AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಹಿಜಾಬ್​ ಮುಟ್ಟಲು ಬಂದವರ ಕೈ ಕತ್ತರಿಸುತ್ತೇನೆ; ಸಮಾಜವಾದಿ ಪಾರ್ಟಿ ನಾಯಕಿಯಿಂದ ಎಚ್ಚರಿಕೆ

ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಆಚರಣೆ ನಡೆಸುವಂತಿಲ್ಲ. ಧಾರ್ಮಿಕ ಉಡುಪುಗಳನ್ನು ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಕೂಡ ತೀರ್ಪು ನೀಡಿದೆ. ಇಷ್ಟಾದರೂ ಅಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಮುಸ್ಲಿಮರ ಹಿಜಾಬ್​ ಮುಟ್ಟಲು ಬಂದವರ ಕೈ ಕತ್ತರಿಸುತ್ತೇನೆ; ಸಮಾಜವಾದಿ ಪಾರ್ಟಿ ನಾಯಕಿಯಿಂದ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 12, 2022 | 2:54 PM

Share

ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್​ ಮತ್ತು ಕೇಸರಿ ಶಾಲು ವಿವಾದ ಹೆಚ್ಚಾಗಿ, ಅದಕ್ಕೀಗ ರಾಷ್ಟ್ರ-ಅಂತಾಷ್ಟ್ರೀಯ ಮಟ್ಟದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಸಮಾಜವಾದಿ ಪಕ್ಷದ ಮಹಿಳಾ ಮುಖಂಡರೊಬ್ಬರು ಹಿಜಾಬ್​ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಾರಾದರೂ ಸರಿ, ಹಿಜಾಬ್​ನ್ನು ಮುಟ್ಟಲು ಬಂದರೆ ಅವರ ಕೈ ಕತ್ತರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಅಂದಹಾಗೇ, ಈ ರೀತಿ ಮಾತನಾಡಿದ್ದು ರುಬೀನಾ ಖಾನಮ್​. ಮುಸ್ಲಿಮರ ಹಿಜಾಬ್​ ತಂಟೆಗೆ ಬಂದರೆ ನಾವೂ ಸುಮ್ಮನಿರುವುದಿಲ್ಲ ಎಂದು ಆವಾಜ್ ಹಾಕಿದ್ದಾರೆ. 

ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್​ ಗಲಾಟೆ ಮಿತಿಮೀರಿದೆ. ಫೆ.16ರವರೆಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯಲ್ಲಿ ಧಾರ್ಮಿಕ ಆಚರಣೆ ನಡೆಸುವಂತಿಲ್ಲ. ಧಾರ್ಮಿಕ ಉಡುಪುಗಳನ್ನು ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಕೂಡ ತೀರ್ಪು ನೀಡಿದೆ. ಇಷ್ಟಾದರೂ ಅಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಹಿಜಾಬ್​ ವಿವಾದ ಸುದ್ದಿಯಾಗುತ್ತಿದ್ದು, ಪಾಕಿಸ್ತಾನ ಕೂಡ ಇದಕ್ಕೆ ಸಂಬಂಧಪಟ್ಟ ಹೇಳಿಕೆ ನೀಡಿದೆ.

ಈ ಮಧ್ಯೆ  ಹಿಜಾಬ್​ ವಿವಾದವನ್ನು ಇನ್ನಷ್ಟು ಹೆಚ್ಚಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐ ಪ್ರಯತ್ನ ಮಾಡುತ್ತಿದೆ. ಅದೂ ಕೂಡ ನಿಷೇಧಿತ ಖಲಿಸ್ತಾನಿ ಸಂಘಟನೆಯಾದ ಸಿಖ್​ ಫಾರ್​ ಜಸ್ಟೀಸ್​ ಮೂಲಕ ಜಿಜಾಬ್ ವಿವಾದಕ್ಕೆ ಉತ್ತೇಜನ ನೀಡಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಮಾಹಿತಿ ನೀಡಿವೆ ಎಂಬುದು ಮೂಲಗಳಿಂದ ತಿಳಿದಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ. ಭಾರತದಲ್ಲಿರುವ ಕೆಲವರು ದೇಶ ವಿರೋಧಿಗಳು ಸಿಖ್​ ಫಾರ್ ಜಸ್ಟೀಸ್​ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುರನ್ನು ಸೇರಿಕೊಂಡು ಇಲ್ಲಿ ಹಿಜಾಬ್​ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಬಹುದು. ಈ ಮೂಲಕ ಇಲ್ಲಿನ ಪರ-ವಿರೋಧ ವಿವಾದವನ್ನು ಇನ್ನಷ್ಟು ಹೆಚ್ಚಿಸಬಹುದು ಎಂದೂ ದೇಶದ ಗುಪ್ತಚರ ಇಲಾಖೆಗಳು ಎಚ್ಚರಿಕೆ ನೀಡಿವೆ.

ಭಾರತದ ರಾಜಸ್ಥಾನ, ದೆಹಲಿ, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಉರ್ದುಸ್ತಾನ್​ ಪರಿಕಲ್ಪನೆಗೆ ಉತ್ತೇಜನ ನೀಡಲು, ಈ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಹಿಜಾಬ್​ ಜನಾಭಿಪ್ರಾಯ ಚಳವಳಿ ಪ್ರಾರಂಭಿಸಲು ಮುಸ್ಲಿಮರಿಗೆ ಕರೆ ನೀಡಿದೆ ಎಂದೂ ಹೇಳಲಾಗಿದೆ. ಅಷ್ಟೇ ಅಲ್ಲ, ಎಸ್​ಎಫ್​ಜೆ ಮುಖ್ಯಸ್ಥ ಈಗಾಗಲೇ ವಿಡಿಯೋ ಸಂದೇಶದ ಮೂಲಕ ಭಾರತೀಯ ಮುಸ್ಲಿಮರನ್ನು ಪ್ರಚೋದಿಸಿದ್ದಾನೆ ಎಂದೂ ತಿಳಿಸಿಲಾಗಿದೆ.

ಇದನ್ನೂ ಓದಿ: IPL 2022 Auction: ವೇದಿಕೆಯಲ್ಲೇ ಕುಸಿದು ಬಿದ್ದ ಹರಾಜುದಾರ ಹ್ಯೂ ಎಡ್ಮಿಡ್ಸ್! ಅರ್ಧಕ್ಕೆ ನಿಂತ ಐಪಿಎಲ್ ಹರಾಜು

Follow Us
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್