Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Election 2021: ‘ನಾನು ರಾಜಕೀಯಕ್ಕಾಗಿ ಸಿನಿಮಾವನ್ನು ಸಂಪೂರ್ಣವಾಗಿ ಬಿಡಲೂ ಸಿದ್ಧನಿದ್ದೇನೆ..‘- ಕಮಲ್​ ಹಾಸನ್​

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ 154 ಸೀಟುಗಳಲ್ಲಿ ಎಂಎನ್​ಎಂ ಪಕ್ಷ ಸ್ಪರ್ಧಿಸಿದೆ. ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಮಲ್​ ಹಾಸನ್ ಸ್ಪರ್ಧೆಗೆ ಇಳಿದಿದ್ದಾರೆ.

Tamil Nadu Election 2021: ‘ನಾನು ರಾಜಕೀಯಕ್ಕಾಗಿ ಸಿನಿಮಾವನ್ನು ಸಂಪೂರ್ಣವಾಗಿ ಬಿಡಲೂ ಸಿದ್ಧನಿದ್ದೇನೆ..‘- ಕಮಲ್​ ಹಾಸನ್​
ಕಮಲ್​ ಹಾಸನ್​
Follow us
Lakshmi Hegde
|

Updated on:Apr 04, 2021 | 7:55 PM

ಚೆನ್ನೈ: ಕಮಲ್ ಹಾಸನ್​ ಖ್ಯಾತಿಗಳಿಸಿದ್ದು ಸಿನಿಮಾದಿಂದಲೇ. ಆದರೆ ಅವರೀಗ ಸಕ್ರಿಯ ರಾಜಕಾರಣಿ ಎನ್ನಿಸಿಕೊಳ್ಳುವತ್ತ ದಾಪುಗಾಲು ಹಾಕುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಇಂದು ಒಂದು ಹೇಳಿಕೆಯನ್ನೂ ನೀಡಿದ್ದಾರೆ. ನನ್ನ ರಾಜಕೀಯ ಜೀವನಕ್ಕೆ ಸಿನಿಮಾಗಳಿಂದ ತೊಂದರೆ ಆಗುವುದಾದರೆ ನಾನು ಸಿನಿಮಾವನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಕ್ಕಳ್ ನೀಧಿ ಮಯ್ಯಂ​​​ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್​, ನಾನು ರಾಜಕೀಯಕ್ಕೆ ಸೇರಬೇಕು ಎಂಬುದು ನನ್ನ ತುಂಬ ಹಳೇ ನಿರ್ಧಾರ. ಈ ನನ್ನ ರಾಜಕೀಯ ಕರಿಯರ್​​ಗೆ ಸಿನಿಮಾಗಳಿಂದ ಅಡೆತಡೆಯಾಗುತ್ತದೆ ಎಂದಾದರೆ ಈಗಿರುವ ಸಿನಿಮಾ ಕಾರ್ಯಗಳನ್ನೆಲ್ಲ ಮುಗಿಸಿಕೊಟ್ಟು, ನಂತರ ಸಂಪೂರ್ಣವಾಗಿ ಬಿಟ್ಟುಬಿಡುತ್ತೇನೆ. ಜನರ ಸೇವೆಯೇ ಆದ್ಯತೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ 154 ಸೀಟುಗಳಲ್ಲಿ ಎಂಎನ್​ಎಂ ಪಕ್ಷ ಸ್ಪರ್ಧಿಸಿದೆ. ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಮಲ್​ ಹಾಸನ್ ಸ್ಪರ್ಧೆಗೆ ಇಳಿದಿದ್ದಾರೆ. ಕಮಲ್ ಹಾಸನ್ ರಾಜಕೀಯವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇದಾದ ಬಳಿಕ ಸಿನಿಮಾಕ್ಕೆ ವಾಪಸ್ ಆಗುತ್ತಾರೆ ಎಂದು ಅವರ ವಿರೋಧಿ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ಆದರೆ ಕಮಲ್​ ಹಾಸನ್ ಸರಿಯಾಗಿ ಉಲ್ಟಾ ಹೊಡೆದಿದ್ದಾರೆ. ರಾಜಕೀಯದಲ್ಲಿ ಯಾರು ಸೋಲುತ್ತಾರೆ ಎಂದು ಕಾದು ನೋಡೋಣ. ಜನರೇ ನಿರ್ಧರಿಸುತ್ತಾರೆ ಎಂದೂ ತಿರುಗೇಟು ನೀಡಿದ್ದಾರೆ. ಇನ್ನು ತಮಗೆ ಕೆಲವು ಕಡೆಗಳಿಂದ ಬೆದರಿಕೆ ಬರುತ್ತಿರುವುದಾಗಿಯೂ ಕಮಲ್ ಹಾಸನ್ ಹೇಳಿದ್ದಾರೆ. ಆದರೆ ಅದರ ಬಗ್ಗೆ ತುಂಬ ವಿವರಗಳನ್ನು ಅವರು ನೀಡಿಲ್ಲ.

ಇದನ್ನೂ ಓದಿ: ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ

ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ.. ಸೂಕ್ತ ಸಮಯದಲ್ಲಿ ನಕ್ಸಲರಿಗೆ ಕಟು ತಿರುಗೇಟು ನೀಡುತ್ತೇವೆ: ಅಮಿತ್​ ಶಾ

Published On - 7:54 pm, Sun, 4 April 21

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ