AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವನ್ನು ಪ್ರಶ್ನಿಸಿದ್ದೇ ಹೊರತು, ಸಂಶೋಧಕರನ್ನಲ್ಲ: ಅಖಿಲೇಶ್ ಯಾದವ್ ಸ್ಪಷ್ಟನೆ

ತಮ್ಮ ಹೇಳಿಕೆ ತೀವ್ರ ವಿವಾದಕ್ಕೀಡಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸ್ಪಷ್ಟನೆ ನೀಡಿದ್ದಾರೆ. ಸಂಶೋಧಕರ ಶ್ರಮದ ಮೇಲೆ ತಮಗೆ ನಂಬಿಕೆಯಿದೆಯೆಂದು ಸ್ಪಷ್ಟಪಡಿಸಿದ್ದಾರೆ.

ಸರ್ಕಾರವನ್ನು ಪ್ರಶ್ನಿಸಿದ್ದೇ ಹೊರತು, ಸಂಶೋಧಕರನ್ನಲ್ಲ: ಅಖಿಲೇಶ್ ಯಾದವ್ ಸ್ಪಷ್ಟನೆ
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್
guruganesh bhat
| Edited By: |

Updated on: Jan 04, 2021 | 7:36 PM

Share

ಲಖನೌ: ಕೊರೊನಾ ಲಸಿಕೆ ಕುರಿತ ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆದಂತೆಯೇ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸ್ಪಷ್ಟನೆ ನೀಡಿದ್ದಾರೆ. ತಾವು ಬಿಜೆಪಿಯ ಲಸಿಕೆ ರಾಜಕೀಯಕ್ಕೆ ಪ್ರತಿರೋಧ ನೀಡಿದ್ದೇ ಹೊರತು, ಲಸಿಕೆಗಾಗಿ ಶ್ರಮಿಸಿದ ಸಂಶೋಧಕರನ್ನು ಪ್ರಶ್ನಿಸಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೊರೊನಾ ಲಸಿಕೆ ವಿತರಣೆ ಯೋಜನೆಯ ಕುರಿತು ಮಾತನಾಡುತ್ತ, ಬಿಜೆಪಿ ಸರ್ಕಾರ ಒದಗಿಸುವ ಲಸಿಕೆ ಮೇಲೆ ನಂಬಿಕೆಯಿಲ್ಲ. ನಾನಂತೂ ಬಿಜೆಪಿ ಲಸಿಕೆ ಪಡೆಯುವುದಿಲ್ಲ ಎಂದು ಅವರು ಹೇಳಿದ್ದರು. ಅವರ ಮಾತು ದೇಶದಾದ್ಯಂತ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಅಖಿಲೇಶ್ ಯಾದವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಸಮಾಜವಾದಿ ಪಕ್ಷವು ಲಸಿಕೆ ಕಂಡುಹಿಡಿದ ಸಂಶೋಧಕರನ್ನು ಅನುಮಾನಿಸಿಲ್ಲ. ನಮಗೆ ಸಂಶೋಧಕರ ಮೇಲೆ ಬಲವಾದ ನಂಬಿಕೆಯಿದೆ. ಲಸಿಕೆ ಕುರಿತು ಹುಟ್ಟುವ ಎಲ್ಲ ಅನುಮಾನಗಳನ್ನು ಪರಿಹರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅನುಮಾನ ಪರಿಹರಿಸಿಕೊಳ್ಳುವ ಉದ್ದೇಶದೊಂದಿಗೆ ಲಸಿಕೆ ಕುರಿತು ಅನುಮಾನ ವ್ಯಕ್ತಪಡಿಸಿದ್ದೇನೆ ಎಂದು ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಕೊರೊನಾ ಲಸಿಕೆಯನ್ನು ಉಚಿತವಾಗಿ ಹಂಚಲಾಗುವುದು ಎಂದೂ ಅವರು ಘೋಷಿಸಿದ್ದರು.

BJP ಸರ್ಕಾರ ವಿತರಿಸುವ ಕೊರೊನಾ ಲಸಿಕೆಯನ್ನು ನಾನಂತೂ ಪಡೆಯುವುದಿಲ್ಲ: ಅಖಿಲೇಶ್ ಯಾದವ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!