Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ನಾನು ಮಾಡುತ್ತಿದ್ದ ಕೆಲಸ ಮುಂದುವರಿಸುವೆ: ಜೈಲಿನಿಂದ ಬಿಡುಗಡೆಯಾದ ನಂತರ ಮೊಹಮ್ಮದ್ ಜುಬೇರ್ ಮಾತು

ತಿಹಾರ್ ಜೈಲಿನಿಂದ ಹೊರಬಂದ ಒಂದು ದಿನದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜುಬೇರ್ ಗೌರವಾನ್ವಿತ ಸುಪ್ರೀಂ ಕೋರ್ಟ್ ನನಗೆ ಯಾವುದೇ ನಿರ್ಬಂಧ  ವಿಧಿಸಿಲ್ಲ. ನಾನು ಇಲ್ಲಿಯವರೆಗೆ ಮಾಡುತ್ತಿದ್ದ ಕೆಲಸಗಳನ್ನು ಮುಂದುವರಿಸುವೆ ಎಂದು ಹೇಳಿದ್ದಾರೆ

Breaking ನಾನು ಮಾಡುತ್ತಿದ್ದ ಕೆಲಸ ಮುಂದುವರಿಸುವೆ: ಜೈಲಿನಿಂದ ಬಿಡುಗಡೆಯಾದ ನಂತರ ಮೊಹಮ್ಮದ್ ಜುಬೇರ್ ಮಾತು
ಮೊಹಮ್ಮದ್ ಜುಬೇರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 22, 2022 | 7:20 PM

ನಾನು ಈ ಹಿಂದೆ ಏನು ಮಾಡುತ್ತಿದ್ದೆನೋ ಅದೇ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ (Mohammed Zubair)  ಹೇಳಿದ್ದಾರೆ. ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್​ಗೆ  ಸುಪ್ರೀಂಕೋರ್ಟ್ (Supreme Court) ಬುಧವಾರ ಜಾಮೀನು ನೀಡಿದ್ದುಅದೇ ದಿನ ರಾತ್ರಿ ಅವರು ಬಂಧಮುಕ್ತರಾಗಿದ್ದಾರೆ. ತಿಹಾರ್ ಜೈಲಿನಿಂದ ಹೊರಬಂದ ಒಂದು ದಿನದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜುಬೇರ್ ಗೌರವಾನ್ವಿತ ಸುಪ್ರೀಂಕೋರ್ಟ್ ನನಗೆ ಯಾವುದೇ ನಿರ್ಬಂಧ  ವಿಧಿಸಿಲ್ಲ. ನಾನು ಇಲ್ಲಿಯವರೆಗೆ ಮಾಡುತ್ತಿದ್ದ ಕೆಲಸಗಳನ್ನು ಮುಂದುವರಿಸುವೆ ಎಂದು ಹೇಳಿದ್ದಾರೆ. ಯಾವುದೇ ತನಿಖಾ ತಂಡ ಈ ಬಗ್ಗೆ ಕೇಳಲಿಲ್ಲ, ನಾನು ಬಿಡುಗಡೆ ಆದ ನಂತರವೇ ಈ ಆರೋಪದ ಬಗ್ಗೆ ಕೇಳಿದ್ದು ಎಂದಿದ್ದಾರೆ.   ಬುಧವಾರ ಜಾಮೀನು ನೀಡಿದ ಸುಪ್ರೀಂಕೋರ್ಟ್ ಬಂಧನದ ಅಧಿಕಾರವನ್ನು ಮಿತವಾಗಿ ಅನುಸರಿಸಬೇಕು ಎಂಬುದು ಕಾನೂನಿನ ತತ್ವವಾಗಿದೆ. ಪ್ರಸ್ತುತ ಪ್ರಕರಣದಲ್ಲಿ ಅವರನ್ನು  ಸುದೀರ್ಘವಾಗಿ ಬಂಧನದಲ್ಲಿಡಬೇಕಾದುದನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿದೆ.

ಈ ಬಗ್ಗೆ ಒಟ್ಟಾರೆ ತನಿಖೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯ 6 ಎಫ್ಐಆರ್​ಗಳನ್ನು ಒಟ್ಟುಗೂಡಿಸಿದ್ದು ಎಲ್ಲ ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾಯಿಸಿದೆ. ಪ್ರಕರಣಗಳನ್ನು ದೆಹಲಿ ಹೈಕೋರ್ಟ್ಗೆ ವರ್ಗಾಯಿಸಬೇಕು ಎಂದು ಜುಬೇರ್ ಮನವಿ ಮಾಡಿದ್ದರು. ಎಫ್ಐಆರ್​ಗಳನ್ನು ದೆಹಲಿಗೆ ವರ್ಗಾಯಿಸುವ ಆದೇಶವು ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳಿಗೆ ಅನ್ವಯ ಆಗಲಿದೆ. ಇನ್ಮುಂದೆ ಜುಬೇರ್ ವಿರುದ್ದ ದಾಖಲಾಗುವ ದೂರಿಗೂ ಇದು ಅನ್ವಯಿಸುತ್ತದೆ. ಜುಬೇರ್​​ನ್ನು ಬಂಧಮುಕ್ತಗೊಳಿಸುವಂತೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಎಎಸ್ ಬೋಪಣ್ಣ ಅವರ ನ್ಯಾಯಪೀಠ ಆದೇಶಿಸಿದೆ.

ಸೀತಾಪುರ್, ಲಖೀಂಪುರ್ ಖೇರಿ, ಮುಜಾಫರ್ ನಗರ್ , ಗಾಜಿಯಾಬಾದ್ ನಲ್ಲಿ ತಲಾ ಒಂದು ಮತ್ತು ಹಾಥರಸ್ ನಲ್ಲಿ ಎರಡು ಪ್ರಕರಣಗಳು ಜುಬೇರ್ ವಿರುದ್ಧ ದಾಖಲಾಗಿದೆ. ಸುದ್ದಿನಿರೂಪಕರ ಬಗ್ಗೆ ಅಣಕವಾಡಿದ, ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ ಮತ್ತು ದೇವರ ಬಗ್ಗೆ ಪ್ರಚೋದನಾತ್ಮಕ ವಿಷಯ ಟ್ವೀಟ್ ಮಾಡಿದ ಆರೋಪ ಜುಬೇರ್ ಮೇಲಿದೆ. ಟ್ವೀಟ್ ನಿಂದಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ಆರೋಪದ ಮೇಲೆ ಜೂನ್ 27ರಂದು ಜುಬೇರ್ ಅವರನ್ನು ದೆಹಲಿ ಪೊಲೀಸರು  ಬಂಧಿಸಿದ್ದರು.

Published On - 6:50 pm, Fri, 22 July 22

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!