AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್

ಸರ್ವೋಚ್ಛ ನ್ಯಾಯಾಲಯವು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಈ ತನಿಖೆಯೂ ಡಾ ನರೆಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಹಳ್ಳ ಹಿಡಿಯದಿದ್ದರೆ ಸಾಕು ಎಂದರು. ದಾಭೋಲ್ಕರ್ ಪ್ರಕರಣದ ಬಗ್ಗೆ ಮಾತಾಡಿದ ಪವಾರ್, ಆಗಸ್ಟ 20, 2013 ರಂದು ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದ ವಿಚಾರವಾದಿ ದಾಭೋಲ್ಕರ್, ಅಪರಿಚಿತ ಹಂತಕನ ಗುಂಡಿಗೆ ಬಲಿಯಾದ ನಂತರ, ಅ ಪ್ರಕರಣವನ್ನು […]

ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 5:58 PM

Share

ಸರ್ವೋಚ್ಛ ನ್ಯಾಯಾಲಯವು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಈ ತನಿಖೆಯೂ ಡಾ ನರೆಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಹಳ್ಳ ಹಿಡಿಯದಿದ್ದರೆ ಸಾಕು ಎಂದರು.

ದಾಭೋಲ್ಕರ್ ಪ್ರಕರಣದ ಬಗ್ಗೆ ಮಾತಾಡಿದ ಪವಾರ್, ಆಗಸ್ಟ 20, 2013 ರಂದು ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದ ವಿಚಾರವಾದಿ ದಾಭೋಲ್ಕರ್, ಅಪರಿಚಿತ ಹಂತಕನ ಗುಂಡಿಗೆ ಬಲಿಯಾದ ನಂತರ, ಅ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಮೇ, 2014ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಈ ಕೇಸನ್ನು ತನಿಖಾ ದಳ ಇನ್ನೂ ಇತ್ಯರ್ಥಗೊಳಿಸಿಲ್ಲ. ದಾಭೋಲ್ಕರ್ ಹಂತಕರು ಇತರ ಮೂರು ವಿಚಾರವಾದಿಗಳುಕಮ್ಯುನಿಸ್ಟ್ ನಾಯಕ ಗೊವಿಂದ ಪನ್ಸಾರೆ, ಕನ್ನಡ ವಿದ್ವಾಂಸ ಎಮ್ ಎಮ್ ಕಲ್ಬುರ್ಗಿ ಹಾಗೂ ಪತ್ರಕರ್ತೆ ಮತ್ತು ಸಾಮಾಜಿಕ ಹೋರಾಟಗಾತಿ ಗೌರಿ ಲಂಕೇಶ್ ಅವರ ಹತ್ಯೆಗಳಲ್ಲೂ ಭಾಗಿಯಾಗಿರುವ ಶಂಕೆಯಿದೆಯೆಂದು ಪವಾರ್ ಹೇಳಿದರು.

ಗುರುವಾರದಂದು ಸರಣಿ ಟ್ವೀಟ್​ಗಳ ಮೂಲಕ ತಮ್ಮ ಅನಿಸಿಕೆಗಳನ್ನು ಹೇಳಿರುವ ಪವಾರ್, ‘‘2014 ರಲ್ಲಿ ಆರಂಭಿಸಿದ ಡಾ. ನರೇಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಈ ಪ್ರಕರಣದ ತನಿಖೆಯನ್ನು ಸಿಬಿಐ ಮಾಡಲಾರದೆಂಬ ನಿರೀಕ್ಷೆ ನನಗಿದೆ. ದಾಭೋಲ್ಕರ್ ಪ್ರಕರಣದ ತನಿಖೆ ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ,’’ ಎಂದರು.

ದಾಭೋಲ್ಕರ್ ತನಿಖೆ ಅಪೂರ್ಣವಾಗಿದ್ದಾಗ್ಯೂ, ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ಎಲ್ಲಾ ರೀತಿಯ ಸಹಕಾರ ಒದಗಿಸಿ ಅಪೆಕ್ಸ್ ಕೋರ್ಟಿನ ಆದೇಶವನ್ನು ಪಾಲಿಸುವ ವಿಶ್ವಾಸವನ್ನು ಪವಾರ್ ವ್ಯಕ್ತಪಡಿಸಿದರು.

‘‘ಸುಶಾಂತ್ ಸಿಂಗ್ ರಜಪೂತ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸೂಚಿಸುವ ಸುಪ್ರೀಂಕೋರ್ಟ್ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಗೌರವಿಸಿ ತನಿಖಾ ದಳಕ್ಕೆ ಸಂಪೂರ್ಣ ಸಹಕಾರ ಒದಗಿಸುತ್ತದೆಂಬ ಭರವಸೆ ನನಗಿದೆ.’’

Follow Us
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?