AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗಾತಿ, ಮಗಳ ಕೊಂದು ಲಿಪ್ಟ್​ ಸ್ಟಿಕ್​​ನಲ್ಲಿ ಗೋಡೆ ಮೇಲೆ ಆರೋಪಿ ಬರೆದಿದ್ದೇನು?

ವ್ಯಕ್ತಿಯೊಬ್ಬ ತನ್ನ ಸಂಗಾತಿ ಹಾಗೂ ಮಗಳ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಇಬ್ಬರನ್ನೂ ಕೊಂದು ರಾತ್ರಿ ಇಡೀ ಶವದ ಪಕ್ಕದಲ್ಲೇ ಆತ ಕುಳಿತುಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಲಿಪ್​ಸ್ಟಿಕ್ ಬಳಸಿ ಗೋಡೆಯ ಮೇಲೆ ನಾನು ಅವಳನ್ನು ಕೊಂದೆ ಎಂದು ಬರೆದಿದ್ದ. ಗಂಜ್‌ಬಸೋಡಾದ ವಾರ್ಡ್ ಸಂಖ್ಯೆ 8 ರಲ್ಲಿ ಈ ದುರಂತ ಘಟನೆ ನಡೆದಿದ್ದು, ಸ್ಥಳೀಯ ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.

ಸಂಗಾತಿ, ಮಗಳ ಕೊಂದು ಲಿಪ್ಟ್​ ಸ್ಟಿಕ್​​ನಲ್ಲಿ ಗೋಡೆ ಮೇಲೆ ಆರೋಪಿ ಬರೆದಿದ್ದೇನು?
ಕ್ರೈಂ
ನಯನಾ ರಾಜೀವ್
|

Updated on: Jul 23, 2025 | 3:01 PM

Share

ಮಧ್ಯಪ್ರದೇಶ, ಜುಲೈ 23: ವ್ಯಕ್ತಿಯೊಬ್ಬ ತನ್ನ ಸಂಗಾತಿ ಹಾಗೂ ಮಗಳ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಇಬ್ಬರನ್ನೂ ಕೊಂದು ರಾತ್ರಿ ಇಡೀ ಶವದ ಪಕ್ಕದಲ್ಲೇ ಆತ ಕುಳಿತುಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಲಿಪ್​ಸ್ಟಿಕ್ ಬಳಸಿ ಗೋಡೆಯ ಮೇಲೆ ನಾನು ಅವಳನ್ನು ಕೊಂದೆ ಎಂದು ಬರೆದಿದ್ದ.

ಗಂಜ್‌ಬಸೋಡಾದ ವಾರ್ಡ್ ಸಂಖ್ಯೆ 8 ರಲ್ಲಿ ಈ ದುರಂತ ಘಟನೆ ನಡೆದಿದ್ದು, ಸ್ಥಳೀಯ ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.ಆರೋಪಿಯನ್ನು ರಾಜಾ ಅಲಿಯಾಸ್ ಅನುಜ್ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಕೆಲವು ತಿಂಗಳುಗಳಿಂದ 36 ವರ್ಷದ ರಾಮಸಖಿ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದ. ಅನುಜ್ ಜೊತೆಗೆ ಬರುವ ಮೊದಲು ರಾಮಸಖಿ ತನ್ನ ಪತಿಯಿಂದ ಬೇರ್ಪಟ್ಟಿದ್ದರು.

ಈ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು, ಆದರೆ ಇಷ್ಟೊಂದು ಭಯಾನಕ ರೀತಿಯಲ್ಲಿ ಅವರ ಬದುಕೇ ಕೊನೆಗೊಳ್ಳುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಅನುಜ್ ಅವರ ನೆರೆಹೊರೆಯವರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಪೊಲೀಸರು ಸ್ಥಳಕ್ಕೆ ಬಂದಾಗ, ಗೋಡೆಯ ಮೇಲೆ ನಾನು ಅವಳನ್ನು ಕೊಂದೆ, ಅವಳು ನನಗೆ ಸುಳ್ಳು ಹೇಳಿದ್ದಳು.

ಮತ್ತಷ್ಟು ಓದಿ: ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು! ಮತ್ತಷ್ಟು ರೋಚಕ ಅಂಶ ಬಯಲು

ಅವಳಿಗೆ ಬೇರೆ ಸಂಬಂಧವಿತ್ತು ಎಂದು ಬರೆದಿರುವ ಸಂದೇಶ ಕಂಡುಬಂದಿದೆ. ವರದಿಯ ಪ್ರಕಾರ, ಕೊಲೆ ನಡೆದ ಸ್ವಲ್ಪ ಸಮಯದ ನಂತರ ಈ ಸಂದೇಶವನ್ನು ಬರೆಯಲಾಗಿದೆ ಎಂದು ವಿಧಿವಿಜ್ಞಾನ ತಜ್ಞರು ದೃಢಪಡಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಪ್ರಶಾಂತ್ ಚೌಬೆ ಎನ್‌ಡಿಟಿವಿಗೆ ಮಾಹಿತಿ ನೀಡಿದ್ದು, ಮಹಿಳೆ ತನ್ನ ಪತಿಯಿಂದ ಬೇರೆಯಾಗಿ ಅನುಜ್ ಹಾಗೂ ಮಗಳ ಜೊತೆ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ.

ನಮ್ಮ ತನಿಖೆಯಲ್ಲಿ ಆಕೆ ಮತ್ತು ಆಕೆಯ ಮಗು ಇಬ್ಬರನ್ನೂ ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!