AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Election 2021: ‘ನಾನು ರಾಜಕೀಯಕ್ಕಾಗಿ ಸಿನಿಮಾವನ್ನು ಸಂಪೂರ್ಣವಾಗಿ ಬಿಡಲೂ ಸಿದ್ಧನಿದ್ದೇನೆ..‘- ಕಮಲ್​ ಹಾಸನ್​

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ 154 ಸೀಟುಗಳಲ್ಲಿ ಎಂಎನ್​ಎಂ ಪಕ್ಷ ಸ್ಪರ್ಧಿಸಿದೆ. ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಮಲ್​ ಹಾಸನ್ ಸ್ಪರ್ಧೆಗೆ ಇಳಿದಿದ್ದಾರೆ.

Tamil Nadu Election 2021: ‘ನಾನು ರಾಜಕೀಯಕ್ಕಾಗಿ ಸಿನಿಮಾವನ್ನು ಸಂಪೂರ್ಣವಾಗಿ ಬಿಡಲೂ ಸಿದ್ಧನಿದ್ದೇನೆ..‘- ಕಮಲ್​ ಹಾಸನ್​
ಕಮಲ್​ ಹಾಸನ್​
Lakshmi Hegde
|

Updated on:Apr 04, 2021 | 7:55 PM

Share

ಚೆನ್ನೈ: ಕಮಲ್ ಹಾಸನ್​ ಖ್ಯಾತಿಗಳಿಸಿದ್ದು ಸಿನಿಮಾದಿಂದಲೇ. ಆದರೆ ಅವರೀಗ ಸಕ್ರಿಯ ರಾಜಕಾರಣಿ ಎನ್ನಿಸಿಕೊಳ್ಳುವತ್ತ ದಾಪುಗಾಲು ಹಾಕುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಇಂದು ಒಂದು ಹೇಳಿಕೆಯನ್ನೂ ನೀಡಿದ್ದಾರೆ. ನನ್ನ ರಾಜಕೀಯ ಜೀವನಕ್ಕೆ ಸಿನಿಮಾಗಳಿಂದ ತೊಂದರೆ ಆಗುವುದಾದರೆ ನಾನು ಸಿನಿಮಾವನ್ನು ಬಿಟ್ಟುಬಿಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಕ್ಕಳ್ ನೀಧಿ ಮಯ್ಯಂ​​​ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್​, ನಾನು ರಾಜಕೀಯಕ್ಕೆ ಸೇರಬೇಕು ಎಂಬುದು ನನ್ನ ತುಂಬ ಹಳೇ ನಿರ್ಧಾರ. ಈ ನನ್ನ ರಾಜಕೀಯ ಕರಿಯರ್​​ಗೆ ಸಿನಿಮಾಗಳಿಂದ ಅಡೆತಡೆಯಾಗುತ್ತದೆ ಎಂದಾದರೆ ಈಗಿರುವ ಸಿನಿಮಾ ಕಾರ್ಯಗಳನ್ನೆಲ್ಲ ಮುಗಿಸಿಕೊಟ್ಟು, ನಂತರ ಸಂಪೂರ್ಣವಾಗಿ ಬಿಟ್ಟುಬಿಡುತ್ತೇನೆ. ಜನರ ಸೇವೆಯೇ ಆದ್ಯತೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ 154 ಸೀಟುಗಳಲ್ಲಿ ಎಂಎನ್​ಎಂ ಪಕ್ಷ ಸ್ಪರ್ಧಿಸಿದೆ. ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಮಲ್​ ಹಾಸನ್ ಸ್ಪರ್ಧೆಗೆ ಇಳಿದಿದ್ದಾರೆ. ಕಮಲ್ ಹಾಸನ್ ರಾಜಕೀಯವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇದಾದ ಬಳಿಕ ಸಿನಿಮಾಕ್ಕೆ ವಾಪಸ್ ಆಗುತ್ತಾರೆ ಎಂದು ಅವರ ವಿರೋಧಿ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ಆದರೆ ಕಮಲ್​ ಹಾಸನ್ ಸರಿಯಾಗಿ ಉಲ್ಟಾ ಹೊಡೆದಿದ್ದಾರೆ. ರಾಜಕೀಯದಲ್ಲಿ ಯಾರು ಸೋಲುತ್ತಾರೆ ಎಂದು ಕಾದು ನೋಡೋಣ. ಜನರೇ ನಿರ್ಧರಿಸುತ್ತಾರೆ ಎಂದೂ ತಿರುಗೇಟು ನೀಡಿದ್ದಾರೆ. ಇನ್ನು ತಮಗೆ ಕೆಲವು ಕಡೆಗಳಿಂದ ಬೆದರಿಕೆ ಬರುತ್ತಿರುವುದಾಗಿಯೂ ಕಮಲ್ ಹಾಸನ್ ಹೇಳಿದ್ದಾರೆ. ಆದರೆ ಅದರ ಬಗ್ಗೆ ತುಂಬ ವಿವರಗಳನ್ನು ಅವರು ನೀಡಿಲ್ಲ.

ಇದನ್ನೂ ಓದಿ: ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ

ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ.. ಸೂಕ್ತ ಸಮಯದಲ್ಲಿ ನಕ್ಸಲರಿಗೆ ಕಟು ತಿರುಗೇಟು ನೀಡುತ್ತೇವೆ: ಅಮಿತ್​ ಶಾ

Published On - 7:54 pm, Sun, 4 April 21

Follow Us
Lakshmi Hegde
Lakshmi Hegde
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್