AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವನ್ನು ಪ್ರಶ್ನಿಸಿದ್ದೇ ಹೊರತು, ಸಂಶೋಧಕರನ್ನಲ್ಲ: ಅಖಿಲೇಶ್ ಯಾದವ್ ಸ್ಪಷ್ಟನೆ

ತಮ್ಮ ಹೇಳಿಕೆ ತೀವ್ರ ವಿವಾದಕ್ಕೀಡಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸ್ಪಷ್ಟನೆ ನೀಡಿದ್ದಾರೆ. ಸಂಶೋಧಕರ ಶ್ರಮದ ಮೇಲೆ ತಮಗೆ ನಂಬಿಕೆಯಿದೆಯೆಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರವನ್ನು ಪ್ರಶ್ನಿಸಿದ್ದೇ ಹೊರತು, ಸಂಶೋಧಕರನ್ನಲ್ಲ: ಅಖಿಲೇಶ್ ಯಾದವ್ ಸ್ಪಷ್ಟನೆ
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್
guruganesh bhat
| Edited By: |

Updated on: Jan 04, 2021 | 7:36 PM

Share

ಲಖನೌ: ಕೊರೊನಾ ಲಸಿಕೆ ಕುರಿತ ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆದಂತೆಯೇ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸ್ಪಷ್ಟನೆ ನೀಡಿದ್ದಾರೆ. ತಾವು ಬಿಜೆಪಿಯ ಲಸಿಕೆ ರಾಜಕೀಯಕ್ಕೆ ಪ್ರತಿರೋಧ ನೀಡಿದ್ದೇ ಹೊರತು, ಲಸಿಕೆಗಾಗಿ ಶ್ರಮಿಸಿದ ಸಂಶೋಧಕರನ್ನು ಪ್ರಶ್ನಿಸಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೊರೊನಾ ಲಸಿಕೆ ವಿತರಣೆ ಯೋಜನೆಯ ಕುರಿತು ಮಾತನಾಡುತ್ತ, ಬಿಜೆಪಿ ಸರ್ಕಾರ ಒದಗಿಸುವ ಲಸಿಕೆ ಮೇಲೆ ನಂಬಿಕೆಯಿಲ್ಲ. ನಾನಂತೂ ಬಿಜೆಪಿ ಲಸಿಕೆ ಪಡೆಯುವುದಿಲ್ಲ ಎಂದು ಅವರು ಹೇಳಿದ್ದರು. ಅವರ ಮಾತು ದೇಶದಾದ್ಯಂತ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಅಖಿಲೇಶ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಸಮಾಜವಾದಿ ಪಕ್ಷವು ಲಸಿಕೆ ಕಂಡುಹಿಡಿದ ಸಂಶೋಧಕರನ್ನು ಅನುಮಾನಿಸಿಲ್ಲ. ನಮಗೆ ಸಂಶೋಧಕರ ಮೇಲೆ ಬಲವಾದ ನಂಬಿಕೆಯಿದೆ. ಲಸಿಕೆ ಕುರಿತು ಹುಟ್ಟುವ ಎಲ್ಲ ಅನುಮಾನಗಳನ್ನು ಪರಿಹರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅನುಮಾನ ಪರಿಹರಿಸಿಕೊಳ್ಳುವ ಉದ್ದೇಶದೊಂದಿಗೆ ಲಸಿಕೆ ಕುರಿತು ಅನುಮಾನ ವ್ಯಕ್ತಪಡಿಸಿದ್ದೇನೆ ಎಂದು ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಕೊರೊನಾ ಲಸಿಕೆಯನ್ನು ಉಚಿತವಾಗಿ ಹಂಚಲಾಗುವುದು ಎಂದೂ ಅವರು ಘೋಷಿಸಿದ್ದರು.

BJP ಸರ್ಕಾರ ವಿತರಿಸುವ ಕೊರೊನಾ ಲಸಿಕೆಯನ್ನು ನಾನಂತೂ ಪಡೆಯುವುದಿಲ್ಲ: ಅಖಿಲೇಶ್ ಯಾದವ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ