AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸುವುದಿಲ್ಲ; ಸಿಜೆಐ ಗವಾಯಿ ಘೋಷಣೆ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ನಿವೃತ್ತಿ ಯೋಜನೆಗಳನ್ನು ಬಹಿರಂಗಪಡಿಸಿದ್ದಾರೆ. 'ನಾನು ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ' ಎಂದು ಅವರು ಹೇಳಿದ್ದಾರೆ. ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಸಿಜೆಐ ಗವಾಯಿ ಈ ವರ್ಷ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ. 65 ವರ್ಷ ವಯಸ್ಸನ್ನು ತಲುಪಿದ ನಂತರ ಹುದ್ದೆಯನ್ನು ತ್ಯಜಿಸಿದ ಸಿಜೆಐ ಸಂಜೀವ್ ಖನ್ನಾ ಅವರ ಉತ್ತರಾಧಿಕಾರಿಯಾಗಿ ಗವಾಯಿ ನೇಮಕಗೊಂಡಿದ್ದಾರೆ.

ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸುವುದಿಲ್ಲ; ಸಿಜೆಐ ಗವಾಯಿ ಘೋಷಣೆ
Cji Gavai
ಸುಷ್ಮಾ ಚಕ್ರೆ
|

Updated on: Jul 25, 2025 | 9:52 PM

Share

ಅಮರಾವತಿ, ಜುಲೈ 25: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ (BR Gavai) ಇಂದು (ಶುಕ್ರವಾರ) ತಮ್ಮ ನಿವೃತ್ತಿಯ ನಂತರ ಯಾವುದೇ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಅಮರಾವತಿ (Amarawati) ಜಿಲ್ಲೆಯ ತಮ್ಮ ಸ್ಥಳೀಯ ಗ್ರಾಮವಾದ ದಾರಾಪುರದಲ್ಲಿ ಸನ್ಮಾನ ಸ್ವೀಕರಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. “ನನ್ನ ನಿವೃತ್ತಿಯ ನಂತರ ನಾನು ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸಬಾರದು ಎಂದು ನಿರ್ಧರಿಸಿದ್ದೇನೆ. ನಿವೃತ್ತಿಯ ನಂತರ ನನಗೆ ಹೆಚ್ಚಿನ ಸಮಯ ಸಿಗುತ್ತದೆ. ಆದ್ದರಿಂದ ನಾನು ದಾರಾಪುರ, ಅಮರಾವತಿ ಮತ್ತು ನಾಗ್ಪುರದಲ್ಲಿ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸುತ್ತೇನೆ” ಎಂದು ಗವಾಯಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಬಿ.ಆರ್ ಗವಾಯಿ ನವೆಂಬರ್‌ನಲ್ಲಿ ನಿವೃತ್ತರಾಗಲಿದ್ದಾರೆ. ಪ್ರಸ್ತುತ ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಸಿಜೆಐ ಗವಾಯಿ ಈ ವರ್ಷ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ. ನವೆಂಬರ್ 24, 1960ರಂದು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಜನಿಸಿದ ಗವಾಯಿ ಭಾರತದ ಮುಖ್ಯ ನ್ಯಾಯಮೂರ್ತಿಯಾದ ಮೊದಲ ಬೌದ್ಧ ಧರ್ಮೀಯರು. ಅವರು 65 ವರ್ಷ ವಯಸ್ಸಿನ ನಂತರ ನಿವೃತ್ತರಾದ ಸಿಜೆಐ ಸಂಜೀವ್ ಖನ್ನಾ ಅವರ ನಂತರ ಅಧಿಕಾರ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಭೇಟಿ ನೀಡಿದ್ದಾಗ ತೀವ್ರ ಸೋಂಕು ತಗುಲಿ ಸಿಜೆಐ ಬಿಆರ್ ಗವಾಯಿ ಆಸ್ಪತ್ರೆಗೆ ದಾಖಲು

ಬಿ.ಆರ್ ಗವಾಯಿ ನವೆಂಬರ್ 2005ರಲ್ಲಿ ಬಾಂಬೆ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾದರು. ಮೇ 2019ರಲ್ಲಿ ಅವರಿಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ಬಡ್ತಿ ನೀಡಲಾಯಿತು. ಬಿ.ಆರ್ ಗವಾಯಿ ಡಿಸೆಂಬರ್ 2023ರಲ್ಲಿ ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸರ್ವಾನುಮತದಿಂದ ಎತ್ತಿಹಿಡಿದ 5 ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ