AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗವಂತ್​ ಮಾನ್​​​ಗೆ ಕೃತಜ್ಞತೆ ಸಲ್ಲಿಸಿದ ಮನೀಶ್ ತಿವಾರಿ; ಹಿಂದಿನ ಸಿಎಂ ಛನ್ನಿ ಮಾಡದ್ದನ್ನು ನೀವು ಮಾಡಿದಿರಿ ಎಂದು ಟ್ವೀಟ್​

ಮನೀಶ್​ ತಿವಾರಿ ಕಾಂಗ್ರೆಸ್​​ನಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದಾರಾ? ಹೀಗೊಂದು ಪ್ರಶ್ನೆ ಹುಟ್ಟುವಂತೆ ಇತ್ತೀಚೆಗೆ ಕೆಲವು ಬಾರಿ ಅವರು ಮಾತನಾಡಿದ್ದಾರೆ. ಈ ಸಲ ಪಂಜಾಬ್​​ನಲ್ಲಿ ಕಾಂಗ್ರೆಸ್ ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲೂ ಮನೀಶ್​ ತಿವಾರಿ ಇರಲಿಲ್ಲ.

ಭಗವಂತ್​ ಮಾನ್​​​ಗೆ ಕೃತಜ್ಞತೆ ಸಲ್ಲಿಸಿದ ಮನೀಶ್ ತಿವಾರಿ; ಹಿಂದಿನ ಸಿಎಂ ಛನ್ನಿ ಮಾಡದ್ದನ್ನು ನೀವು ಮಾಡಿದಿರಿ ಎಂದು ಟ್ವೀಟ್​
ಮನೀಶ್ ತಿವಾರಿ
TV9 Web
| Edited By: |

Updated on: Mar 16, 2022 | 5:17 PM

Share

ಪಂಜಾಬ್​ ನೂತನ ಮುಖ್ಯಮಂತ್ರಿ ಭಗವಂತ್ ಮಾನ್​ ಅವರಿಗೆ ಕಾಂಗ್ರೆಸ್ ನಾಯಕರ ಮನೀಶ್​ ತಿವಾರಿ ಕೃತಜ್ಞತೆ ಸಲ್ಲಿಸಿದ್ದಾರೆ. ಇಂದು ಪಂಜಾಬ್ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಮಾನ್​, ಈ ಸಮಾರಂಭಕ್ಕೆ ಮನೀಶ್​ ತಿವಾರಿಯವರನ್ನು ಆಹ್ವಾನಿಸಿದ್ದರು. ಅದಕ್ಕಾಗಿ ತಿವಾರಿ ಧನ್ಯವಾದ ಸಲ್ಲಿಸಿದ್ದಾರೆ. ಕಳೆದ ವರ್ಷ ಕ್ಯಾಪ್ಟನ್​ ಅಮರಿಂದರ್ ಸಿಂಗ್​ ಸಿಎಂ ಹುದ್ದೆಯಿಂದ ಕೆಳಗಿಳಿದು ಚರಣಜಿತ್​ ಸಿಂಗ್ ಛನ್ನಿ ಪಂಜಾಬ್​ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇರಲಿಲ್ಲ. ನಮ್ಮದೇ ಪಕ್ಷದ ಸಮಾರಂಭಕ್ಕೆ ನನಗೆ ಆಮಂತ್ರಣ ಕೊಟ್ಟಿರಲಿಲ್ಲ, ಆದರೆ ಭಗವಂತ್​ ಮಾನ್​ ಆಹ್ವಾನ ನೀಡಿದ್ದು ಖುಷಿಯಾಯಿತು ಎಂದು ಹೇಳಿಕೊಂಡಿದ್ದಾರೆ.

ಲೋಕಸಭೆ ಅಧಿವೇಶನದ ನಿಮಿತ್ತ ಮನೀಶ್ ತಿವಾರಿ ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಆದರೆ ಅವರಿಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಭಗವಂತ್ ಮಾನ್​ ಕಳಿಸಿದ ಆಮಂತ್ರಣ ಪತ್ರಿಕೆಯ ಫೋಟೋ ಶೇರ್​ ಮಾಡಿದ ಮನೀಶ್​ ತಿವಾರಿ, ಪಂಜಾಬ್​ ನೂತನ ಸಿಎಂ ಭಗವಂತ್ ಮಾನ್​​ರಿಗೆ ಶುಭ ಹಾರೈಕೆಗಳು. ಅದರಲ್ಲೂ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕೆ ಧನ್ಯವಾದ. ಆದರೆ ವಿಪರ್ಯಾಸವೆಂದರೆ ಕಳೆದ ವರ್ಷ ನನ್ನದೇ ಪಕ್ಷದ ಚರಣಜಿತ್​ ಸಿಂಗ್​ ಛನ್ನಿ ಪ್ರಮಾಣ ವಚನ ಸ್ವೀಕಾರಕ್ಕೆ ನನಗೆ ಆಹ್ವಾನ ಇರಲಿಲ್ಲ. ಪಾರ್ಲಿಮೆಂಟ್​​ನಲ್ಲಿ ಸೆಷನ್ಸ್ ನಡೆಯುತ್ತಿರುವ ಕಾರಣ ನನಗೆ ಪಂಜಾಬ್​ಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ಬರೆದುಕೊಂಡಿದ್ದಾರೆ.

ಮನೀಶ್​ ತಿವಾರಿ ಕಾಂಗ್ರೆಸ್​​ನಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದಾರಾ? ಹೀಗೊಂದು ಪ್ರಶ್ನೆ ಹುಟ್ಟುವಂತೆ ಇತ್ತೀಚೆಗೆ ಕೆಲವು ಬಾರಿ ಅವರು ಮಾತನಾಡಿದ್ದಾರೆ. ಈ ಸಲ ಪಂಜಾಬ್​​ನಲ್ಲಿ ಕಾಂಗ್ರೆಸ್ ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲೂ ಮನೀಶ್​ ತಿವಾರಿ ಇರಲಿಲ್ಲ. ಆ ಬಗ್ಗೆ ವ್ಯಂಗ್ಯ ಮಾಡಿದ್ದ ತಿವಾರಿ, ಪಟ್ಟಿಯಲ್ಲಿ ನನ್ನ ಹೆಸರಿದ್ದರೇ ಆಶ್ಚರ್ಯವಾಗುತ್ತಿತ್ತು ಎಂದು ವ್ಯಂಗ್ಯವಾಡಿದ್ದರು. 2020ರಲ್ಲಿ ಮನೀಶ್​ ತಿವಾರಿ, ಗುಲಾಂ ನಬಿ ಆಜಾದಿ ಸೇರಿ ಜಿ-23 ನಾಯಕರು ಕಾಂಗ್ರೆಸ್​ ನಾಯಕತ್ವದ ವಿರುದ್ಧ ರೆಬಲ್ ಆಗಿದ್ದರು. ಅದನ್ನು ಸೋನಿಯಾ ಗಾಂಧಿಗೆ ಬಹಿರಂಗವಾಗಿ ಪತ್ರ ಬರೆಯುವ ಮೂಲಕ ವ್ಯಕ್ತಪಡಿಸಿದ್ದರು. ಕಾಂಗ್ರೆಸ್​ನ್ನು ತುರ್ತಾಗಿ ನವೀಕರಿಸುವ ಅಗತ್ಯವಿದೆ. ಅದಕ್ಕಾಗಿ ಪಕ್ಷದ ನಾಯಕತ್ವವನ್ನು ಪೂರ್ಣಾವಧಿಗೆ ಯಾರಾದರೂ ವಹಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಹೇಳಿದ್ದರು. ಆಗಿನಿಂದಲೂ ಪಕ್ಷದ ಬಗ್ಗೆ ಅಸಮಾಧಾನವನ್ನು ಅಲ್ಲಲ್ಲಿ, ಸೂಕ್ಷ್ಮವಾಗಿಯೇ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​​: ಅಸ್ಸಾಂನಲ್ಲಿ 24 ಗಂಟೆಯಲ್ಲಿ ಇಬ್ಬರು ರೇಪಿಸ್ಟ್​​ಗಳಿಗೆ ಗುಂಡಿಕ್ಕಿ ಕೊಂದ ಪೊಲೀಸರು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ