AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಧರಿಸಿದ ಮಹಿಳೆ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ; ಅಸಾದುದ್ದೀನ್ ಓವೈಸಿ ಭವಿಷ್ಯ

ಮುಂದೊಂದು ದಿನ ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. 

ಹಿಜಾಬ್ ಧರಿಸಿದ ಮಹಿಳೆ ಮುಂದೊಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ; ಅಸಾದುದ್ದೀನ್ ಓವೈಸಿ ಭವಿಷ್ಯ
ಅಸಾದುದ್ದೀನ್ ಓವೈಸಿ
TV9 Web
| Edited By: |

Updated on: Oct 26, 2022 | 2:24 PM

Share

ನವದೆಹಲಿ: ಬ್ರಿಟನ್‌ನಲ್ಲಿ ಭಾರತೀಯ ಮೂಲದ ರಿಷಿ ಸುನಕ್ (Rishi Sunak) ಪ್ರಧಾನಿಯಾಗುತ್ತಾರೆ ಎಂಬ ಮಾತುಗಳು ನಡೆಯುತ್ತಿದ್ದರೆ, ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಅವರು ಹಿಜಾಬ್ (Hijab) ಹೊಂದಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಟ್ವೀಟ್‌ಗೆ ಓವೈಸಿ ಪ್ರತಿಕ್ರಿಯಿಸಿದ್ದು, ಬ್ರಿಟನ್ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಿಗೆ ಪ್ರಧಾನಿಯಾಗಲು ಅವಕಾಶ ನೀಡಿದೆ. ಇದು ಭಾರತದಲ್ಲಿ ಆಗಲು ಸಾಧ್ಯವೇ? ಎಂದಿದ್ದಾರೆ.

ಮುಂದೊಂದು ದಿನ ಹಿಜಾಬ್ ಧರಿಸಿರುವ ಮಹಿಳೆಯನ್ನು ಭಾರತದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಬ್ರಿಟನ್​ನಲ್ಲಿ ರಿಷಿ ಸುನಕ್ ಪ್ರಧಾನಿಯಾಗಿರುವ ಕುರಿತು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಇನ್ಶಾ ಅಲ್ಲಾಹ್ ಹಿಜಾಬ್ ಧರಿಸಿದ ಹುಡುಗಿ ಭಾರತದ ಪ್ರಧಾನಿಯಾಗುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಶಾಸಕ ಯತ್ನಾಳ್​ಗೆ​ ಪ್ರೀತಿ ಇದೆ, ಅದಕ್ಕೇ ಪದೇ ಪದೇ ಹೇಳುತ್ತಾರೆ: ಅಸಾದುದ್ದೀನ್ ಓವೈಸಿ

ಓವೈಸಿ ಈ ರೀತಿ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ವಿವಾದದ ಸಂದರ್ಭದಲ್ಲಿ ಈ ವಿಷಯಗಳನ್ನು ಹೇಳಲಾಗಿತ್ತು. ನನ್ನ ಜೀವನದಲ್ಲಿ ಅಥವಾ ನನ್ನ ಜೀವನದ ನಂತರ ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುತ್ತಾಳೆ ಎಂದು ಓವೈಸಿ ಹೇಳಿದ್ದರು.

ಮುಸ್ಲಿಮರನ್ನು ದೇಶದಿಂದ ತೊಲಗಿಸುವುದು ಬಿಜೆಪಿಯ ಗುರಿ: ಬಿಜೆಪಿ ಮುಸ್ಲಿಮರ ವಿರುದ್ಧವಾಗಿದೆ. ಮುಸ್ಲಿಮರನ್ನು ದೇಶದಿಂದ ತೊಲಗಿಸುವುದು ಅದರ ನಿಜವಾದ ಉದ್ದೇಶವಾಗಿದೆ ಎಂದು ಎಐಎಂಐಎಂ ಅಧ್ಯಕ್ಷ ಓವೈಸಿ ಹೇಳಿದ್ದಾರೆ. ಹಲಾಲ್ ಮಾಂಸ ದೇಶಕ್ಕೆ ಅಪಾಯಕಾರಿಯಾಗಿದೆ, ಮುಸಲ್ಮಾನನ ಗಡ್ಡ ಅಪಾಯಕಾರಿಯಾಗಿದೆ, ಮುಸಲ್ಮಾನನ ಟೋಪಿ, ಮುಸಲ್ಮಾನನ ಆಹಾರ, ಪಾನೀಯ, ಬಟ್ಟೆ, ಚಿನ್ನ ಎಲ್ಲವೂ ಅಪಾಯಕಾರಿ ಎಂದು ಸುದ್ದಿ ಹರಡುವುದು ಬಿಜೆಪಿಯ ಅಜೆಂಡಾ ಎಂದು ಓವೈಸಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್