AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇರಲಿಲ್ಲ: ಪಂಜಾಬ್ ಸಿಎಂ ಚರಣ್​ಜಿ​ತ್ ಸಿಂಗ್ ಚನ್ನಿ

ಸಿಧು ರಾಜೀನಾಮೆ ಬಗ್ಗೆ ಕೇಳಿದಾಗ ಈ ವಿಷಯದ ಬಗ್ಗೆ "ಯಾವುದೇ ಮಾಹಿತಿ ಇಲ್ಲ" ಎಂದು ಅವರು ಹೇಳಿದರು. ಪಂಜಾಬ್‌ನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಸಿಧು ಅಸಮಾಧಾನ ಹೊಂದಿದ್ದರೇ ಎಂದು ಕೇಳಿದಾಗ "ಅವರು ಅಸಮಾಧಾನಗೊಂಡರೆ ಅದು ಬಗೆಹರಿಯುತ್ತದೆ. ಅವರು ನನ್ನೊಂದಿಗೆ ಅಸಮಾಧಾನ ಹೊಂದಿಲ್ಲ" ಎಂದಿದ್ದಾರೆ ಚನ್ನಿ.

ಸಿಧು ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇರಲಿಲ್ಲ: ಪಂಜಾಬ್ ಸಿಎಂ ಚರಣ್​ಜಿ​ತ್ ಸಿಂಗ್ ಚನ್ನಿ
ಚರಣ್​ಜಿತ್ ಸಿಂಗ್ ಚನ್ನಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 28, 2021 | 6:40 PM

Share

ಚಂಡೀಗಢ: ಕೆಲವು ಗಂಟೆಗಳ ಹಿಂದೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಮೇಲೆ ಸಂಪೂರ್ಣ ವಿಶ್ವಾಸ ಮತ್ತು ನಂಬಿಕೆ ಇದೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್​ಜಿ​ತ್ ಸಿಂಗ್ ಚನ್ನಿ (Charanjit Singh Channi) ಮಂಗಳವಾರ ಹೇಳಿದ್ದಾರೆ. “ನಾನು (ನವಜೋತ್ ಸಿಂಗ್) ಸಿಧು ಸಾಹಬ್ ಮೇಲೆ ಸಂಪೂರ್ಣ ವಿಶ್ವಾಸ ಮತ್ತು ನಂಬಿಕೆಯನ್ನು ಹೊಂದಿದ್ದೇನೆ” ಎಂದು ಚನ್ನಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರದಲ್ಲಿ ಸಿಧು, “ರಾಜಿ ಮೂಲೆಯಿಂದ ಮನುಷ್ಯನ ಸ್ವಭಾವದ ಕುಸಿತ ಉಂಟಾಗುತ್ತದೆ, ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದಿದ್ದರು.

ಏತನ್ಮಧ್ಯೆ, ಸಿಧು ರಾಜೀನಾಮೆ ಬಗ್ಗೆ ಕೇಳಿದಾಗ ಈ ವಿಷಯದ ಬಗ್ಗೆ “ಯಾವುದೇ ಮಾಹಿತಿ ಇಲ್ಲ” ಎಂದು ಅವರು ಹೇಳಿದರು. ಪಂಜಾಬ್‌ನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಸಿಧು ಅಸಮಾಧಾನ ಹೊಂದಿದ್ದರೇ ಎಂದು ಕೇಳಿದಾಗ “ಅವರು ಅಸಮಾಧಾನಗೊಂಡರೆ ಅದು ಬಗೆಹರಿಯುತ್ತದೆ. ಅವರು ನನ್ನೊಂದಿಗೆ ಅಸಮಾಧಾನ ಹೊಂದಿಲ್ಲ” ಎಂದಿದ್ದಾರೆ ಚನ್ನಿ.

ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತಿಂಗಳುಗಳ ಗೊಂದಲದ ನಂತರ ಸಿಧು ಅವರನ್ನು ಜುಲೈ 23 ರಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (PPCC) ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸೆಪ್ಟೆಂಬರ್ 18 ರಂದು ರಾಜೀನಾಮೆ ನೀಡದ್ದು ಮಂಗಳವಾರ ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಮುನ್ನ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಮರಿಂದರ್ ಸಿಂಗ್ ಅವರ ದೆಹಲಿ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಚನ್ನಿ ಹೇಳಿದರು: “ಕೋಯಿ ಗಲ್ ನಹೀ,” ಕ್ಯಾಪ್ಟನ್ ಸಾಹಬ್ ನಮ್ಮ ಮುಖ್ಯಮಂತ್ರಿಯಾಗಿದ್ದರು, ಸಮಸ್ಯೆ ಇಲ್ಲ .ಅವರು ಪಂಜಾಬ್ ಸಮಸ್ಯೆಗಳನ್ನು ಚರ್ಚಿಸಲು ಅಲ್ಲಿಗೆ (ದೆಹಲಿ) ಹೋಗಿರಬೇಕು ಎಂದಿದ್ದಾರೆ.

ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು ಇದು (ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ) ಗಂಭೀರ ಸಮಸ್ಯೆಯಾಗಿದೆ, ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪಂಜಾಬ್ ಒಂದು ಗಡಿ ರಾಜ್ಯವಾಗಿದ್ದು ಅದನ್ನು ಇನ್ನೊಂದು ಜಮ್ಮು ಮತ್ತು ಕಾಶ್ಮೀರವನ್ನಾಗಿ ಮಾಡಬಾರದು ಎಂದಿದ್ದಾರೆ.

ಪಂಜಾಬ್ ಕಾಂಗ್ರೆಸ್ ಖಜಾಂಚಿ ಹುದ್ದೆಯಿಂದ ಕೆಳಗಿಳಿದ ಗುಲ್ಜಾರ್ ಇಂದರ್ ಚಹಲ್ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ನಂತರ ಗುಲ್ಜಾರ್ ಇಂದರ್ ಚಹಲ್ ಪಂಜಾಬ್ ಕಾಂಗ್ರೆಸ್ ಖಜಾಂಚಿ ಸ್ಥಾನದಿಂದ ಕೆಳಗಿಳಿದಿದ್ದಾರೆ

ದೆಹಲಿ ತಲುಪಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಈ ಮನುಷ್ಯ (ನವಜೋತ್ ಸಿಂಗ್ ಸಿಧು) ಅಸ್ಥಿರ … ನಾನು ನವದೆಹಲಿಯ ಪಂಜಾಬ್ ಸಿಎಂ ನಿವಾಸವಾದ ಕಪುರ್ತಲಾ ಹೌಸ್ ಅನ್ನು ಖಾಲಿ ಮಾಡಲು ಬಂದಿದ್ದೇನೆ. ನಾನು ಇಲ್ಲಿ ಯಾವುದೇ ರಾಜಕಾರಣಿಗಳನ್ನು ಭೇಟಿ ಮಾಡಲು ಹೋಗುವುದಿಲ್ಲಎಂದು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್  ಹೇಳಿದ್ದಾರೆ.

ಇದನ್ನೂ ಓದಿ:  ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು ರಾಜೀನಾಮೆಗೆ ಕಾರಣವೇನು?: ಪಂಜಾಬ್ ರಾಜಕೀಯದಲ್ಲಿನ ಪ್ರಮುಖ ಬೆಳವಣಿಗೆಗಳು ಇಲ್ಲಿವೆ

ಇದನ್ನೂ ಓದಿ:  ದೆಹಲಿ ನಿವಾಸ ಖಾಲಿ ಮಾಡಲು ಬಂದಿದ್ದೇನೆ, ಯಾವ ನಾಯಕರನ್ನೂ ಭೇಟಿಯಾಗುತ್ತಿಲ್ಲ; ಅಮರೀಂದರ್ ಸಿಂಗ್ ಸ್ಪಷ್ಟನೆ

(Punjab Chief Minister Charanjit Singh Channi Navjot Singh Sidhu resignation Amarinder Singh PPCC Congress)

Published On - 6:38 pm, Tue, 28 September 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​