AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜೋತ್ ಸಿಂಗ್ ಸಿಧು ಸ್ಥಿರ ವ್ಯಕ್ತಿ ಅಲ್ಲ ಎಂದು ನಾನು ಮೊದಲೇ ಹೇಳಿದ್ದೆ: ಕ್ಯಾಪ್ಟನ್ ಅಮರಿಂದರ್ ಸಿಂಗ್

Amarinder Singh: ಅಮರಿಂದರ್ ಸಿಂಗ್ ಪ್ರಸ್ತುತ ದೆಹಲಿಯಲ್ಲಿದ್ದಾರೆ. ಅವರ ಭೇಟಿಯು "ವೈಯಕ್ತಿಕ". "ಊಹಾಪೋಹಗಳ ಅಗತ್ಯವಿಲ್ಲ", ಮಾಜಿ ಪಂಜಾಬ್ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಇಂದು ಟ್ವೀಟ್ ಮಾಡಿದ್ದಾರೆ.

ನವಜೋತ್ ಸಿಂಗ್ ಸಿಧು ಸ್ಥಿರ ವ್ಯಕ್ತಿ ಅಲ್ಲ ಎಂದು ನಾನು ಮೊದಲೇ  ಹೇಳಿದ್ದೆ: ಕ್ಯಾಪ್ಟನ್ ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್​
TV9 Web
| Edited By: |

Updated on: Sep 28, 2021 | 4:32 PM

Share

ದೆಹಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ಕೆಲವೇ ಕ್ಷಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪಕ್ಷದ “ನಾನು ನಿಮಗೆ ಮೊದಲೇ ಹೇಳಿದ್ದೆ. ಅವರು ಸ್ಥಿರ ವ್ಯಕ್ತಿ ಅಲ್ಲ ಮತ್ತು ಗಡಿ ರಾಜ್ಯ ಪಂಜಾಬ್​​ಗೆ ಸರಿಹೊಂದುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. 

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (PPCC) ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು (Navjot Singh Sidhu) ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಸಿಧು ಅಧ್ಯಕ್ಷ ಸ್ಥಾನಕ್ಕೆ  ರಾಜೀನಾಮೆ ನೀಡಿದರೂ  ಪಕ್ಷದಲ್ಲಿ ಮುಂದುವರಿಯುವುದಾಗಿ ಹೇಳಿದ್ದಾರೆ.

“ಮನುಷ್ಯನ ಸ್ವಭಾವದ ಕುಸಿತವು ರಾಜಿ ಮೂಲೆಯಿಂದ ಹುಟ್ಟಿಕೊಂಡಿದೆ. ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದು ನವಜೋತ್ ಸಿಧು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಪಕ್ಷದಲ್ಲಿ ಅವಮಾನವಾಗಿದೆ ಎಂದು ಹೇಳಿ ಉಲ್ಲೇಖಿಸಿ ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದರು.

ಅಮರಿಂದರ್ ಸಿಂಗ್ ಪ್ರಸ್ತುತ ದೆಹಲಿಯಲ್ಲಿದ್ದಾರೆ. ಅವರ ಭೇಟಿಯು “ವೈಯಕ್ತಿಕ”. “ಊಹಾಪೋಹಗಳ ಅಗತ್ಯವಿಲ್ಲ”, ಮಾಜಿ ಪಂಜಾಬ್ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಇಂದು ಟ್ವೀಟ್ ಮಾಡಿದ್ದಾರೆ.

ಅಮರಿಂದರ್ ಸಿಂಗ್  ದೆಹಲಿ ಭೇಟಿ ಬಗ್ಗೆ ಹಲವಾರು ಊಹಾಪೋಹಗಳು  ಕೇಳಿ ಬಂದಿವೆ. ಅವರು ವೈಯಕ್ತಿಕ ಭೇಟಿಯಲ್ಲಿದ್ದಾರೆ, ಈ ಸಮಯದಲ್ಲಿ ಅವರು ಕೆಲವು ಸ್ನೇಹಿತರನ್ನು ಭೇಟಿ ಮಾಡುತ್ತಾರೆ ಮತ್ತು ಹೊಸ ಸಿಎಂಗಾಗಿ ಕಪುರ್ತಲಾ ಮನೆಯನ್ನು ಖಾಲಿ ಮಾಡುತ್ತಾರೆ. ಯಾವುದೇ ಅನಗತ್ಯ ಊಹಾಪೋಹಗಳ ಅಗತ್ಯವಿಲ್ಲ ಎಂದು ರವೀನ್ ತುಕ್ರಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:  Navjot Singh Sidhu ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಇದನ್ನೂ ಓದಿ:ಬಿಜೆಪಿ ಸೇರ್ತಾರಾ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್?; ಇಂದು ಅಮಿತ್ ಶಾ, ಜೆ.ಪಿ. ನಡ್ಡಾ ಭೇಟಿ ಸಾಧ್ಯತೆ  

(I told you so he is not a stable man and not fit for the border state of Punjab Amarinder Singh on Navjot Singh Sidhu resignation)

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!