AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ನೇಮಕಾತಿ: ಹೈಕೋರ್ಟ್‌ಗಳ ಶಿಫಾರಸುಗಳನ್ನು ಕೊಲಿಜಿಯಂಗೆ ಏಕೆ ಕಳುಹಿಸಿಲ್ಲ ಎಂದು ಕೇಳಿದ ಸುಪ್ರೀಂಕೋರ್ಟ್

ಅಟಾರ್ನಿ ಜನರಲ್ ಆರ್ ವೆಂಕಟ್ರಮಣಿ ಅವರು ಪ್ರತಿಕ್ರಿಯೆ ನೀಡಲು ಒಂದು ವಾರ ಕಾಲಾವಕಾಶ ಕೋರಿದರು. ಪೀಠವು ಅವರಿಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದು, ಕೇಂದ್ರದ ಪ್ರತಿಕ್ರಿಯೆಯೊಂದಿಗೆ ಬರುವಂತೆ ಹೇಳಿದೆ. ಇದೀಗ ಅಕ್ಟೋಬರ್ 9 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.ಹೇಳಲು ನನಗೆ ತುಂಬಾ ಇದೆ. ಆದರೆ ನಾನು ನನ್ನನ್ನು ನಿಯಂತ್ರಿಸುತ್ತಿದ್ದೇನೆ ಎಂದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್

ನ್ಯಾಯಾಧೀಶರ ನೇಮಕಾತಿ: ಹೈಕೋರ್ಟ್‌ಗಳ ಶಿಫಾರಸುಗಳನ್ನು ಕೊಲಿಜಿಯಂಗೆ ಏಕೆ ಕಳುಹಿಸಿಲ್ಲ ಎಂದು ಕೇಳಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 26, 2023 | 5:33 PM

Share

ದೆಹಲಿ ಸೆಪ್ಟೆಂಬರ್ 26: ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಮತ್ತೊಂದು ಮುಖಾಮುಖಿಯಾಗಬಹುದಾಗಿದ್ದು, ಹೈಕೋರ್ಟ್‌ಗಳ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಕೊಲಿಜಿಯಂಗೆ (Collegium) ಏಕೆ ಕಳುಹಿಸಿಲ್ಲ ಎಂದು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಪ್ರಶ್ನಿಸಿದೆ. ಹೆಸರುಗಳನ್ನು ತೆರವುಗೊಳಿಸುವಲ್ಲಿ ಕೇಂದ್ರವು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ಈ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.

ಹೈಕೋರ್ಟ್‌ನಿಂದ 80 ಹೆಸರುಗಳು 10 ತಿಂಗಳಿನಂದ ಬಾಕಿ ಉಳಿದಿವೆ. ಮೊದಲು ಸಾಮಾನ್ಯ ಪ್ರಕ್ರಿಯೆ ನಡೆಯುತ್ತದೆ. ನಿಮ್ಮ ನಿಲುವನ್ನು ತಿಳಿದುಕೊಳ್ಳಬೇಕು. ಆದ್ದರಿಂದ ಕೊಲಿಜಿಯಂ ತೀರ್ಮಾನಿಸಬಹುದು ಎಂದು ನ್ಯಾಯಮೂರ್ತಿ ಕೌಲ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ. 26 ನ್ಯಾಯಾಧೀಶರ ವರ್ಗಾವಣೆ ಮತ್ತು ‘ಸೂಕ್ಷ್ಮ ಹೈಕೋರ್ಟ್’ನಲ್ಲಿ ಮುಖ್ಯ ನ್ಯಾಯಮೂರ್ತಿ ನೇಮಕ ಬಾಕಿ ಇದೆ ಎಂದು ಪೀಠ ಹೇಳಿದೆ.

ಹೈಕೋರ್ಟ್ ಶಿಫಾರಸು ಮಾಡಿದ್ದರೂ ಕೊಲಿಜಿಯಂ ಸ್ವೀಕರಿಸದ ಎಷ್ಟು ಹೆಸರುಗಳು ಬಾಕಿ ಉಳಿದಿವೆ ಎಂಬ ಮಾಹಿತಿ ನನ್ನ ಬಳಿ ಇದೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು.

ಏತನ್ಮಧ್ಯೆ, ಅಟಾರ್ನಿ ಜನರಲ್ ಆರ್ ವೆಂಕಟ್ರಮಣಿ ಅವರು ಪ್ರತಿಕ್ರಿಯೆ ನೀಡಲು ಒಂದು ವಾರ ಕಾಲಾವಕಾಶ ಕೋರಿದರು. ಪೀಠವು ಅವರಿಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದು, ಕೇಂದ್ರದ ಪ್ರತಿಕ್ರಿಯೆಯೊಂದಿಗೆ ಬರುವಂತೆ ಹೇಳಿದೆ. ಇದೀಗ ಅಕ್ಟೋಬರ್ 9 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

ಹೇಳಲು ನನಗೆ ತುಂಬಾ ಇದೆ. ಆದರೆ ನಾನು ನನ್ನನ್ನು ನಿಯಂತ್ರಿಸುತ್ತಿದ್ದೇನೆ. ಪ್ರತಿಕ್ರಿಯೆ ನೀಡಲು ಎಜಿ ಒಂದು ವಾರ ಕಾಲಾವಕಾಶ ಕೇಳಿದ್ದರಿಂದ ನಾನು ಮೌನವಾಗಿದ್ದೇನೆ, ಆದರೆ ಮುಂದಿನ ದಿನಾಂಕದಂದು ನಾನು ಸುಮ್ಮನಿರುವುದಿಲ್ಲ ಎಂದು ಜಸ್ಟೀಸ್ ಕೌಲ್ ಖಡಕ್ಕಾಗಿ ಹೇಳಿದ್ದಾರೆ.

ನ್ಯಾಯಾಧೀಶರ ನೇಮಕಾತಿಯು ಸುಪ್ರೀಂಕೋರ್ಟ್ ಮತ್ತು ಕಾರ್ಯನಿರ್ವಾಹಕರ ನಡುವಿನ ವಿವಾದದ ಪ್ರಮುಖ ವಿಷಯವಾಗಿದೆ. ನ್ಯಾಯಾಧೀಶರ ಆಯ್ಕೆಯಲ್ಲಿ ಸರ್ಕಾರದ ಪಾತ್ರ ಇರಬೇಕು ಎಂದು ಕೇಂದ್ರ ಸಚಿವರು ವಾದಿಸಿದ್ದಾರೆ.

ನ್ಯಾಯಾಧೀಶರ ನೇಮಕಾತಿಯಲ್ಲಿ ಕಾರ್ಯನಿರ್ವಾಹಕರ ದೊಡ್ಡ ಪಾತ್ರವನ್ನು ನೀಡುವ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಕಾಯ್ದೆಯನ್ನು ಸುಪ್ರೀಂಕೋರ್ಟ್ ಅಕ್ಟೋಬರ್ 2015 ರಲ್ಲಿ ರದ್ದುಗೊಳಿಸಿತ್ತು.

ಇದನ್ನೂ ಓದಿ: ಹತ್ತೇ ತಿಂಗಳಲ್ಲಿ ಭಾರತ  ಬಾಂಗ್ಲಾ ನೀರಿನ ಸಮಸ್ಯೆ ಬಗೆಹರಿಸಿದ್ದೆ ಆದರೆ; ಕಾವೇರಿ ವಿವಾದದ ಬಗ್ಗೆ ದೇವೇಗೌಡರು ಹೇಳಿದ್ದೇನು?

ಸುಪ್ರೀಂಕೋರ್ಟ್ ತೀರ್ಪು ಕಾನೂನನ್ನು ಹೇಗೆ ರದ್ದುಗೊಳಿಸಿದೆ ಎಂಬುದರ ಕುರಿತು ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್ ಅವರ ಹೇಳಿಕೆಯಿಂದ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಜಗಳ ಕಳೆದ ವರ್ಷ ಉಲ್ಬಣಗೊಂಡಿತು.  ಇದಾದ ಕೆಲವೇ ದಿನಗಳಲ್ಲಿ, ಕೊಲಿಜಿಯಂ ವ್ಯವಸ್ಥೆ ನೆಲದ ಕಾನೂನು. ಅದನ್ನು ಪಾಲಿಸಲೇ ಬೇಕು ಎಂದು ನ್ಯಾಯಾಲಯ ಹೇಳಿತು. ಸಮಾಜದ ಕೆಲವು ವರ್ಗಗಳು ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದರೆ, ಅದು ದೇಶದ ಕಾನೂನಾಗಿ ಉಳಿಯುವುದಿಲ್ಲ ಎಂದು ಅದು ಹೇಳಿದೆ.

ಕೊಲಿಜಿಯಂ ವ್ಯವಸ್ಥೆಯಡಿಯಲ್ಲಿ, ಭಾರತದ ಮುಖ್ಯ ನ್ಯಾಯಾಧೀಶರು ಮತ್ತು ಹಿರಿಯ ನ್ಯಾಯಾಧೀಶರು ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂಕೋರ್ಟ್‌ಗೆ ನೇಮಕಾತಿಗಾಗಿ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡುತ್ತಾರೆ. ಹೆಸರುಗಳನ್ನು ಕೇಂದ್ರಕ್ಕೆ ಕಳುಹಿಸಲಾಗುತ್ತದೆ ಮತ್ತು ಅದರ ಅನುಮತಿಯ ನಂತರ, ರಾಷ್ಟ್ರಪತಿ ನೇಮಕಾತಿಗಳನ್ನು ಮಾಡುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ