AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್

ಸರ್ವೋಚ್ಛ ನ್ಯಾಯಾಲಯವು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಈ ತನಿಖೆಯೂ ಡಾ ನರೆಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಹಳ್ಳ ಹಿಡಿಯದಿದ್ದರೆ ಸಾಕು ಎಂದರು. ದಾಭೋಲ್ಕರ್ ಪ್ರಕರಣದ ಬಗ್ಗೆ ಮಾತಾಡಿದ ಪವಾರ್, ಆಗಸ್ಟ 20, 2013 ರಂದು ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದ ವಿಚಾರವಾದಿ ದಾಭೋಲ್ಕರ್, ಅಪರಿಚಿತ ಹಂತಕನ ಗುಂಡಿಗೆ ಬಲಿಯಾದ ನಂತರ, ಅ ಪ್ರಕರಣವನ್ನು […]

ದಾಭೋಲ್ಕರ್ ಪ್ರಕರಣದಂತೆ ಸುಶಾಂತ್ ಸಾವು ಪ್ರಕರಣ ಹಳ್ಳ ಹಿಡಿಯಬಾರದು: ಶರದ್ ಪವಾರ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 20, 2020 | 5:58 PM

Share

ಸರ್ವೋಚ್ಛ ನ್ಯಾಯಾಲಯವು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಈ ತನಿಖೆಯೂ ಡಾ ನರೆಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಹಳ್ಳ ಹಿಡಿಯದಿದ್ದರೆ ಸಾಕು ಎಂದರು.

ದಾಭೋಲ್ಕರ್ ಪ್ರಕರಣದ ಬಗ್ಗೆ ಮಾತಾಡಿದ ಪವಾರ್, ಆಗಸ್ಟ 20, 2013 ರಂದು ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದ ವಿಚಾರವಾದಿ ದಾಭೋಲ್ಕರ್, ಅಪರಿಚಿತ ಹಂತಕನ ಗುಂಡಿಗೆ ಬಲಿಯಾದ ನಂತರ, ಅ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಮೇ, 2014ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಈ ಕೇಸನ್ನು ತನಿಖಾ ದಳ ಇನ್ನೂ ಇತ್ಯರ್ಥಗೊಳಿಸಿಲ್ಲ. ದಾಭೋಲ್ಕರ್ ಹಂತಕರು ಇತರ ಮೂರು ವಿಚಾರವಾದಿಗಳುಕಮ್ಯುನಿಸ್ಟ್ ನಾಯಕ ಗೊವಿಂದ ಪನ್ಸಾರೆ, ಕನ್ನಡ ವಿದ್ವಾಂಸ ಎಮ್ ಎಮ್ ಕಲ್ಬುರ್ಗಿ ಹಾಗೂ ಪತ್ರಕರ್ತೆ ಮತ್ತು ಸಾಮಾಜಿಕ ಹೋರಾಟಗಾತಿ ಗೌರಿ ಲಂಕೇಶ್ ಅವರ ಹತ್ಯೆಗಳಲ್ಲೂ ಭಾಗಿಯಾಗಿರುವ ಶಂಕೆಯಿದೆಯೆಂದು ಪವಾರ್ ಹೇಳಿದರು.

ಗುರುವಾರದಂದು ಸರಣಿ ಟ್ವೀಟ್​ಗಳ ಮೂಲಕ ತಮ್ಮ ಅನಿಸಿಕೆಗಳನ್ನು ಹೇಳಿರುವ ಪವಾರ್, ‘‘2014 ರಲ್ಲಿ ಆರಂಭಿಸಿದ ಡಾ. ನರೇಂದ್ರ ದಾಭೋಲ್ಕರ್ ಪ್ರಕರಣದ ತನಿಖೆಯಂತೆ ಈ ಪ್ರಕರಣದ ತನಿಖೆಯನ್ನು ಸಿಬಿಐ ಮಾಡಲಾರದೆಂಬ ನಿರೀಕ್ಷೆ ನನಗಿದೆ. ದಾಭೋಲ್ಕರ್ ಪ್ರಕರಣದ ತನಿಖೆ ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ,’’ ಎಂದರು.

ದಾಭೋಲ್ಕರ್ ತನಿಖೆ ಅಪೂರ್ಣವಾಗಿದ್ದಾಗ್ಯೂ, ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ಎಲ್ಲಾ ರೀತಿಯ ಸಹಕಾರ ಒದಗಿಸಿ ಅಪೆಕ್ಸ್ ಕೋರ್ಟಿನ ಆದೇಶವನ್ನು ಪಾಲಿಸುವ ವಿಶ್ವಾಸವನ್ನು ಪವಾರ್ ವ್ಯಕ್ತಪಡಿಸಿದರು.

‘‘ಸುಶಾಂತ್ ಸಿಂಗ್ ರಜಪೂತ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸೂಚಿಸುವ ಸುಪ್ರೀಂಕೋರ್ಟ್ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಗೌರವಿಸಿ ತನಿಖಾ ದಳಕ್ಕೆ ಸಂಪೂರ್ಣ ಸಹಕಾರ ಒದಗಿಸುತ್ತದೆಂಬ ಭರವಸೆ ನನಗಿದೆ.’’

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!