AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಧರಿಸಿದ ಮಹಿಳೆ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ; ಅಸಾದುದ್ದೀನ್ ಓವೈಸಿ ಭವಿಷ್ಯ

ಮುಂದೊಂದು ದಿನ ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. 

ಹಿಜಾಬ್ ಧರಿಸಿದ ಮಹಿಳೆ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ; ಅಸಾದುದ್ದೀನ್ ಓವೈಸಿ ಭವಿಷ್ಯ
ಅಸಾದುದ್ದೀನ್ ಓವೈಸಿ
TV9 Web
| Edited By: |

Updated on: Oct 26, 2022 | 2:24 PM

Share

ನವದೆಹಲಿ: ಬ್ರಿಟನ್‌ನಲ್ಲಿ ಭಾರತೀಯ ಮೂಲದ ರಿಷಿ ಸುನಕ್ (Rishi Sunak) ಪ್ರಧಾನಿಯಾಗುತ್ತಾರೆ ಎಂಬ ಮಾತುಗಳು ನಡೆಯುತ್ತಿದ್ದರೆ, ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಅವರು ಹಿಜಾಬ್ (Hijab) ಹೊಂದಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಟ್ವೀಟ್‌ಗೆ ಓವೈಸಿ ಪ್ರತಿಕ್ರಿಯಿಸಿದ್ದು, ಬ್ರಿಟನ್ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಿಗೆ ಪ್ರಧಾನಿಯಾಗಲು ಅವಕಾಶ ನೀಡಿದೆ. ಇದು ಭಾರತದಲ್ಲಿ ಆಗಲು ಸಾಧ್ಯವೇ? ಎಂದಿದ್ದಾರೆ.

ಮುಂದೊಂದು ದಿನ ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಬ್ರಿಟನ್​ನಲ್ಲಿ ರಿಷಿ ಸುನಕ್ ಪ್ರಧಾನಿಯಾಗಿರುವ ಕುರಿತು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಇನ್ಶಾ ಅಲ್ಲಾಹ್ ಹಿಜಾಬ್ ಧರಿಸಿದ ಹುಡುಗಿ ಭಾರತದ ಪ್ರಧಾನಿಯಾಗುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಶಾಸಕ ಯತ್ನಾಳ್​ಗೆ​ ಪ್ರೀತಿ ಇದೆ, ಅದಕ್ಕೇ ಪದೇ ಪದೇ ಹೇಳುತ್ತಾರೆ: ಅಸಾದುದ್ದೀನ್ ಓವೈಸಿ

ಓವೈಸಿ ಈ ರೀತಿ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ವಿವಾದದ ಸಂದರ್ಭದಲ್ಲಿ ಈ ವಿಷಯಗಳನ್ನು ಹೇಳಲಾಗಿತ್ತು. ನನ್ನ ಜೀವನದಲ್ಲಿ ಅಥವಾ ನನ್ನ ಜೀವನದ ನಂತರ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುತ್ತಾಳೆ ಎಂದು ಓವೈಸಿ ಹೇಳಿದ್ದರು.

ಮುಸ್ಲಿಮರನ್ನು ದೇಶದಿಂದ ತೊಲಗಿಸುವುದು ಬಿಜೆಪಿಯ ಗುರಿ: ಬಿಜೆಪಿ ಮುಸ್ಲಿಮರ ವಿರುದ್ಧವಾಗಿದೆ. ಮುಸ್ಲಿಮರನ್ನು ದೇಶದಿಂದ ತೊಲಗಿಸುವುದು ಅದರ ನಿಜವಾದ ಉದ್ದೇಶವಾಗಿದೆ ಎಂದು ಎಐಎಂಐಎಂ ಅಧ್ಯಕ್ಷ ಓವೈಸಿ ಹೇಳಿದ್ದಾರೆ. ಹಲಾಲ್ ಮಾಂಸ ದೇಶಕ್ಕೆ ಅಪಾಯಕಾರಿಯಾಗಿದೆ, ಮುಸಲ್ಮಾನನ ಗಡ್ಡ ಅಪಾಯಕಾರಿಯಾಗಿದೆ, ಮುಸಲ್ಮಾನನ ಟೋಪಿ, ಮುಸಲ್ಮಾನನ ಆಹಾರ, ಪಾನೀಯ, ಬಟ್ಟೆ, ಚಿನ್ನ ಎಲ್ಲವೂ ಅಪಾಯಕಾರಿ ಎಂದು ಸುದ್ದಿ ಹರಡುವುದು ಬಿಜೆಪಿಯ ಅಜೆಂಡಾ ಎಂದು ಓವೈಸಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?