AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ! ಕಾಂಗ್ರೆಸ್​ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಅವರನ್ನ ಸಿಎಂ ಮಾಡಲಿ: ಸಿ.ಟಿ.ರವಿ

ಅವರ ಹೆಸರಿನಲ್ಲೇ ಸಿ.ಎಂ. ಇದೆ, ಅದನ್ನು ಅಧಿಕೃತ ಮಾಡಿ. ಇಬ್ರಾಹಿಂ ಅನೇಕ ಜನರಿಗೆ ಪೌರೋಹಿತ್ಯ ವಹಿಸಿದ್ದಾರೆ. ಪೌರೋಹಿತ್ಯ ವಹಿಸಿದವರಿಗೆ ತಾನು ಮದುವೆಯಾಗಬೇಕು ಎಂದು ಆಸೆ ಇರುತ್ತದೆ. ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಮಾಡಲಿ.

ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ! ಕಾಂಗ್ರೆಸ್​ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಅವರನ್ನ ಸಿಎಂ ಮಾಡಲಿ: ಸಿ.ಟಿ.ರವಿ
ಸಿ.ಟಿ.ರವಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 28, 2021 | 11:18 AM

Share

ದೆಹಲಿ: ಕಾಂಗ್ರೆಸ್ನಲ್ಲಿ ಭವಿಷ್ಯದ ಸಿಎಂ ಅಭ್ಯರ್ಥಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಸಿ.ಎಂ.ಇಬ್ರಾಹಿಂ ಹೇಳಿಕೆ ಗಮನಿಸಿದ್ದೇನೆ. ಇಬ್ರಾಹಿಂ ಸಿಎಂ ಆಗಬೇಕು ಎಂಬ ಹೇಳಿಕೆಯಲ್ಲಿ ನ್ಯಾಯ ಇದೆ. ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಬಿಜೆಪಿಗೆ ಬಹುಮತವಿದೆ, ಯಡಿಯೂರಪ್ಪ ಸಿಎಂ ಆಗಿದ್ದಾರೆ. ಕಾಂಗ್ರೆಸ್‌ನವರು ಬಹುಮತ ಇಲ್ಲದಿದ್ರೂ ಹಲವರು ಸಿಎಂ ಆಗಲು ಕನಸು ಕಾಣುತ್ತಿದ್ದಾರೆ. ಹನುಮಂತನ ಬಾಲದ ರೀತಿಯಲ್ಲಿ ಪಟ್ಟಿ ಬೆಳೆಯುತ್ತಿದೆ. ಕಾಂಗ್ರೆಸ್ MLC ಸಿ.ಎಂ.ಇಬ್ರಾಹಿಂ ಹೇಳಿಕೆ ಗಮನಿಸಿದ್ದೇನೆ. ಇಬ್ರಾಹಿಂ ಸಿಎಂ ಆಗಬೇಕು, ಹೇಳಿಕೆಯಲ್ಲಿ ನ್ಯಾಯ ಇದೆ. ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ ಇದೆ ಎಂದರು.

ಅವರ ಹೆಸರಿನಲ್ಲೇ ಸಿ.ಎಂ. ಇದೆ, ಅದನ್ನು ಅಧಿಕೃತ ಮಾಡಿ. ಇಬ್ರಾಹಿಂ ಅನೇಕ ಜನರಿಗೆ ಪೌರೋಹಿತ್ಯ ವಹಿಸಿದ್ದಾರೆ. ಪೌರೋಹಿತ್ಯ ವಹಿಸಿದವರಿಗೆ ತಾನು ಮದುವೆಯಾಗಬೇಕು ಎಂದು ಆಸೆ ಇರುತ್ತದೆ. ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಮಾಡಲಿ. ಅಲ್ಪಸಂಖ್ಯಾತರ ಮೊಣಕೈಗೆ ತುಪ್ಪ ಸವರಬೇಡಿ. ದಲಿತರಿಗೆ ಮೋಸ ಮಾಡಿದ್ರಿ, ಅಲ್ಪಸಂಖ್ಯಾತರಿಗೆ ಮಾಡಬೇಡಿ. ಜಮೀರ್, ತನ್ವೀರ್, ಇಬ್ರಾಹಿಂ ಯಾರನ್ನಾದ್ರೂ ಮಾಡಿ ಆದ್ರೆ ಇಬ್ರಾಹಿಂ ಅವರನ್ನು ಸಿಎಂ ಮಾಡಲು ನನ್ನ ಬೆಂಬಲ ಇದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ರು.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಸಿಎಂ ಗಲಾಟೆ; ಖಡಕ್ ಸೂಚನೆ ನೀಡಲು ರಾಹುಲ್​ಗೆ ಹಿರಿಯ ನಾಯಕರ ಒತ್ತಾಯ

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ