AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇರಲಿಲ್ಲ: ಪಂಜಾಬ್ ಸಿಎಂ ಚರಣ್​ಜಿ​ತ್ ಸಿಂಗ್ ಚನ್ನಿ

ಸಿಧು ರಾಜೀನಾಮೆ ಬಗ್ಗೆ ಕೇಳಿದಾಗ ಈ ವಿಷಯದ ಬಗ್ಗೆ "ಯಾವುದೇ ಮಾಹಿತಿ ಇಲ್ಲ" ಎಂದು ಅವರು ಹೇಳಿದರು. ಪಂಜಾಬ್‌ನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಸಿಧು ಅಸಮಾಧಾನ ಹೊಂದಿದ್ದರೇ ಎಂದು ಕೇಳಿದಾಗ "ಅವರು ಅಸಮಾಧಾನಗೊಂಡರೆ ಅದು ಬಗೆಹರಿಯುತ್ತದೆ. ಅವರು ನನ್ನೊಂದಿಗೆ ಅಸಮಾಧಾನ ಹೊಂದಿಲ್ಲ" ಎಂದಿದ್ದಾರೆ ಚನ್ನಿ.

ಸಿಧು ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇರಲಿಲ್ಲ: ಪಂಜಾಬ್ ಸಿಎಂ ಚರಣ್​ಜಿ​ತ್ ಸಿಂಗ್ ಚನ್ನಿ
ಚರಣ್​ಜಿತ್ ಸಿಂಗ್ ಚನ್ನಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 28, 2021 | 6:40 PM

Share

ಚಂಡೀಗಢ: ಕೆಲವು ಗಂಟೆಗಳ ಹಿಂದೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಮೇಲೆ ಸಂಪೂರ್ಣ ವಿಶ್ವಾಸ ಮತ್ತು ನಂಬಿಕೆ ಇದೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್​ಜಿ​ತ್ ಸಿಂಗ್ ಚನ್ನಿ (Charanjit Singh Channi) ಮಂಗಳವಾರ ಹೇಳಿದ್ದಾರೆ. “ನಾನು (ನವಜೋತ್ ಸಿಂಗ್) ಸಿಧು ಸಾಹಬ್ ಮೇಲೆ ಸಂಪೂರ್ಣ ವಿಶ್ವಾಸ ಮತ್ತು ನಂಬಿಕೆಯನ್ನು ಹೊಂದಿದ್ದೇನೆ” ಎಂದು ಚನ್ನಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರದಲ್ಲಿ ಸಿಧು, “ರಾಜಿ ಮೂಲೆಯಿಂದ ಮನುಷ್ಯನ ಸ್ವಭಾವದ ಕುಸಿತ ಉಂಟಾಗುತ್ತದೆ, ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದಿದ್ದರು.

ಏತನ್ಮಧ್ಯೆ, ಸಿಧು ರಾಜೀನಾಮೆ ಬಗ್ಗೆ ಕೇಳಿದಾಗ ಈ ವಿಷಯದ ಬಗ್ಗೆ “ಯಾವುದೇ ಮಾಹಿತಿ ಇಲ್ಲ” ಎಂದು ಅವರು ಹೇಳಿದರು. ಪಂಜಾಬ್‌ನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಸಿಧು ಅಸಮಾಧಾನ ಹೊಂದಿದ್ದರೇ ಎಂದು ಕೇಳಿದಾಗ “ಅವರು ಅಸಮಾಧಾನಗೊಂಡರೆ ಅದು ಬಗೆಹರಿಯುತ್ತದೆ. ಅವರು ನನ್ನೊಂದಿಗೆ ಅಸಮಾಧಾನ ಹೊಂದಿಲ್ಲ” ಎಂದಿದ್ದಾರೆ ಚನ್ನಿ.

ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತಿಂಗಳುಗಳ ಗೊಂದಲದ ನಂತರ ಸಿಧು ಅವರನ್ನು ಜುಲೈ 23 ರಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (PPCC) ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸೆಪ್ಟೆಂಬರ್ 18 ರಂದು ರಾಜೀನಾಮೆ ನೀಡದ್ದು ಮಂಗಳವಾರ ರಾಷ್ಟ್ರ ರಾಜಧಾನಿಗೆ ಭೇಟಿ ನೀಡುವ ಮುನ್ನ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಮರಿಂದರ್ ಸಿಂಗ್ ಅವರ ದೆಹಲಿ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಚನ್ನಿ ಹೇಳಿದರು: “ಕೋಯಿ ಗಲ್ ನಹೀ,” ಕ್ಯಾಪ್ಟನ್ ಸಾಹಬ್ ನಮ್ಮ ಮುಖ್ಯಮಂತ್ರಿಯಾಗಿದ್ದರು, ಸಮಸ್ಯೆ ಇಲ್ಲ .ಅವರು ಪಂಜಾಬ್ ಸಮಸ್ಯೆಗಳನ್ನು ಚರ್ಚಿಸಲು ಅಲ್ಲಿಗೆ (ದೆಹಲಿ) ಹೋಗಿರಬೇಕು ಎಂದಿದ್ದಾರೆ.

ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು ಇದು (ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ) ಗಂಭೀರ ಸಮಸ್ಯೆಯಾಗಿದೆ, ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪಂಜಾಬ್ ಒಂದು ಗಡಿ ರಾಜ್ಯವಾಗಿದ್ದು ಅದನ್ನು ಇನ್ನೊಂದು ಜಮ್ಮು ಮತ್ತು ಕಾಶ್ಮೀರವನ್ನಾಗಿ ಮಾಡಬಾರದು ಎಂದಿದ್ದಾರೆ.

ಪಂಜಾಬ್ ಕಾಂಗ್ರೆಸ್ ಖಜಾಂಚಿ ಹುದ್ದೆಯಿಂದ ಕೆಳಗಿಳಿದ ಗುಲ್ಜಾರ್ ಇಂದರ್ ಚಹಲ್ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ ನಂತರ ಗುಲ್ಜಾರ್ ಇಂದರ್ ಚಹಲ್ ಪಂಜಾಬ್ ಕಾಂಗ್ರೆಸ್ ಖಜಾಂಚಿ ಸ್ಥಾನದಿಂದ ಕೆಳಗಿಳಿದಿದ್ದಾರೆ

ದೆಹಲಿ ತಲುಪಿದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಈ ಮನುಷ್ಯ (ನವಜೋತ್ ಸಿಂಗ್ ಸಿಧು) ಅಸ್ಥಿರ … ನಾನು ನವದೆಹಲಿಯ ಪಂಜಾಬ್ ಸಿಎಂ ನಿವಾಸವಾದ ಕಪುರ್ತಲಾ ಹೌಸ್ ಅನ್ನು ಖಾಲಿ ಮಾಡಲು ಬಂದಿದ್ದೇನೆ. ನಾನು ಇಲ್ಲಿ ಯಾವುದೇ ರಾಜಕಾರಣಿಗಳನ್ನು ಭೇಟಿ ಮಾಡಲು ಹೋಗುವುದಿಲ್ಲಎಂದು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್  ಹೇಳಿದ್ದಾರೆ.

ಇದನ್ನೂ ಓದಿ:  ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು ರಾಜೀನಾಮೆಗೆ ಕಾರಣವೇನು?: ಪಂಜಾಬ್ ರಾಜಕೀಯದಲ್ಲಿನ ಪ್ರಮುಖ ಬೆಳವಣಿಗೆಗಳು ಇಲ್ಲಿವೆ

ಇದನ್ನೂ ಓದಿ:  ದೆಹಲಿ ನಿವಾಸ ಖಾಲಿ ಮಾಡಲು ಬಂದಿದ್ದೇನೆ, ಯಾವ ನಾಯಕರನ್ನೂ ಭೇಟಿಯಾಗುತ್ತಿಲ್ಲ; ಅಮರೀಂದರ್ ಸಿಂಗ್ ಸ್ಪಷ್ಟನೆ

(Punjab Chief Minister Charanjit Singh Channi Navjot Singh Sidhu resignation Amarinder Singh PPCC Congress)

Published On - 6:38 pm, Tue, 28 September 21

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ