AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಅವಮಾನಿಸಿ, ಆದರೆ ನನ್ನ ಹುದ್ದೆ, ಸಮುದಾಯದ ಮೇಲಿನ ದಾಳಿಯನ್ನು ಸಹಿಸುವುದಿಲ್ಲ: ಜಗದೀಪ್ ಧನ್ಖರ್

ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರಿ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಆದರೆ ನಾನು ಭಾರತದ ಉಪರಾಷ್ಟ್ರಪತಿ, ರೈತ ಸಮುದಾಯ, ನನ್ನ ಸಮುದಾಯದ ಅವಮಾನ ಸಹಿಸಲಾರೆ... ನನ್ನ ಹುದ್ದೆಯ ಘನತೆಯನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂಬುದನ್ನು ನಾನು ಸಹಿಸುವುದಿಲ್ಲ, ಈ ಸದನದ ಘನತೆಯನ್ನು ಕಾಪಾಡುವುದು ನನ್ನ ಕರ್ತವ್ಯ ಎಂದು ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಖರ್ ಹೇಳಿದ್ದಾರೆ.

ನನ್ನನ್ನು ಅವಮಾನಿಸಿ, ಆದರೆ ನನ್ನ ಹುದ್ದೆ, ಸಮುದಾಯದ ಮೇಲಿನ ದಾಳಿಯನ್ನು ಸಹಿಸುವುದಿಲ್ಲ: ಜಗದೀಪ್ ಧನ್ಖರ್
ಜಗದೀಪ್ ಧನ್ಖರ್
Follow us
ರಶ್ಮಿ ಕಲ್ಲಕಟ್ಟ
|

Updated on: Dec 20, 2023 | 3:12 PM

ದೆಹಲಿ ಡಿಸೆಂಬರ್ 20: ಟಿಎಂಸಿ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ತನ್ನನ್ನು ಅಣಕ ಮಾಡಿದ ಬಗ್ಗೆ ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಖರ್ (Jagdeep Dhankhar) ಅವರು ಬುಧವಾರ ಪ್ರತಿಕ್ರಿಯಿಸಿದ್ದು ನನ್ನನು ಅವಮಾನಿಸಿದರೂ ಪರವಾಗಿಲ್ಲ ಆದರೆ ನನ್ನ ಹುದ್ದೆ, ಅವರ ಸಮುದಾಯದ ಮೇಲೆ ದಾಳಿ ಸಹಿಸುವುದಿಲ್ಲ ಎಂದಿದ್ದಾರೆ. ನೀವು ಜಗದೀಪ್ ಧನ್ಖರ್ ಅವರನ್ನು ಎಷ್ಟು ಅವಮಾನಿಸುತ್ತೀರಿ ಎಂಬುದರ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. ಆದರೆ ನಾನು ಭಾರತದ ಉಪರಾಷ್ಟ್ರಪತಿ, ರೈತ ಸಮುದಾಯ, ನನ್ನ ಸಮುದಾಯದ ಅವಮಾನ ಸಹಿಸಲಾರೆ… ನನ್ನ ಹುದ್ದೆಯ ಘನತೆಯನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂಬುದನ್ನು ನಾನು ಸಹಿಸುವುದಿಲ್ಲ, ಈ ಸದನದ ಘನತೆಯನ್ನು ಕಾಪಾಡುವುದು ನನ್ನ ಕರ್ತವ್ಯ ಎಂದಿದ್ದಾರೆ.

ಅಮಾನತುಗೊಂಡ ಸಂಸದರ ಪ್ರತಿಭಟನೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ, ಸಭಾಪತಿ ಧನ್ಖರ್ ಅವರನ್ನು ಅನುಕರಿಸಿದ್ದು ವಿವಾದವಾಗಿದೆ. ಬ್ಯಾನರ್ಜಿ ಅವರು ರಾಜ್ಯಸಭೆಯ ಸಭಾಪತಿಯ ವರ್ತನೆಯನ್ನು ಅನುಕರಿಸಿದ್ದಾರೆ ಎಂದು ಹೇಳಲಾದ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿವೆ. ಸದನದ ಅಣಕು ಸಿಟ್ಟಿಂಗ್ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಬ್ಯಾನರ್ಜಿ ಅವರ ಅಣಕವನ್ನು ರೆಕಾರ್ಡ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಖರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ಅಗೌರವದ ವರ್ತನೆಯನ್ನು ಖಂಡಿಸಿದ್ದಾರೆ. ಪಿಎಂ ಮೋದಿಯವರ ಫೋನ್ ಕರೆಯನ್ನು ಉಲ್ಲೇಖಿಸಿ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಧನ್ಖರ್ , ನಿನ್ನೆ ಪವಿತ್ರ ಸಂಸತ್ತಿನ ಸಂಕೀರ್ಣದಲ್ಲಿ ಕೆಲವು ಗೌರವಾನ್ವಿತ ಸಂಸದರ ವರ್ತನೆ ಬಗ್ಗೆ ಅವರು ತೀವ್ರ ನೋವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಕೆಲವರ ವರ್ತನೆಗಳು ನನ್ನ ಕರ್ತವ್ಯವನ್ನು ನಿರ್ವಹಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ತತ್ವಗಳನ್ನು ಎತ್ತಿಹಿಡಿಯುವುದನ್ನು ತಡೆಯುವುದಿಲ್ಲ. ನನ್ನ ಹೃದಯದಾಳದಿಂದ ಆ ಮೌಲ್ಯಗಳಿಗೆ ನಾನು ಬದ್ಧನಾಗಿದ್ದೇನೆ. ಯಾವುದೇ ಅವಮಾನಗಳು ನನ್ನ ಹಾದಿಯನ್ನು ಬದಲಾಯಿಸುವುದಿಲ್ಲ ಎಂದು ನಾನು ಪ್ರಧಾನಿಗೆ ಹೇಳಿದೆ ಎಂದಿದ್ದಾರೆ ಧನ್ಖರ್.

ಇದನ್ನೂ ಓದಿಪ್ರತಿಯೊಂದು ವಿಚಾರದಲ್ಲೂ ಜಾತಿ ಎಳೆದು ಜನರನ್ನು ಕೆರಳಿಸಬಾರದು: ಮಲ್ಲಿಕಾರ್ಜುನ ಖರ್ಗೆ

ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರನ್ನು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಣಕಿಸಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದಾರೆ. ಸಂಸತ್ ಆವರಣದಲ್ಲೇ ಧನ್ಖರ್ ಅವರನ್ನು ಅವಮಾನ ಮಾಡಲಾಗಿದೆ. ಚುನಾಯಿತ ಪ್ರತಿನಿಧಿಗಳು ತಮ್ಮನ್ನು ತಾವು ವ್ಯಕ್ತಪಡಿಸಲು ಮುಕ್ತವಾಗಿರಬೇಕು, ಆದರೆ ಅವರ ಅಭಿವ್ಯಕ್ತಿ “ಗೌರವ ಮತ್ತು ಸೌಜನ್ಯದ ಮಾನದಂಡಗಳ” ಒಳಗಿರಬೇಕು ಎಂದು ಮುರ್ಮು ಒತ್ತಿ ಹೇಳಿದ್ದಾರೆ.

ನಮ್ಮ ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡೆ. ಚುನಾಯಿತ ಪ್ರತಿನಿಧಿಗಳು ತಮ್ಮನ್ನು ತಾವು ವ್ಯಕ್ತಪಡಿಸಲು ಮುಕ್ತವಾಗಿರಬೇಕು, ಆದರೆ ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳೊಳಗೆ ಇರಬೇಕು. ಅದು ನಾವು ಹೆಮ್ಮೆಪಡುವ ಸಂಸದೀಯ ಸಂಪ್ರದಾಯವಾಗಿದೆ. ಭಾರತದ ಜನರು ಅದನ್ನು ಎತ್ತಿಹಿಡಿಯುತ್ತಾರೆ ಎಂದು ನಿರೀಕ್ಷಿಸುತ್ತಾರೆ ”ಎಂದು ಮುರ್ಮು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್