AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ನಲ್ಲಿ ಮಾತನಾಡಲು ಅವಕಾಶ ನೀಡುತ್ತಾರೆ ಎಂದು ನನಗನಿಸುವುದಿಲ್ಲ: ರಾಹುಲ್ ಗಾಂಧಿ

ನಾನು ಸಂಸದನಾಗಿರುವುದರಿಂದ ಸಂಸತ್ತಿನಲ್ಲಿ ಭಾಷಣ ಮಾಡುವುದು ನನ್ನ ಮೊದಲ ಜವಾಬ್ದಾರಿಯಾಗಿದೆ. ಸಂಸತ್ತಿನಲ್ಲಿ ಮಾತನಾಡುವ ಮೊದಲು ಈ ಬಗ್ಗೆ ಮಾಧ್ಯಮಗಳೊಂದಿಗೆ ವಿವರವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಸಂಸದನಾಗಿ ಸಂಸತ್ತು ನನ್ನ ವೇದಿಕೆ ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ರಾಹುಲ್ ಹೇಳಿದ್ದಾರೆ.

ಸಂಸತ್​​ನಲ್ಲಿ ಮಾತನಾಡಲು ಅವಕಾಶ ನೀಡುತ್ತಾರೆ ಎಂದು ನನಗನಿಸುವುದಿಲ್ಲ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Mar 16, 2023 | 5:30 PM

Share

ನಾಲ್ವರು ಕೇಂದ್ರ ಸಚಿವರು ತಮ್ಮ ವಿರುದ್ಧ ಎತ್ತಿರುವ ಆರೋಪಗಳಿಗೆ ಉತ್ತರ ನೀಡಿ ಮಾತನಾಡುವ ಭರವಸೆಯೊಂದಿಗೆ ನಾನು ಸಂಸತ್​​ಗೆ(Parliament) ಬಂದಿದ್ದೆ. ಬಂದ ಒಂದು ನಿಮಿಷದಲ್ಲಿ ಸಂಸತ್ತನ್ನು ಮುಂದೂಡಲಾಗಿದೆ ಎಂದು ರಾಹುಲ್ ಗಾಂಧಿ (Rahul Gandhi) ಗುರುವಾರ ಹೇಳಿದ್ದಾರೆ. ನಿಮ್ಮ  ದುರದೃಷ್ಟ, ನಾನು ಸಂಸತ್ತಿನ ಸದಸ್ಯನಾಗಿದ್ದೇನೆ ಮತ್ತು ನಾಲ್ವರು ಸಚಿವರು ಸಂಸತ್ತಿನಲ್ಲಿ ಆರೋಪ ಮಾಡಿರುವುದರಿಂದ, ಮಾತನಾಡಲು ಅವಕಾಶ ಪಡೆಯುವುದು ನನ್ನ ಪ್ರಜಾಸತ್ತಾತ್ಮಕ ಹಕ್ಕು. ಭಾರತೀಯ ಪ್ರಜಾಪ್ರಭುತ್ವ (Indian democracy) ಕಾರ್ಯನಿರ್ವಹಿಸುತ್ತಿದ್ದರೆ, ನಾನು ಸಂಸತ್ತಿನಲ್ಲಿ ಮಾತನಾಡಲು ಸಾಧ್ಯವಾಗುತ್ತದೆ. ನೀವು ನೋಡುತ್ತಿರುವುದು ಭಾರತೀಯ ಪ್ರಜಾಪ್ರಭುತ್ವದ ಪರೀಕ್ಷೆಯಾಗಿದೆ. ಬಿಜೆಪಿಯ ನಾಲ್ವರು ನಾಯಕರು ಸಂಸತ್ ಸದಸ್ಯನ ಬಗ್ಗೆ ಆರೋಪ ಮಾಡಿದ ನಂತರ, ಆ ನಾಲ್ವರು ಸಚಿವರಿಗೆ ನೀಡಿದ ಜಾಗವನ್ನೇ ಸಂಸತ್ ಸದಸ್ಯರಿಗೂ ನೀಡಲಿದ್ದಾರಾ ಅಥವಾ ಮಾತನಾಡಬೇಡಿ ಎಂದು ಹೇಳುತ್ತಾರಾ ನೋಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ನಾನು ಇಂದು ಸಂಸತ್ತಿಗೆ ಹೋಗಿದ್ದೆ. ನಾಲ್ವರು ಸಚಿವರು ಮಾಡಿರುವ ಆರೋಪಗಳ ವಿರುದ್ಧ ಸಂಸತ್ತಿನಲ್ಲಿ ಮಾತನಾಡಲು ನಾನು ಬಯಸುತ್ತೇನೆ ಎಂದು ಸ್ಪೀಕರ್​​ಗೆ ಹೇಳಿದೆ. ಅಲ್ಲಿ ಯಾವುದೇ ಸ್ಪಷ್ಟ ಮಾಹಿತಿ ನನಗೆ ಸಿಕ್ಕಿಲ್ಲ. ಅಲ್ಲಿ ನನಗೆ ಮಾತನಾಡಲು ಅವಕಾಶ ನೀಡುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೂ ನಾನು ನಾಳೆ ನನಗೆ ಮಾತನಾಡಲು ಅವಕಾಶ ಸಿಗುತ್ತದೆ ಎಂದು ಭಾವಿಸುತ್ತೇನೆ, ಇಂದು ನಾನು ಆಗಮಿಸಿದ 1 ನಿಮಿಷದಲ್ಲಿ ಸದನವನ್ನು ಮುಂದೂಡಲಾಯಿತು ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿಯವರು ಅದಾನಿ ಕುರಿತು ಮಾಡಿದ ಸಂಸತ್ತಿನ ಭಾಷಣದಿಂದ ಇಡೀ ವಿಷಯ ಪ್ರಾರಂಭವಾಗಿತ್ತು.”ಇಡೀ ಪ್ರಯತ್ನವು ಅದಾನಿ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯುವುದು. ಅವರು ಸಂಸತ್ತಿನಲ್ಲಿ ಮಾತನಾಡಲು ನನಗೆ ಅವಕಾಶ ನೀಡುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಮೇಜಿನ ಮೇಲಿರುವ ಪ್ರಮುಖ ವಿಷಯಗಳು ಒಂದೇ ಆಗಿರುತ್ತವೆ. ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವೇನು? ಏಕೆ? ರಕ್ಷಣಾ ಗುತ್ತಿಗೆಯನ್ನು ಅದಾನಿಗೆ ನೀಡಲಾಗುತ್ತಿದೆಯೇ? ಶ್ರೀಲಂಕಾ ಮತ್ತು ಬಾಂಗ್ಲಾದೇಶದಲ್ಲಿ ಅದಾನಿ ಪರ ಮಾತನಾಡಿದ್ದು ಯಾರು? ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ, ಎಸ್‌ಬಿಐ ಅಧ್ಯಕ್ಷ ಮತ್ತು ಅದಾನಿ ಸಭೆ ಏಕೆ ನಡೆಯಿತು? ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ಇದನ್ನೂ ಓದಿ: Rahul Gandhi: ನಾನು ಲಂಡನ್​​ನಲ್ಲಿ ಭಾರತದ ವಿರುದ್ಧ ಏನನ್ನೂ ಹೇಳಿಲ್ಲ: ರಾಹುಲ್ ಗಾಂಧಿ

ನಾನು ಸಂಸದನಾಗಿರುವುದರಿಂದ ಸಂಸತ್ತಿನಲ್ಲಿ ಭಾಷಣ ಮಾಡುವುದು ನನ್ನ ಮೊದಲ ಜವಾಬ್ದಾರಿಯಾಗಿದೆ. ಸಂಸತ್ತಿನಲ್ಲಿ ಮಾತನಾಡುವ ಮೊದಲು ಈ ಬಗ್ಗೆ ಮಾಧ್ಯಮಗಳೊಂದಿಗೆ ವಿವರವಾಗಿ ಚರ್ಚಿಸಲು ನಾನು ಬಯಸುವುದಿಲ್ಲ. ಸಂಸದನಾಗಿ ಸಂಸತ್ತು ನನ್ನ ವೇದಿಕೆ ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ರಾಹುಲ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ನೀಡಿದ ಹೇಳಿಕೆಗೆ ಕಾಂಗ್ರೆಸ್ ನಾಯಕರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸಂಸದರು ಪಟ್ಟು ಹಿಡಿದಿದ್ದಾರೆ. ರಾಹುಲ್ ವಿದೇಶಿ ನೆಲದಲ್ಲಿ ಭಾರತೀಯ ಪ್ರಜಾಪ್ರಭುತ್ವವನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು ಭಾರತದ ವಿರುದ್ಧ ಏನನ್ನೂ ಹೇಳಿಲ್ಲ ಎಂದು ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ