AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟಿಂಗ್ ನಡೆಯುವಾಗಲೇ ಮಾನಸಿಕ ಒತ್ತಡದಿಂದ ಆಫೀಸ್ ಕಟ್ಟಡದಿಂದ ಹಾರಿ ಸಾವನ್ನಪ್ಪಿದ ಟೆಕ್ಕಿ

'ನಾನು ಜೀವನದಲ್ಲಿ ಎಲ್ಲೆಡೆ ವಿಫಲನಾಗಿದ್ದೇನೆ' ಎಂದು ಪುಣೆಯ ಟೆಕ್ಕಿ ಆಫೀಸ್ ಮೀಟಿಂಗ್ ಮಧ್ಯದಲ್ಲೇ ಎದ್ದು ಹೋಗಿ ಕಟ್ಟಡದಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ನಾಸಿಕ್ ಮೂಲದ ವಾಕಾಡ್ ನಿವಾಸಿ ಪಿಯೂಷ್ ಕವಾಡೆ ಎಂದು ಗುರುತಿಸಲಾಗಿದೆ. ಹಿಂಜಾವಾಡಿ ಪೊಲೀಸ್ ಠಾಣೆಯ ಮುಖ್ಯಸ್ಥರಾಗಿರುವ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಾಜಿ ಪಂಧಾರೆ ಅವರ ಪ್ರಕಾರ, ಕವಾಡೆ ಕಳೆದ ವರ್ಷ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಮೀಟಿಂಗ್ ನಡೆಯುವಾಗಲೇ ಮಾನಸಿಕ ಒತ್ತಡದಿಂದ ಆಫೀಸ್ ಕಟ್ಟಡದಿಂದ ಹಾರಿ ಸಾವನ್ನಪ್ಪಿದ ಟೆಕ್ಕಿ
Piyush Kawade
ಸುಷ್ಮಾ ಚಕ್ರೆ
|

Updated on: Jul 29, 2025 | 11:40 AM

Share

ಪುಣೆ, ಜುಲೈ 29: ಒಂದು ದುರಂತ ಘಟನೆಯಲ್ಲಿ 23 ವರ್ಷದ ವ್ಯಕ್ತಿಯೊಬ್ಬರು ಹಿಂಜಾವಾಡಿ ಹಂತ 1ರಲ್ಲಿರುವ ಅಟ್ಲಾಸ್ ಕಾಪ್ಕೊ ಜಿಇಸಿಐಎಯ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೀಟಿಂಗ್ ಸಮಯದಲ್ಲಿ ಮಾನಸಿಕ ಒತ್ತಡ (Mental Stress) ಅನುಭವಿಸಿದ ಟೆಕ್ಕಿ, ಹಿಂಜಾವಾಡಿಯ ಕಚೇರಿಯ ಕಟ್ಟಡದಿಂದ ಹಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಪುಣೆಯ ಹಿಂಜಾವಾಡಿ ಐಟಿ ಪಾರ್ಕ್‌ನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಐಟಿ ಎಂಜಿನಿಯರ್ ಸೋಮವಾರ ಬೆಳಿಗ್ಗೆ ತಮ್ಮ ಕಚೇರಿ ಕಟ್ಟಡದ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪಿಯೂಷ್ ಅಶೋಕ್ ಕವಾಡೆ ಎಂದು ಗುರುತಿಸಲಾಗಿದ್ದು, ಹಿಂಜಾವಾಡಿ ಒಂದನೇ ಹಂತದ ಅಟ್ಲಾಸ್ ಕಾಪ್ಕೊದಲ್ಲಿ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಉದ್ಯೋಗದಲ್ಲಿದ್ದರು.

ಈ ಘಟನಾ ಸ್ಥಳದಲ್ಲಿ ಕೈಬರಹದ ಸೂಸೈಡ್ ನೋಟ್ ಪತ್ತೆಯಾಗಿದೆ. ಪಿಯೂಷ್ ತೀವ್ರ ವಿಷಾದ ಮತ್ತು ವೈಯಕ್ತಿಕ ವೈಫಲ್ಯದ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. “ನಾನು ಜೀವನದಲ್ಲಿ ಎಲ್ಲೆಡೆ ವಿಫಲನಾಗಿದ್ದೇನೆ. ನನ್ನನ್ನು ಕ್ಷಮಿಸಿ” ಎಂದು ಅವರು ಬರೆದಿದ್ದಾರೆ. ಮೂಲತಃ ನಾಸಿಕ್‌ನವರಾದ ಪಿಯೂಷ್ ಮೀಟಿಂಗ್​​ನಲ್ಲಿ ಭಾಗವಹಿಸಿದ್ದಾಗ ಎದೆನೋವು ಎಂದು ಹೇಳಿ ಇದ್ದಕ್ಕಿದ್ದಂತೆ ಕ್ಷಮೆ ಯಾಚಿಸಿ ಟೆರೇಸ್‌ಗೆ ಹೋಗಿ ಈ ಭೀಕರ ಕೃತ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಸೆಂಟ್ರಲ್ ಇಂಟಲಿಜೆನ್ಸ್​​ ಸಿಬ್ಬಂದಿ ಆತ್ಮಹತ್ಯೆ, ಮಗನ ತಿಥಿ ದಿನವೇ ತಾಯಿ ನೇಣಿಗೆ ಶರಣು!

ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಘಟನೆ ಸೋಮವಾರ ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದ್ದು, ಸಹೋದ್ಯೋಗಿಗಳು ಮತ್ತು ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ. “ಅವರು ಎದೆನೋವು ಎಂದು ಹೇಳಿಕೊಂಡು ಸಭೆಯಿಂದ ಅರ್ಧದಲ್ಲೇ ಹೊರಟರು. ಅದಾದ ಕೆಲವೇ ನಿಮಿಷಗಳ ನಂತರ ಏಳನೇ ಮಹಡಿಯಿಂದ ಹಾರಿದರು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸತ್ತ ಅಮ್ಮ ಕನಸಿನಲ್ಲಿ ಬಂದು ಕರೆದಳೆಂದು ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕ!

“ನಾವು ಸಹೋದ್ಯೋಗಿಗಳೊಂದಿಗೆ ಮಾತನಾಡುತ್ತಿದ್ದೇವೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಟಿಪ್ಪಣಿಯಲ್ಲಿ ಕೆಲಸದ ಸ್ಥಳದ ಸಮಸ್ಯೆಗಳನ್ನು ಉಲ್ಲೇಖಿಸದಿದ್ದರೂ, ಈ ಕೃತ್ಯಕ್ಕೆ ಕಾರಣವಾಗಿರಬಹುದಾದ ಎಲ್ಲಾ ಸಂಭಾವ್ಯ ಕಾರಣಗಳನ್ನು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!