ್ಲ: ರಾಹುಲ್ ಗಾಂಧಿ ಆರೋಪ ಬಗ್ಗೆ ಯುಎಸ್ ವಕ್ತಾರರ ಪ್ರತಿಕ್ರಿಯೆ 

ಮೆರಿಕದ  ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಈ ಬಗ್ಗೆ ಪಾಕಿಸ್ತಾನ ಮತ್ತು ಚೀನಾ ಮಾತನಾಡಲಿ ಎಂದು ಹೇಳಿದ್ದಾರೆ. ಅದೇ ವೇಳೆ ನಾನು ಖಂಡಿತವಾಗಿಯೂ ಆ ಟೀಕೆಗಳನ್ನು ಅನುಮೋದಿಸುವುದಿಲ್ಲ ಎಂದು ಅವರು ಹೇಳಿದರು.

ಆ ಟೀಕೆಗಳನ್ನು ಅನುಮೋದಿಸುವುದಿಲ್ಲ: ರಾಹುಲ್ ಗಾಂಧಿ ಆರೋಪ ಬಗ್ಗೆ ಯುಎಸ್ ವಕ್ತಾರರ ಪ್ರತಿಕ್ರಿಯೆ 
ನೆಡ್ ಪ್ರೈಸ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Feb 03, 2022 | 12:47 PM

Share

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬಿಜೆಪಿ ನೇತೃತ್ವದ  ಕೇಂದ್ರ  ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿದ್ದು, ಚೀನಾ (China) ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತರುವ ಅಪರಾಧವನ್ನು ಕೇಂದ್ರ ಮಾಡಿದೆ ಎಂದು ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದು, ಆ ಟೀಕೆಗಳನ್ನು ಅನುಮೋದಿಸುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್ ಹೇಳಿದೆ. ಪ್ರಧಾನಿ ನರೇಂದ್ರ ಮೋದಿಯವರ  (Narendra Modi) ನಿಷ್ಪರಿಣಾಮಕಾರಿ ನೀತಿಗಳಿಂದಾಗಿ ಚೀನಾ ಮತ್ತು ಪಾಕಿಸ್ತಾನ ಎಂದಿಗಿಂತಲೂ ನಿಕಟವಾಗಿದೆ ಎಂದು ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅಮೆರಿಕದ  ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ (Ned Price), ಈ ಬಗ್ಗೆ ಪಾಕಿಸ್ತಾನ ಮತ್ತು ಚೀನಾ ಮಾತನಾಡಲಿ ಎಂದು ಹೇಳಿದ್ದಾರೆ. ಅದೇ ವೇಳೆ ನಾನು ಖಂಡಿತವಾಗಿಯೂ ಆ ಟೀಕೆಗಳನ್ನು ಅನುಮೋದಿಸುವುದಿಲ್ಲ ಎಂದು ಅವರು ಹೇಳಿದರು.  ರಾಷ್ಟ್ರಪತಿ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ, “ಚೀನಾ ಒಂದು ಯೋಜನೆಯನ್ನು ಹೊಂದಿದೆ. ಚೀನಿಯರು ತಾವು ಏನು ಮಾಡಬೇಕೆಂದು ಬಹಳ ಸ್ಪಷ್ಟವಾದ ದೃಷ್ಟಿಕೋನವನ್ನು ಹೊಂದಿದ್ದಾರೆ. ಭಾರತದ ವಿದೇಶಾಂಗ ನೀತಿಯ ಏಕೈಕ ದೊಡ್ಡ ಕಾರ್ಯತಂತ್ರದ ಗುರಿಯು ಪಾಕಿಸ್ತಾನ ಮತ್ತು ಚೀನಾವನ್ನು ಪ್ರತ್ಯೇಕವಾಗಿ ಇಡುವುದಾಗಿದೆ. ನೀವು (ಕೇಂದ್ರ) ಏನು ಮಾಡಿದ್ದೀರಿ ಎಂದರೆ ನೀವು ಅವರನ್ನು ಒಟ್ಟಿಗೆ ಸೇರಿಸಿದ್ದೀರಿ ಎಂದು ಹೇಳಿದ್ದರು.

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ವಿದೇಶಾಂಗ ನೀತಿಯು ಭಾರತವನ್ನು ಪ್ರತ್ಯೇಕಿಸಿದೆ ಎಂದು ರಾಹುಲ್ ಆರೋಪಿಸಿದ್ದು ಗಣರಾಜ್ಯೋತ್ಸವದಂದು ನವದೆಹಲಿಗೆ ಅತಿಥಿಯನ್ನು ಕರೆಯಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದರು.  ಭಾರತವು ಸಂಪೂರ್ಣವಾಗಿ ಪ್ರತ್ಯೇಕವಾಗಿದೆ ಎಂದು ಹೇಳಿದ ರಾಹುಲ್, ಚೀನಾವು ಡೋಕ್ಲಾಮ್ ಮತ್ತು ಲಡಾಖ್‌ನಲ್ಲಿ ಜಾರಿಗೆ ತಂದಿರುವ ಸ್ಪಷ್ಟವಾದ ಯೋಜನೆಯನ್ನು ಹೊಂದಿದೆ ಎಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಎಸ್.ಜೈಶಂಕರ್ ತಮ್ಮ  ಟ್ವೀಟ್​​ನಲ್ಲಿ, ಬಹುಶಃ ಕೆಲವು ಇತಿಹಾಸದ ಪಾಠಗಳು ಕ್ರಮದಲ್ಲಿವೆ: 1963 ರಲ್ಲಿ, ಪಾಕಿಸ್ತಾನವು ಶಾಕ್ಸ್ಗಮ್ ಕಣಿವೆಯನ್ನು ಚೀನಾಕ್ಕೆ ಅಕ್ರಮವಾಗಿ ಹಸ್ತಾಂತರಿಸಿತು. ಚೀನಾ 1970 ರ ದಶಕದಲ್ಲಿ ಪಿಒಕೆ ಮೂಲಕ ಕಾರಕೋರಂ ಹೆದ್ದಾರಿಯನ್ನು ನಿರ್ಮಿಸಿತು. 1970 ರ ದಶಕದಿಂದ,ಉಭಯ ದೇಶಗಳು ಸಹ ನಿಕಟ ಪರಮಾಣು ಸಹಯೋಗವನ್ನು ಹೊಂದಿದ್ದವು. 2013 ರಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಪ್ರಾರಂಭವಾಯಿತು. ಹಾಗಾದರೆ, ನಿಮ್ಮಲ್ಲಿ ನೀವೇ ಕೇಳಿಕೊಳ್ಳಿ ಚೀನಾ ಮತ್ತು ಪಾಕಿಸ್ತಾನ ಯಾವಾಗ ದೂರವಾಗಿತ್ತು? ಎಂದು ಕೇಳಿದ್ದಾರೆ.

ಗಣರಾಜ್ಯೋತ್ಸವದಂದು ಅತಿಥಿಗಳನ್ನು ಕರೆತರಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂಬ ರಾಹುಲ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಜೈಶಂಕರ್, ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರು ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಯನ್ನು ಕರೆತರಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ ವಾಸಿಸುವವರಿಗೆ ನಾವು  ಕೊರೊನಾ  ಅಲೆಯ ಮಧ್ಯೆ ಇದ್ದೇವೆ ಎಂದು ತಿಳಿದಿದೆ. ಬರಬೇಕಿದ್ದ 5 ಮಧ್ಯ ಏಷ್ಯಾ ಅಧ್ಯಕ್ಷರು ಜನವರಿ 27 ರಂದು ವರ್ಚುವಲ್ ಶೃಂಗಸಭೆಯನ್ನು ನಡೆಸಿದರು. ರಾಹುಲ್ ಗಾಂಧಿ ಅದನ್ನೂ ತಪ್ಪಿಸಿದ್ದಾರೆಯೇ? ಎಂದು ಟ್ವೀಟ್ ಮಾಡಿ ಕುಟುಕಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ರಾಹುಲ್‌ರನ್ನು ಗೊಂದಲದಿಂದ ಕೂಡಿದ ಮತ್ತು “ಬುದ್ಧಿಹೀನ” ಎಂದು ಕರೆದಿದ್ದಾರೆ. “ಭಾರತವು ಒಂದು ದೇಶವಲ್ಲ. ಚೀನಾದ ದೃಷ್ಟಿ ಬಹಳ ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. ನೀವು ಚೀನಾವನ್ನು ಬೆಂಬಲಿಸಲು ಇಲ್ಲಿಗೆ ಬಂದಿದ್ದೀರಾ? ಟಿಬೆಟ್ ಸಮಸ್ಯೆ ಕಾಂಗ್ರೆಸ್‌ನಿಂದ ಮಾತ್ರ ಆಗಿದ್ದು ಜೋಶಿ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಂತರ ಈ ಬಗ್ಗೆ ಟ್ವೀಟ್ ಮಾಡಿದ ಜೋಶಿ, ಇದು ರಾಹುಲ್ ಗಾಂಧಿಯವರ ಅಜ್ಞಾನವೇ ಅಥವಾ ಉದ್ದೇಶಪೂರ್ವಕ ಕುರುಡುತನವೇ? ದೇಶದ ಸ್ವಾತಂತ್ರ್ಯದ ನಂತರ ಕಾಂಗ್ರೆಸ್​​ನ ನೀತಿಗಳಿಂದಾಗಿ ಚೀನಾ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಆರೋಪಗಳಿಗೆ ಪ್ರತಿಕ್ರಿಯಿಸಿ ಇತಿಹಾಸದ ಪಾಠ ಹೇಳಿದ ವಿದೇಶಾಂಗ ಸಚಿವ ಎಸ್ ಜೈಶಂಕರ್

Published On - 12:45 pm, Thu, 3 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?