‘ನಾನು ಅಲ್ಲಿಗೆ ಭೇಟಿ ನೀಡಿದಾಗ ಭಯಗೊಂಡಿದ್ದೆ’: ಜಮ್ಮು ಕಾಶ್ಮೀರ ಭೇಟಿಯನ್ನು ನೆನಪಿಸಿಕೊಂಡ ಕೇಂದ್ರ ಮಾಜಿ ಗೃಹ ಸಚಿವ ಸುಶೀಲ್‌ಕುಮಾರ್ ಶಿಂಧೆ

2012 ರಲ್ಲಿ ಪಿ ಚಿದಂಬರಂ ನಂತರ ಶಿಂಧೆ ಕೇಂದ್ರ ಗೃಹ ಸಚಿವರಾದರು. ಅವರ ಭೇಟಿಯ ಸಮಯದಲ್ಲಿ, ಕಾಂಗ್ರೆಸ್ ನಾಯಕ ಶ್ರೀನಗರದ ಲಾಲ್ ಚೌಕ್‌ನಲ್ಲಿ ಶಾಪಿಂಗ್ ಮಾಡಿದರು. ಅವರು ತಮ್ಮ ಕುಟುಂಬಕ್ಕಾಗಿ ಶಾಪಿಂಗ್ ಮಾಡಲು ಜಮ್ಮು ಮತ್ತು ಕಾಶ್ಮೀರದ ರಾಜಧಾನಿಯಲ್ಲಿರುವ ಕಾಶ್ಮೀರ ಆರ್ಟ್ಸ್ ಶೋರೂಮ್‌ಗೂ ಹೋಗಿದ್ದರು.ಆಗ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಕೇಂದ್ರ ಸಚಿವರ ಜೊತೆಗಿದ್ದರು.

‘ನಾನು ಅಲ್ಲಿಗೆ ಭೇಟಿ ನೀಡಿದಾಗ ಭಯಗೊಂಡಿದ್ದೆ’: ಜಮ್ಮು ಕಾಶ್ಮೀರ ಭೇಟಿಯನ್ನು ನೆನಪಿಸಿಕೊಂಡ ಕೇಂದ್ರ ಮಾಜಿ ಗೃಹ ಸಚಿವ ಸುಶೀಲ್‌ಕುಮಾರ್ ಶಿಂಧೆ
ಸುಶೀಲ್ ಕುಮಾರ್ ಶಿಂಧೆ
Follow us
|

Updated on: Sep 10, 2024 | 7:05 PM

ದೆಹಲಿ ಸೆಪ್ಟೆಂಬರ್ 10: ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್‌ಕುಮಾರ್ ಶಿಂಧೆ (Sushilkumar Shinde) ಅವರು ಮಂಗಳವಾರ ತಾವು ಸಚಿವರಾಗಿದ್ದ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಲಾಲ್ ಚೌಕ್‌ಗೆ ಭೇಟಿ ನೀಡಿದಾಗ ಭಯಗೊಂಡಿದ್ದೆ ಎಂದು ಹೇಳಿದ್ದಾರೆ. ‘Five Decades in Politics (ರಾಜಕೀಯದಲ್ಲಿ ಐದು ದಶಕಗಳು)’ ಎಂಬ ತಮ್ಮ ಆತ್ಮಚರಿತ್ರೆ ಬಿಡುಗಡೆ ಸಮಾರಂಭದಲ್ಲಿ ಶಿಂಧೆ ಅವರು 2012ರಲ್ಲಿ ಕಣಿವೆಗೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು.

“ಗೃಹ ಸಚಿವರಾಗುವ ಮೊದಲು, ನಾನು ಶಿಕ್ಷಣ ತಜ್ಞ ವಿಜಯ್ ಧಾರ್ ಅವರನ್ನು ಭೇಟಿ ಮಾಡಿದ್ದೆ. ನಾನು ಅವರ ಬಳಿ ಸಲಹೆ ಕೇಳುತ್ತಿದ್ದೆ. ಅವರು ನನಗೆ ಅಲ್ಲಿಲ್ಲಿ ಸುತ್ತುವ ಬದಲು ಲಾಲ್ ಚೌಕ್​​ಗೆ (ಶ್ರೀನಗರದಲ್ಲಿ) ಭೇಟಿ ನೀಡಿ, ಜನರನ್ನು ಭೇಟಿ ಮಾಡಿ ಮತ್ತು ದಾಲ್ ಸರೋವರ ನೋಡಿ ಬನ್ನಿ ಎಂದರು.

ಶಿಂಧೆ ಹೇಳಿದ್ದೇನು?

“ಆ ಸಲಹೆಯು ನನಗೆ ಪ್ರಚಾರವನ್ನು ನೀಡಿತು. ಯಾವುದೇ ಭಯವಿಲ್ಲದೆ ಅಲ್ಲಿಗೆ ಹೋಗುವ ಗೃಹ ಮಂತ್ರಿ ಇಲ್ಲಿದ್ದಾರೆ ಎಂದು ಜನರು ಭಾವಿಸಿದ್ದಾರೆ, ಲೇಖಿನ್ ಮೇರಿ ಫಟ್  ತೀಥಿ ವೋ ಕಿಸ್ಕೋ ಬತಾವೂಂ? (ಆದರೆ ನಾನು ಭಯಗೊಂಡಿದ್ದೇನೆ ಎಂದು ನಾನು ಯಾರಿಗೆ ಹೇಳಲಿ?) ನಾನು ಇದನ್ನು ನಿಮಗೆ ನಗಿಸಲು ಹೇಳಿದ್ದೇನೆ, ಆದರೆ ಒಬ್ಬ ಮಾಜಿ ಪೊಲೀಸ್ ಈ ರೀತಿ ಮಾತನಾಡಲು ಸಾಧ್ಯವಿಲ್ಲ, ”ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

2012 ರಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತದ ಗೃಹ ಸಚಿವರಾಗಿ ಶಿಂಧೆ ಅವರನ್ನು ನೇಮಿಸಿದರು.

2012ರಲ್ಲಿ ಲಾಲ್ ಚೌಕ್‌ಗೆ ಭೇಟಿ ನೀಡಿದ್ದರು ಶಿಂಧೆ

2012 ರಲ್ಲಿ ಪಿ ಚಿದಂಬರಂ ನಂತರ ಶಿಂಧೆ ಕೇಂದ್ರ ಗೃಹ ಸಚಿವರಾದರು. ಅವರ ಭೇಟಿಯ ಸಮಯದಲ್ಲಿ, ಕಾಂಗ್ರೆಸ್ ನಾಯಕ ಶ್ರೀನಗರದ ಲಾಲ್ ಚೌಕ್‌ನಲ್ಲಿ ಶಾಪಿಂಗ್ ಮಾಡಿದರು. ಅವರು ತಮ್ಮ ಕುಟುಂಬಕ್ಕಾಗಿ ಶಾಪಿಂಗ್ ಮಾಡಲು ಜಮ್ಮು ಮತ್ತು ಕಾಶ್ಮೀರದ ರಾಜಧಾನಿಯಲ್ಲಿರುವ ಕಾಶ್ಮೀರ ಆರ್ಟ್ಸ್ ಶೋರೂಮ್‌ಗೂ ಹೋಗಿದ್ದರು.ಆಗ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಕೇಂದ್ರ ಸಚಿವರ ಜೊತೆಗಿದ್ದರು.

ಶಿಂಧೆ ಶ್ರೀನಗರದ ಗಡಿಯಾರ ಗೋಪುರಕ್ಕೂ ಭೇಟಿ ನೀಡಿದ್ದರು. ‘ಘಂಟಾ ಘರ್’ ಎಂದೂ ಕರೆಯಲ್ಪಡುವ ಗಡಿಯಾರ ಗೋಪುರವನ್ನು ಮಾಜಿ ಮುಖ್ಯಮಂತ್ರಿ ಶೇಖ್ ಅಬ್ದುಲ್ಲಾ ಅವರ ಕೋರಿಕೆಯ ಮೇರೆಗೆ 1978 ರಲ್ಲಿ ನಿರ್ಮಿಸಲಾಯಿತು. 2008 ಮತ್ತು 2010 ರಲ್ಲಿ ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳು ಭುಗಿಲೆದ್ದಾಗ, ಗೋಪುರದ ಮೇಲೆ ಪಾಕಿಸ್ತಾನದ ಧ್ವಜವನ್ನು ಹಾರಿಸಿದ ಸಂದರ್ಭಗಳಿವೆ.

ಗೃಹ ಸಚಿವರಾಗಿದ್ದ ಶಿಂಧೆ ಅವರ ಅಧಿಕಾರಾವಧಿಯಲ್ಲಿ 26/11 ಮುಂಬೈ ದಾಳಿಕೋರ ಅಜ್ಮಲ್ ಕಸಬ್ ಮತ್ತು ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರು ಮತ್ತು 2012 ರ ದೆಹಲಿ ಗ್ಯಾಂಗ್ರೇಪ್ ಪ್ರಕರಣದ ವಿಚಾರಣೆಗಳು ನಡೆದು ಅಪರಾಧಿಗಳನ್ನು ಗಲ್ಲಿಗೇರಿಸಲಾಗಿತ್ತು.

ಶಿಂಧೆ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ

ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ಲಾ ಅವರು ಎಕ್ಸ್ ಪೋಸ್ಟ್‌ನಲ್ಲಿ, ಯುಪಿಎ ಯುಗದ ಗೃಹ ಸಚಿವ ಸುಶೀಲ್ ಶಿಂಧೆ ಅವರು ಜಮ್ಮು ಕಾಶ್ಮೀರಕ್ಕೆ ಹೋಗಲು ಹೆದರುತ್ತಿದ್ದರು ಎಂದು ಒಪ್ಪಿಕೊಂಡಿದ್ದಾರೆ. ಅವರು ಕಾಶ್ಮೀರಕ್ಕೆ ಹೋಗಿ ದಾಲ್ ಸರೋವರದಲ್ಲಿ ಫೋಟೊ ತೆಗೆಸಿಕೊಳ್ಳುವಂತೆ ಹೇಳಿ,ಯುಪಿಎ ಅದನ್ನು ದೊಡ್ಡದಾಗಿ ಬಿಂಬಿಸಿತು.. ಆದರೆ ನನಗೆ ಭಯವಾಯಿತು ಎಂದಿದ್ದಾರೆ. ಇಂದು ರಾಹುಲ್ ಗಾಂಧಿ ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆ ಮತ್ತು ಸ್ನೋ ಫೈಟ್ ನ್ನು ಆರಾಮವಾಗಿ ನೋಡಿದ್ದಾರೆ! ಆದರೆ ಎನ್ ಸಿ ಮತ್ತು ಕಾಂಗ್ರೆಸ್ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯ ದಿನಗಳಿಗೆ ಹಿಂತಿರುಗಿಸಲು ಬಯಸುತ್ತವೆ ಎಂದು ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ