AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಹಿಜಾಬ್​ ಮುಟ್ಟಲು ಬಂದವರ ಕೈ ಕತ್ತರಿಸುತ್ತೇನೆ; ಸಮಾಜವಾದಿ ಪಾರ್ಟಿ ನಾಯಕಿಯಿಂದ ಎಚ್ಚರಿಕೆ

ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಆಚರಣೆ ನಡೆಸುವಂತಿಲ್ಲ. ಧಾರ್ಮಿಕ ಉಡುಪುಗಳನ್ನು ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಕೂಡ ತೀರ್ಪು ನೀಡಿದೆ. ಇಷ್ಟಾದರೂ ಅಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಮುಸ್ಲಿಮರ ಹಿಜಾಬ್​ ಮುಟ್ಟಲು ಬಂದವರ ಕೈ ಕತ್ತರಿಸುತ್ತೇನೆ; ಸಮಾಜವಾದಿ ಪಾರ್ಟಿ ನಾಯಕಿಯಿಂದ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Feb 12, 2022 | 2:54 PM

Share

ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್​ ಮತ್ತು ಕೇಸರಿ ಶಾಲು ವಿವಾದ ಹೆಚ್ಚಾಗಿ, ಅದಕ್ಕೀಗ ರಾಷ್ಟ್ರ-ಅಂತಾಷ್ಟ್ರೀಯ ಮಟ್ಟದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಸಮಾಜವಾದಿ ಪಕ್ಷದ ಮಹಿಳಾ ಮುಖಂಡರೊಬ್ಬರು ಹಿಜಾಬ್​ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಾರಾದರೂ ಸರಿ, ಹಿಜಾಬ್​ನ್ನು ಮುಟ್ಟಲು ಬಂದರೆ ಅವರ ಕೈ ಕತ್ತರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಅಂದಹಾಗೇ, ಈ ರೀತಿ ಮಾತನಾಡಿದ್ದು ರುಬೀನಾ ಖಾನಮ್​. ಮುಸ್ಲಿಮರ ಹಿಜಾಬ್​ ತಂಟೆಗೆ ಬಂದರೆ ನಾವೂ ಸುಮ್ಮನಿರುವುದಿಲ್ಲ ಎಂದು ಆವಾಜ್ ಹಾಕಿದ್ದಾರೆ. 

ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್​ ಗಲಾಟೆ ಮಿತಿಮೀರಿದೆ. ಫೆ.16ರವರೆಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಆಚರಣೆ ನಡೆಸುವಂತಿಲ್ಲ. ಧಾರ್ಮಿಕ ಉಡುಪುಗಳನ್ನು ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಕೂಡ ತೀರ್ಪು ನೀಡಿದೆ. ಇಷ್ಟಾದರೂ ಅಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಹಿಜಾಬ್​ ವಿವಾದ ಸುದ್ದಿಯಾಗುತ್ತಿದ್ದು, ಪಾಕಿಸ್ತಾನ ಕೂಡ ಇದಕ್ಕೆ ಸಂಬಂಧಪಟ್ಟ ಹೇಳಿಕೆ ನೀಡಿದೆ.

ಈ ಮಧ್ಯೆ  ಹಿಜಾಬ್​ ವಿವಾದವನ್ನು ಇನ್ನಷ್ಟು ಹೆಚ್ಚಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ಪ್ರಯತ್ನ ಮಾಡುತ್ತಿದೆ. ಅದೂ ಕೂಡ ನಿಷೇಧಿತ ಖಲಿಸ್ತಾನಿ ಸಂಘಟನೆಯಾದ ಸಿಖ್​ ಫಾರ್​ ಜಸ್ಟೀಸ್​ ಮೂಲಕ ಜಿಜಾಬ್ ವಿವಾದಕ್ಕೆ ಉತ್ತೇಜನ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಮಾಹಿತಿ ನೀಡಿವೆ ಎಂಬುದು ಮೂಲಗಳಿಂದ ತಿಳಿದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ. ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು. ಈ ಮೂಲಕ ಇಲ್ಲಿನ ಪರ-ವಿರೋಧ ವಿವಾದವನ್ನು ಇನ್ನಷ್ಟು ಹೆಚ್ಚಿಸಬಹುದು ಎಂದೂ ದೇಶದ ಗುಪ್ತಚರ ಇಲಾಖೆಗಳು ಎಚ್ಚರಿಕೆ ನೀಡಿವೆ.

ಭಾರತದ ರಾಜಸ್ಥಾನ, ದೆಹಲಿ, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಉರ್ದುಸ್ತಾನ್​ ಪರಿಕಲ್ಪನೆಗೆ ಉತ್ತೇಜನ ನೀಡಲು, ಈ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಹಿಜಾಬ್​ ಜನಾಭಿಪ್ರಾಯ ಚಳವಳಿ ಪ್ರಾರಂಭಿಸಲು ಮುಸ್ಲಿಮರಿಗೆ ಕರೆ ನೀಡಿದೆ ಎಂದೂ ಹೇಳಲಾಗಿದೆ. ಅಷ್ಟೇ ಅಲ್ಲ, ಎಸ್​ಎಫ್​ಜೆ ಮುಖ್ಯಸ್ಥ ಈಗಾಗಲೇ ವಿಡಿಯೋ ಸಂದೇಶದ ಮೂಲಕ ಭಾರತೀಯ ಮುಸ್ಲಿಮರನ್ನು ಪ್ರಚೋದಿಸಿದ್ದಾನೆ ಎಂದೂ ತಿಳಿಸಿಲಾಗಿದೆ.

ಇದನ್ನೂ ಓದಿ: IPL 2022 Auction: ವೇದಿಕೆಯಲ್ಲೇ ಕುಸಿದು ಬಿದ್ದ ಹರಾಜುದಾರ ಹ್ಯೂ ಎಡ್ಮಿಡ್ಸ್! ಅರ್ಧಕ್ಕೆ ನಿಂತ ಐಪಿಎಲ್ ಹರಾಜು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ