AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗವಂತ್​ ಮಾನ್​​​ಗೆ ಕೃತಜ್ಞತೆ ಸಲ್ಲಿಸಿದ ಮನೀಶ್ ತಿವಾರಿ; ಹಿಂದಿನ ಸಿಎಂ ಛನ್ನಿ ಮಾಡದ್ದನ್ನು ನೀವು ಮಾಡಿದಿರಿ ಎಂದು ಟ್ವೀಟ್​

ಮನೀಶ್​ ತಿವಾರಿ ಕಾಂಗ್ರೆಸ್​​ನಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದಾರಾ? ಹೀಗೊಂದು ಪ್ರಶ್ನೆ ಹುಟ್ಟುವಂತೆ ಇತ್ತೀಚೆಗೆ ಕೆಲವು ಬಾರಿ ಅವರು ಮಾತನಾಡಿದ್ದಾರೆ. ಈ ಸಲ ಪಂಜಾಬ್​​ನಲ್ಲಿ ಕಾಂಗ್ರೆಸ್ ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲೂ ಮನೀಶ್​ ತಿವಾರಿ ಇರಲಿಲ್ಲ.

ಭಗವಂತ್​ ಮಾನ್​​​ಗೆ ಕೃತಜ್ಞತೆ ಸಲ್ಲಿಸಿದ ಮನೀಶ್ ತಿವಾರಿ; ಹಿಂದಿನ ಸಿಎಂ ಛನ್ನಿ ಮಾಡದ್ದನ್ನು ನೀವು ಮಾಡಿದಿರಿ ಎಂದು ಟ್ವೀಟ್​
ಮನೀಶ್ ತಿವಾರಿ
TV9 Web
| Updated By: Lakshmi Hegde|

Updated on: Mar 16, 2022 | 5:17 PM

Share

ಪಂಜಾಬ್​ ನೂತನ ಮುಖ್ಯಮಂತ್ರಿ ಭಗವಂತ್ ಮಾನ್​ ಅವರಿಗೆ ಕಾಂಗ್ರೆಸ್ ನಾಯಕರ ಮನೀಶ್​ ತಿವಾರಿ ಕೃತಜ್ಞತೆ ಸಲ್ಲಿಸಿದ್ದಾರೆ. ಇಂದು ಪಂಜಾಬ್ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಮಾನ್​, ಈ ಸಮಾರಂಭಕ್ಕೆ ಮನೀಶ್​ ತಿವಾರಿಯವರನ್ನು ಆಹ್ವಾನಿಸಿದ್ದರು. ಅದಕ್ಕಾಗಿ ತಿವಾರಿ ಧನ್ಯವಾದ ಸಲ್ಲಿಸಿದ್ದಾರೆ. ಕಳೆದ ವರ್ಷ ಕ್ಯಾಪ್ಟನ್​ ಅಮರಿಂದರ್ ಸಿಂಗ್​ ಸಿಎಂ ಹುದ್ದೆಯಿಂದ ಕೆಳಗಿಳಿದು ಚರಣಜಿತ್​ ಸಿಂಗ್ ಛನ್ನಿ ಪಂಜಾಬ್​ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇರಲಿಲ್ಲ. ನಮ್ಮದೇ ಪಕ್ಷದ ಸಮಾರಂಭಕ್ಕೆ ನನಗೆ ಆಮಂತ್ರಣ ಕೊಟ್ಟಿರಲಿಲ್ಲ, ಆದರೆ ಭಗವಂತ್​ ಮಾನ್​ ಆಹ್ವಾನ ನೀಡಿದ್ದು ಖುಷಿಯಾಯಿತು ಎಂದು ಹೇಳಿಕೊಂಡಿದ್ದಾರೆ.

ಲೋಕಸಭೆ ಅಧಿವೇಶನದ ನಿಮಿತ್ತ ಮನೀಶ್ ತಿವಾರಿ ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಆದರೆ ಅವರಿಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಭಗವಂತ್ ಮಾನ್​ ಕಳಿಸಿದ ಆಮಂತ್ರಣ ಪತ್ರಿಕೆಯ ಫೋಟೋ ಶೇರ್​ ಮಾಡಿದ ಮನೀಶ್​ ತಿವಾರಿ, ಪಂಜಾಬ್​ ನೂತನ ಸಿಎಂ ಭಗವಂತ್ ಮಾನ್​​ರಿಗೆ ಶುಭ ಹಾರೈಕೆಗಳು. ಅದರಲ್ಲೂ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕೆ ಧನ್ಯವಾದ. ಆದರೆ ವಿಪರ್ಯಾಸವೆಂದರೆ ಕಳೆದ ವರ್ಷ ನನ್ನದೇ ಪಕ್ಷದ ಚರಣಜಿತ್​ ಸಿಂಗ್​ ಛನ್ನಿ ಪ್ರಮಾಣ ವಚನ ಸ್ವೀಕಾರಕ್ಕೆ ನನಗೆ ಆಹ್ವಾನ ಇರಲಿಲ್ಲ. ಪಾರ್ಲಿಮೆಂಟ್​​ನಲ್ಲಿ ಸೆಷನ್ಸ್ ನಡೆಯುತ್ತಿರುವ ಕಾರಣ ನನಗೆ ಪಂಜಾಬ್​ಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ಬರೆದುಕೊಂಡಿದ್ದಾರೆ.

ಮನೀಶ್​ ತಿವಾರಿ ಕಾಂಗ್ರೆಸ್​​ನಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದಾರಾ? ಹೀಗೊಂದು ಪ್ರಶ್ನೆ ಹುಟ್ಟುವಂತೆ ಇತ್ತೀಚೆಗೆ ಕೆಲವು ಬಾರಿ ಅವರು ಮಾತನಾಡಿದ್ದಾರೆ. ಈ ಸಲ ಪಂಜಾಬ್​​ನಲ್ಲಿ ಕಾಂಗ್ರೆಸ್ ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲೂ ಮನೀಶ್​ ತಿವಾರಿ ಇರಲಿಲ್ಲ. ಆ ಬಗ್ಗೆ ವ್ಯಂಗ್ಯ ಮಾಡಿದ್ದ ತಿವಾರಿ, ಪಟ್ಟಿಯಲ್ಲಿ ನನ್ನ ಹೆಸರಿದ್ದರೇ ಆಶ್ಚರ್ಯವಾಗುತ್ತಿತ್ತು ಎಂದು ವ್ಯಂಗ್ಯವಾಡಿದ್ದರು. 2020ರಲ್ಲಿ ಮನೀಶ್​ ತಿವಾರಿ, ಗುಲಾಂ ನಬಿ ಆಜಾದಿ ಸೇರಿ ಜಿ-23 ನಾಯಕರು ಕಾಂಗ್ರೆಸ್​ ನಾಯಕತ್ವದ ವಿರುದ್ಧ ರೆಬಲ್ ಆಗಿದ್ದರು. ಅದನ್ನು ಸೋನಿಯಾ ಗಾಂಧಿಗೆ ಬಹಿರಂಗವಾಗಿ ಪತ್ರ ಬರೆಯುವ ಮೂಲಕ ವ್ಯಕ್ತಪಡಿಸಿದ್ದರು. ಕಾಂಗ್ರೆಸ್​ನ್ನು ತುರ್ತಾಗಿ ನವೀಕರಿಸುವ ಅಗತ್ಯವಿದೆ. ಅದಕ್ಕಾಗಿ ಪಕ್ಷದ ನಾಯಕತ್ವವನ್ನು ಪೂರ್ಣಾವಧಿಗೆ ಯಾರಾದರೂ ವಹಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಹೇಳಿದ್ದರು. ಆಗಿನಿಂದಲೂ ಪಕ್ಷದ ಬಗ್ಗೆ ಅಸಮಾಧಾನವನ್ನು ಅಲ್ಲಲ್ಲಿ, ಸೂಕ್ಷ್ಮವಾಗಿಯೇ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​​: ಅಸ್ಸಾಂನಲ್ಲಿ 24 ಗಂಟೆಯಲ್ಲಿ ಇಬ್ಬರು ರೇಪಿಸ್ಟ್​​ಗಳಿಗೆ ಗುಂಡಿಕ್ಕಿ ಕೊಂದ ಪೊಲೀಸರು

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್