AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಗೋಮಾಂಸ ಸೇವಿಸುವುದಿಲ್ಲ, ನಾನು ‘ಹೆಮ್ಮೆಯ ಹಿಂದೂ’ : ಕಂಗನಾ ರಣಾವತ್

ಕಂಗನಾ ತಮ್ಮ ಎಕ್ಸ್​​​ ಖಾತೆಯಲ್ಲಿ ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು ಎಕ್ಸ್​​ನಲ್ಲಿ ಹೇಳಿಕೆ ನೀಡಿದರು.

ನಾನು ಗೋಮಾಂಸ ಸೇವಿಸುವುದಿಲ್ಲ, ನಾನು 'ಹೆಮ್ಮೆಯ ಹಿಂದೂ' : ಕಂಗನಾ ರಣಾವತ್
ಕಂಗನಾ ರಣಾವತ್
ಅಕ್ಷಯ್​ ಪಲ್ಲಮಜಲು​​
|

Updated on:Apr 08, 2024 | 11:04 AM

Share

ದೆಹಲಿ, ಎ.8: ನಟಿ ಕಂಗನಾ ರಣಾವತ್ (Kangana Ranaut) ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿದ್ದಾರೆ. ಈ ಹಿಂದೆಯೂ ಅವರು ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಚಾರಗಳಿಂದ ಸುದ್ದಿಯಾಗಿತ್ತಿದ್ದರು. ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸುದ್ದಿಯಾಗುತ್ತಿದ್ದಾರೆ. ಕಂಗನಾ ತಮ್ಮ ಎಕ್ಸ್​​​ ಖಾತೆಯಲ್ಲಿ ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಕೆಂಪು ಮಾಂಸವನ್ನು ಸೇವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು ಎಕ್ಸ್​​ನಲ್ಲಿ ಹೇಳಿಕೆ ನೀಡಿದರು. ಈ ಹೇಳಿಕೆಯಿಂದ ಎಕ್ಸ್​​ನಲ್ಲಿ​​​ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅವರ ಹೇಳಿಕೆಗೆ ಎಕ್ಸ್​ನಲ್ಲೇ ಕಂಗನಾ ತಿರುಗೇಟು ನೀಡಿದ್ದಾರೆ.

ನನ್ನ ವಿರುದ್ಧ ಸಂಪೂರ್ಣ ಆಧಾರರಹಿತ ವದಂತಿಗಳು ಮಾಡಲಾಗುತ್ತಿದೆ. ಅವುಗಳು ‘ನಾಚಿಕೆಗೇಡಿನ’ ವಿಚಾರ ಎಂದು ಹೇಳಿದ್ದಾರೆ. ನಾನು ದಶಕಗಳಿಂದ ಯೋಗ ಮತ್ತು ಆಯುರ್ವೇದ ಜೀವನ ವಿಧಾನವನ್ನು ಪಾಲಿಸುತ್ತಿದ್ದೇನೆ ಹಾಗೂ ಪ್ರಚಾರ ಮಾಡುತ್ತಿದ್ದೇನೆ. ಆದರೆ ಇದೀಗ ನನ್ನ ಮೇಲೆ ಕೆಟ್ಟ ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಆರೋಪಗಳಿಂದ ನನ್ನ ಇಮೇಜ್​​​ನ್ನು ಹಾಳು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನನ್ನ ಜನರಿಗೆ ನಾನು ‘ಹೆಮ್ಮೆಯ ಹಿಂದೂ’ ಎಂದು ಗೊತ್ತಿದೆ. ನನ್ನ ಮೇಲೆ ಇಂತಹ ಆರೋಪಗಳನ್ನು ಮಾಡಿ ಅವರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ, ‘ಜೈ ಶ್ರೀ ರಾಮ್’ ಎಂದು ನಟಿ ಕಂಗನಾ ರಣಾವತ್ ಎಕ್ಸ್​​ನಲ್ಲಿ ಟ್ವೀಟ್​​​ ಮಾಡಿದ್ದಾರೆ. ಇನ್ನು ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿಯ ಶೈನಾ ಎನ್‌ಸಿ ವಿಜಯ್ ವಾಡೆಟ್ಟಿವಾರ್ ಅವರು ಮಹಾರಾಷ್ಟ್ರದ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಅವರು ಕಂಗನಾ ರಣಾವತ್ ಅವರಿಗೆ ಗೋಮಾಂಸ ತಿನ್ನುವ ಕಾರಣಕ್ಕಾಗಿ ಟಿಕೆಟ್ ನೀಡಲಾಗಿದೆ ಎಂದು ಹೇಳುವ ಧೈರ್ಯವಿದೆ. ಕಾಂಗ್ರೆಸ್ ಇಂತಹ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:45 am, Mon, 8 April 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!