AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Elections 2021: ತಮಿಳುನಾಡಿನ ರಾಜಕೀಯ ವ್ಯವಸ್ಥೆಯನ್ನು ಬದಲಿಸುತ್ತೇನೆ: ಬಿಜೆಪಿ ಅಭ್ಯರ್ಥಿ ‘ಸಿಂಗಂ’ ಅಣ್ಣಾಮಲೈ

K Annamalai : ಚುನಾವಣಾ ಫಲಿತಾಂಶ ಏನೇ ಆಗಿರಲಿ, ನಾನು ರಾಜಕಾರಣ ಮುಂದುವರಿಸುವೆ. ನಾನು ಒಂದು ಬಾರಿ ಸ್ಪರ್ಧಿಸುವುದಕ್ಕಾಗಿ ಐಪಿಎಸ್ ತೊರೆದಿಲ್ಲ. ನಾನು ತಮಿಳುನಾಡಿನ ರಾಜಕೀಯ ವ್ಯವಸ್ಥೆಯನ್ನು ಬದಲಿಸಲು ಬಯಸುತ್ತೇನೆ ಎಂದಿದ್ದಾರೆ ಅಣ್ಣಾಮಲೈ.

Tamil Nadu Elections 2021: ತಮಿಳುನಾಡಿನ ರಾಜಕೀಯ ವ್ಯವಸ್ಥೆಯನ್ನು ಬದಲಿಸುತ್ತೇನೆ: ಬಿಜೆಪಿ ಅಭ್ಯರ್ಥಿ 'ಸಿಂಗಂ' ಅಣ್ಣಾಮಲೈ
ಚುನಾವಣಾ ಪ್ರಚಾರದಲ್ಲಿ ಅಣ್ಣಾಮಲೈ
Follow us
ರಶ್ಮಿ ಕಲ್ಲಕಟ್ಟ
|

Updated on: Mar 23, 2021 | 4:20 PM

ಚೆನ್ನೈ: ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇಲ್ಲಿ ಜಿದ್ದಾಜಿದ್ದಿನ ಪೈಪೋಟಿ ಇದೆ ಎಂಬುದು ಗೊತ್ತು. ಈ ಹಿಂದೆ ಇಲ್ಲಿ ಹಣ ಪ್ರಧಾನ ಪಾತ್ರ ವಹಿಸುತ್ತಿತ್ತು. ನಮ್ಮ ಚುನಾವಣಾ ಕ್ಷೇತ್ರದಲ್ಲಿ ಪ್ರಾಮಾಣಿಕ ರಾಜಕಾರಣವನ್ನು ತರಲು ನಾನು ಬಯಸುತ್ತೇನೆ. ಹಾಗಾಗಿಯೇ ನಾನು ಅರವಕುರಿಚಿ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡೆ ಎಂದು ಸುದ್ದಿಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಜತೆ ಭರ್ಜರಿ ಪ್ರಚಾರ ಮಾಡುವಂತೆ ಎಐಎಡಿಎಂಕೆಯ ಪ್ರಮುಖ ನಾಯಕರು ಸ್ಥಳೀಯ ನಾಯಕರಿಗೆ ಹೇಳಿದ್ದಾರೆ. ಅಲ್ಲಿನ ಸ್ಥಳೀಯ ಎಐಎಡಿಎಂಕೆ ನಾಯಕರೊಂದಿಗೆ ಅಣ್ಣಾಮಲೈ ತಮ್ಮ ಚುನಾವಣಾ ಕ್ಷೇತ್ರದ ಪ್ರತಿಯೊಂದು ಮನೆಗೂ ಭೇಟಿ ನೀಡುತ್ತಿದ್ದಾರೆ. ಪ್ರತಿದಿನ ಕನಿಷ್ಟ 25-30 ಸಭೆಗಳಲ್ಲಿ ಭಾಗಿಯಾಗುತ್ತಾಕೆ. ಸಾವಿರಾರು ಯುವಜನರನ್ನು ಭೇಟಿ ಮಾಡುತ್ತಾರೆ, ಸೆಲ್ಫಿಗೆ ಪೋಸ್ ಕೊಡುತ್ತಾರೆ.

ತಾನು ಚುನಾವಣೆಯಲ್ಲಿ ಗೆದ್ದರೆ ಜನರಿಗಾಗಿ ಏನೆಲ್ಲಾ ಮಾಡುತ್ತೇನೆ ಎಂಬುದರ ಬಗ್ಗೆ ಅಣ್ಣಾಮಲೈ ಜನರಿಗೆ ಚೊಕ್ಕವಾಗಿ ವಿವರಿಸುತ್ತಾರೆ. ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಆ ಹುದ್ದೆ ತೊರೆದು ರಾಜಕೀಯಕ್ಕಿಳಿದಿರುವ ನಿರ್ಧಾರವನ್ನು ಹಲವಾರು ಮಂದಿ ಮೆಚ್ಚಿದ್ದಾರೆ.

‘ಇಲ್ಲಿ ಬಿಜೆಪಿಗೆ ಯಾವುದೇ ನೆಲೆ ಇಲ್ಲ. ಆದರೆ ಅಣ್ಣಾಮಲೈ ಸ್ಥಳೀಯ ಹೀರೊ. ಐಪಿಎಸ್ ಹುದ್ದೆ ತೊರೆದು ಬಿಜೆಪಿ ಟಿಕೆಟ್ ನಿಂದ ಇಲ್ಲಿ ಯಾರು ಸ್ಪರ್ಧಿಸುತ್ತಾರೆ? ಅವರು ದೊಡ್ಡಮಟ್ಟದ ರಿಸ್ಕ್ ತೆಗೆದುಕೊಂಡಿದ್ದಾರೆ. ಎಐಎಡಿಎಂಕೆ ಮೈತ್ರಿಕೂಟದ ಪ್ರತಿನಿಧಿ. ಅವರ ವ್ಯಕ್ತಿತ್ವ, ನಡವಳಿಕೆ, ವಯಸ್ಸು, ಐಪಿಎಸ್  ಹಿನ್ನೆಲೆ ಎಲ್ಲವೂ ಯುವಜನಾಂಗ ಮತ್ತು ಮಹಿಳೆಯರನ್ನು ಆಕರ್ಷಿಸಿದೆ’ ಎಂದು 21ರ ಹರೆಯದ ಶಿವ ಎಂಬ ಮತದಾರ ಅಭಿಪ್ರಾಯ ಪಟ್ಟಿದ್ದಾರೆ.

ಎರಡು ವರ್ಷಗಳ ಹಿಂದೆ ಖಾಕಿ ಯುನಿಫಾರಂ ತೊಟ್ಟು ಕರ್ತವ್ಯ ನಿರತರಾಗಿದ್ದ ಐಪಿಎಸ್ ಅಧಿಕಾರಿ ಈಗ ಬಿಳಿ ಧೋತಿ, ಹಾಫ್ ಸ್ಲೀವ್ ಶರ್ಟ್ ಧರಿಸಿ ಕೈಯಲ್ಲಿ ಮೈಕ್ರೊಫೋನ್ ಹಿಡಿದು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈಗ 35ರ ಹರೆಯದ ಕೆ.ಅಣ್ಣಾಮಲೈ ಅವರ ಜೀವನ ಸಂಪೂರ್ಣ ಬದಲಾಗಿದೆ.

2011ರ ಬ್ಯಾಚ್ ನಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ 2019ರಲ್ಲಿ ಬಿಜೆಪಿ ಸೇರಿದ್ದರು. ದಕ್ಷಿಣ ಭಾರತದಲ್ಲಿ ಕಮಲ ಅರಳಿಸುವ ಅಪಾರ ನಿರೀಕ್ಷೆ ಹೊಂದಿರುವ ಬಿಜೆಪಿ ಪಕ್ಷ ಅಣ್ಣಾಮಲೈಗೆ ಟಿಕೆಟ್ ನೀಡಿತ್ತು. ತಮಿಳುನಾಡಿನ ಕೊಂಗನಾಡು ಪ್ರದೇಶದ ಕರೂರ್ ಜಿಲ್ಲೆಯ ನಿವಾಸಿಯಾಗಿರುವ ಅಣ್ಣಾಮಲೈ ಐಐಟಿ ಕಾನ್ಪುರ್​ನ ಹಳೆ ವಿದ್ಯಾರ್ಥಿ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೊಲೀಸ್ ಸುಪರಿಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸಿದ್ದ ಇವರು ಬೆಂಗಳೂರು ದಕ್ಷಿಣದಲ್ಲಿ ಡಿಸಿಪಿಯಾಗಿದ್ದರು.

ತಮಿಳುನಾಡಿನ ಕರೂರ್ ಜಿಲ್ಲೆಯ ಅರವಕುರಿಚಿ ವಿಧಾನಸಭೆ ಕ್ಷೇತ್ರ ಸೂಕ್ಷ್ಮ ಚುನಾವಣಾ ಕ್ಷೇತ್ರ ಎಂದೇ ಹೇಳಲಾಗುತ್ತಿದೆ. ಈ ಬಾರಿ ಅಣ್ಣಾಮಲೈ ವಿರುದ್ಧ ಡಿಎಂಕೆ ಪಕ್ಷದ ವಿ.ಸೆಂಥಿಲ್ ಬಾಲಾಜಿ ಸ್ಪರ್ಧಿಸುತ್ತಿದ್ದಾರೆ.  ಪಲ್ಲಪಟ್ಟಿ ಗ್ರಾಮಕ್ಕೆ ಅಣ್ಣಾಮಲೈ ಬರಬಾರದು ಎಂದು ಜಮಾತ್ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಣ್ಣಾಮಲೈ , ಚುನಾವಣೆ ಪ್ರಚಾರ ಮಾಡಲು ನನಗೆ ಯಾರ ಅನುಮತಿಯೂ ಬೇಡ. ಮುಸ್ಲಿಂ ಮಹಿಳೆಯರು ನನಗೆ ಮತ ನೀಡಲಿದ್ದಾರೆ. ಅವರು ನನ್ನ ಜತೆಗಿದ್ದಾರೆ ಎಂಬುದು ಗೊತ್ತು ಎಂದಿದ್ದಾರೆ.

ಚುನಾವಣಾ ಫಲಿತಾಂಶ ಏನೇ ಆಗಿರಲಿ, ನಾನು ರಾಜಕಾರಣ ಮುಂದುವರಿಸುವೆ. ನಾನು ಒಂದು ಬಾರಿ ಸ್ಪರ್ಧಿಸುವುದಕ್ಕಾಗಿ ಐಪಿಎಸ್ ತೊರೆದಿಲ್ಲ. ನಾನು ತಮಿಳುನಾಡಿನ ರಾಜಕೀಯ ವ್ಯವಸ್ಥೆಯನ್ನು ಬದಲಿಸಲು ಬಯಸುತ್ತೇನೆ. ಬಿಜೆಪಿ ಇಲ್ಲಿ ವೇಗವಾಗಿ ಬೆಳೆಯುತ್ತಿದೆ, ನಾನು ಅದನ್ನು ಬೆಳೆಸಲು ಬಯಸುತ್ತೇವೆ ಎಂದಿದ್ದಾರೆ.

234 ವಿಧಾನಸಭೆ ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಏಪ್ರಿಲ್ 6ಕ್ಕೆ ಮತದಾನ ನಡೆಯಲಿದೆ. ಎಐಎಡಿಎಂಕೆ ಮೈತ್ರಿ ಪಕ್ಷವಾಗಿರುವ ಬಿಜೆಪಿ 20 ಸೀಟುಗಳಲ್ಲಿ ಸ್ಪರ್ಧಿಸುತ್ತಿದೆ.

 ಇದನ್ನೂ ಓದಿ:  ಅವರು ಹೇಳಿದ್ದಕ್ಕೆ ರಾಜೀನಾಮೆ ಕೊಟ್ಟೆ -ಕೊನೆಗೂ ರಹಸ್ಯ ಬಿಚ್ಚಿಟ್ಟ ಕರುನಾಡ ‘ಸಿಂಗಂ’ ಅಣ್ಣಾಮಲೈ!

ಅಣ್ಣಾಮಲೈ ನಾಮಪತ್ರಕ್ಕೆ ತಡೆ; ಅಪರಾಧ ಪ್ರಕರಣಗಳ ಸ್ಪಷ್ಟೀಕರಣ ನೀಡಲು ಚುನಾವಣಾ ಆಯೋಗ ಸೂಚನೆ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ