AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್

ಸರ್ವೋಚ್ಛ ನ್ಯಾಯಾಲಯವು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಈ ತನಿಖೆಯೂ ಡಾ ನರೆಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಹಳ್ಳ ಹಿಡಿಯದಿದ್ದರೆ ಸಾಕು ಎಂದರು. ದಾಭೋಲ್ಕರ್ ಪ್ರಕರಣದ ಬಗ್ಗೆ ಮಾತಾಡಿದ ಪವಾರ್, ಆಗಸ್ಟ 20, 2013 ರಂದು ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದ ವಿಚಾರವಾದಿ ದಾಭೋಲ್ಕರ್, ಅಪರಿಚಿತ ಹಂತಕನ ಗುಂಡಿಗೆ ಬಲಿಯಾದ ನಂತರ, ಅ ಪ್ರಕರಣವನ್ನು […]

ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 5:58 PM

ಸರ್ವೋಚ್ಛ ನ್ಯಾಯಾಲಯವು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಈ ತನಿಖೆಯೂ ಡಾ ನರೆಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಹಳ್ಳ ಹಿಡಿಯದಿದ್ದರೆ ಸಾಕು ಎಂದರು.

ದಾಭೋಲ್ಕರ್ ಪ್ರಕರಣದ ಬಗ್ಗೆ ಮಾತಾಡಿದ ಪವಾರ್, ಆಗಸ್ಟ 20, 2013 ರಂದು ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದ ವಿಚಾರವಾದಿ ದಾಭೋಲ್ಕರ್, ಅಪರಿಚಿತ ಹಂತಕನ ಗುಂಡಿಗೆ ಬಲಿಯಾದ ನಂತರ, ಅ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಮೇ, 2014ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಈ ಕೇಸನ್ನು ತನಿಖಾ ದಳ ಇನ್ನೂ ಇತ್ಯರ್ಥಗೊಳಿಸಿಲ್ಲ. ದಾಭೋಲ್ಕರ್ ಹಂತಕರು ಇತರ ಮೂರು ವಿಚಾರವಾದಿಗಳುಕಮ್ಯುನಿಸ್ಟ್ ನಾಯಕ ಗೊವಿಂದ ಪನ್ಸಾರೆ, ಕನ್ನಡ ವಿದ್ವಾಂಸ ಎಮ್ ಎಮ್ ಕಲ್ಬುರ್ಗಿ ಹಾಗೂ ಪತ್ರಕರ್ತೆ ಮತ್ತು ಸಾಮಾಜಿಕ ಹೋರಾಟಗಾತಿ ಗೌರಿ ಲಂಕೇಶ್ ಅವರ ಹತ್ಯೆಗಳಲ್ಲೂ ಭಾಗಿಯಾಗಿರುವ ಶಂಕೆಯಿದೆಯೆಂದು ಪವಾರ್ ಹೇಳಿದರು.

ಗುರುವಾರದಂದು ಸರಣಿ ಟ್ವೀಟ್​ಗಳ ಮೂಲಕ ತಮ್ಮ ಅನಿಸಿಕೆಗಳನ್ನು ಹೇಳಿರುವ ಪವಾರ್, ‘‘2014 ರಲ್ಲಿ ಆರಂಭಿಸಿದ ಡಾ. ನರೇಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಈ ಪ್ರಕರಣದ ತನಿಖೆಯನ್ನು ಸಿಬಿಐ ಮಾಡಲಾರದೆಂಬ ನಿರೀಕ್ಷೆ ನನಗಿದೆ. ದಾಭೋಲ್ಕರ್ ಪ್ರಕರಣದ ತನಿಖೆ ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ,’’ ಎಂದರು.

ದಾಭೋಲ್ಕರ್ ತನಿಖೆ ಅಪೂರ್ಣವಾಗಿದ್ದಾಗ್ಯೂ, ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ಎಲ್ಲಾ ರೀತಿಯ ಸಹಕಾರ ಒದಗಿಸಿ ಅಪೆಕ್ಸ್ ಕೋರ್ಟಿನ ಆದೇಶವನ್ನು ಪಾಲಿಸುವ ವಿಶ್ವಾಸವನ್ನು ಪವಾರ್ ವ್ಯಕ್ತಪಡಿಸಿದರು.

‘‘ಸುಶಾಂತ್ ಸಿಂಗ್ ರಜಪೂತ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸೂಚಿಸುವ ಸುಪ್ರೀಂಕೋರ್ಟ್ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಗೌರವಿಸಿ ತನಿಖಾ ದಳಕ್ಕೆ ಸಂಪೂರ್ಣ ಸಹಕಾರ ಒದಗಿಸುತ್ತದೆಂಬ ಭರವಸೆ ನನಗಿದೆ.’’

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ