AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ನಿಷೇಧ​ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರುವಂತೆ ಕರೆಕೊಟ್ಟ ಅಸಾದುದ್ದೀನ್​ ಓವೈಸಿ

ಹಿಜಾಬ್​ ಕುರಿತಾಗಿ ಕರ್ನಾಟಕ ಹೈಕೋರ್ಟ್​ ನೀಡಿರುವ ತೀರ್ಪನ್ನು ನಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ. ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದವರು, ಮುಂದೆ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸುತ್ತಾರೆ ಎಂಬ ಆಶಯ ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ನಿಷೇಧ​ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರುವಂತೆ ಕರೆಕೊಟ್ಟ ಅಸಾದುದ್ದೀನ್​ ಓವೈಸಿ
ಅಸಾದುದ್ದೀನ್​ ಓವೈಸಿ
TV9 Web
| Edited By: |

Updated on:Mar 15, 2022 | 1:41 PM

Share

ಕರ್ನಾಟಕದಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಚಾಲ್ತಿಯಲ್ಲಿದ್ದ ಹಿಜಾಬ್​ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಅಂತಿಮ ತೀರ್ಪು ನೀಡಿದೆ. ಹಿಜಾಬ್ ಧರಿಸಬೇಕು ಎನ್ನುವುದು​ ಇಸ್ಲಾಂನ ಅತ್ಯಗತ್ಯ ಭಾಗವಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಹೋಗುವಂತಿಲ್ಲ. ಸರ್ಕಾರ ಕಡ್ಡಾಯ ಮಾಡಿರುವ ವಸ್ತ್ರ ಸಂಹಿತೆಯನ್ನೇ ಪಾಲನೆ ಮಾಡಬೇಕು ಎಂದು ಹೇಳಿದೆ. ಅದರ ಬೆನ್ನಲ್ಲೇ ಮುಸ್ಲಿಂ ಮುಖಂಡರು ಈ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬರೀ ರಾಜ್ಯದವರಷ್ಟೇ ಅಲ್ಲ, ಬೇರೆ ರಾಜ್ಯಗಳ ಮುಸ್ಲಿಂ ಪ್ರಮುಖರೂ ಕೂಡ ಟ್ವೀಟ್​ ಮೂಲಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿ AIMIM ಮುಖ್ಯಸ್ಥ, ಹೈದರಾಬಾದ್ ಎಂಪಿ ಅಸಾದುದ್ದೀನ್ ಓವೈಸಿ ಕೂಡ ಒಬ್ಬರು.

ಎರಡು ವಿಚಾರಗಳನ್ನು ಟ್ವೀಟ್​ ಮಾಡಿರುವ ಓವೈಸಿ, ಹಿಜಾಬ್​ ಕುರಿತಾಗಿ ಕರ್ನಾಟಕ ಹೈಕೋರ್ಟ್​ ನೀಡಿರುವ ತೀರ್ಪನ್ನು ನಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ. ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದವರು, ಮುಂದೆ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸುತ್ತಾರೆ ಎಂಬ ಆಶಯ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಮತ್ತು ಇತರ ಮುಸ್ಲಿಂ ಧಾರ್ಮಿಕ ಸಂಘಟನೆಗಳೂ ಕೂಡ ಹೈಕೋರ್ಟ್​ನ ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಬೇಕು ಎಂದೂ ಕರೆ ಕೊಟ್ಟಿದ್ದಾರೆ. ಅಸಾದುದ್ದೀನ್ ಓವೈಸಿ ಕೂಡ ಈ ಮೊದಲೂ ಕರ್ನಾಟಕ ಹಿಜಾಬ್​ ವಿವಾದದ ಬಗ್ಗೆ ಮಾತನಾಡಿದ್ದರು. ಅಷ್ಟೇ ಅಲ್ಲ, ಮುಂದೊಂದು ದಿನ ಹಿಜಾಬ್ ಧರಿಸುವ ಹುಡುಗಿಯೇ ದೇಶದ ಪ್ರಧಾನಮಂತ್ರಿಯಾಗುತ್ತಾಳೆ ಎಂದೂ ಹೇಳಿದ್ದರು.

ಕರ್ನಾಟಕ ಹಿಜಾಬ್​ ವಿವಾದಕ್ಕೆ ಸಂಬಂಧಪಟ್ಟಂತೆ ಕೋರ್ಟ್​ ನೀಡಿರುವ ತೀರ್ಪಿಗೆ ಪ್ರತಿಕ್ರಿಯೆ ನೀಡಿದ ಸುನ್ನಿ ಧರ್ಮಗುರು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಲಿ, ನಾವು ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ಆದರೆ ಇಸ್ಲಾಂನಲ್ಲಿ ಹಿಜಾಬ್​ ಅತ್ಯಗತ್ಯ ಭಾಗವಲ್ಲ ಎಂದು ಹೇಳಿರುವ ಅಂಶವನ್ನು ಒಪ್ಪುವುದಿಲ್ಲ ಎಂದಿದ್ದಾರೆ. ಇಸ್ಲಾಮಿಕ್​ ಸೆಮಿನರಿ ದಾರುಲ್​ ಊಲುಮ್​ ದೇವಬಂದ್​​ನ ವಕ್ತಾರ, ಮೌಲಾನಾ ಸೂಫಿಯಾನ್ ನಿಜಾಮಿ ಕೂಡ ಇದೇ ಅಭಿಪ್ರಾಯ ಹೊರಹಾಕಿದ್ದಾರೆ.

ಇದನ್ನೂ ಓದಿ: ಹೈಕೋರ್ಟ್​ ಸ್ಪಷ್ಟ ತೀರ್ಪು ಹೊರತಾಗಿಯೂ ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನಿಂದ ಹೊರನಡೆದ 35 ವಿದ್ಯಾರ್ಥಿನಿಯರು!

Published On - 1:41 pm, Tue, 15 March 22

Follow Us
Web contact
Web contact

TV9 Kannada

Read More
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ