AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೀದೀ.. ಓ ದೀದಿ’ ಎಂದು ಕರೆದ ಪ್ರಧಾನಿ ಮೋದಿ; ‘ಒಂದೇ ಕಾಲಲ್ಲಿ ಪಶ್ಚಿಮ ಬಂಗಾಳವನ್ನು ಗೆಲ್ಲುತ್ತೇನೆಂದು’ ಗುಡುಗಿದ ಮಮತಾ ಬ್ಯಾನರ್ಜಿ

ಮೋದಿ ಭಾಷಣದ ವೇಳೆ ಮಮತಾ ಬ್ಯಾನರ್ಜಿಯವರನ್ನು ವ್ಯಂಗ್ಯವಾಗಿ ಕರೆಯುತ್ತಾರೆ. ದೀದಿ.. ಓ ದೀದಿ ಎಂದು ಅಣುಕಿಸುವ ಧ್ವನಿಯಲ್ಲಿ ಕರೆಯುತ್ತಾರೆ. ಇದು ಮಹಿಳಾ ನಿಂದನೆ ಎಂದು ಟಿಎಂಸಿ ನಾಯಕಿಯರು ಆರೋಪಿಸಿದ್ದಾರೆ.

‘ದೀದೀ.. ಓ ದೀದಿ’ ಎಂದು ಕರೆದ ಪ್ರಧಾನಿ ಮೋದಿ; ‘ಒಂದೇ ಕಾಲಲ್ಲಿ ಪಶ್ಚಿಮ ಬಂಗಾಳವನ್ನು ಗೆಲ್ಲುತ್ತೇನೆಂದು’ ಗುಡುಗಿದ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ ಮತ್ತು ನರೇಂದ್ರ ಮೋದಿ
Lakshmi Hegde
|

Updated on: Apr 05, 2021 | 7:18 PM

Share

ಚುಂಚುರಾ: ಪಶ್ಚಿಮ ಬಂಗಾಳದಲ್ಲಿ ನಾಳೆ ಮೂರನೇ ಹಂತದ ಮತದಾನ ನಡೆಯಲಿದೆ. ಬಿಜೆಪಿಯಂತೂ ಈ ಬಾರಿ ಪಶ್ಚಿಮ ಬಂಗಾಳವನ್ನು ಹೇಗಾದರೂ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಶತಾಯಗತಾಯ ಪ್ರಯತ್ನದಲ್ಲಿದೆ. ಹಾಗಾಗಿ, ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಸೇರಿ ಹಲವು ಅಲ್ಲಿ ಪದೇಪದೆ ಪ್ರಚಾರ ನಡೆಸುತ್ತಿದ್ದಾರೆ. ಹಾಗೇ ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ, ಹೂಗ್ಲಿ ಜಿಲ್ಲೆಯ ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು.

ಇನ್ನೊಂದೆಡೆ ಮಮತಾ ಬ್ಯಾನರ್ಜಿ ಈ ಬಾರಿಯೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿದು ಹ್ಯಾಟ್ರಿಕ್​ ಬಾರಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಗುಜರಾತಿಗಳು ಪಶ್ಚಿಮ ಬಂಗಾಳವನ್ನು ಆಳಲು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಖಡಕ್​ ಆಗಿ ಹೇಳಿಬಿಟ್ಟಿದ್ದಾರೆ. ಈ ಬಾರಿ ನಂದಿಗ್ರಾಮದಿಂದ ಸ್ಪರ್ಧೆಗೆ ಇಳಿದಿರುವ ಮಮತಾ ಬ್ಯಾನರ್ಜಿ ಮಾರ್ಚ್​ 10ರಂದು ಅಲ್ಲಿ ಪ್ರಚಾರ ನಡೆಸುತ್ತಿರುವ ವೇಳೆ ಬಿದ್ದು ಕಾಲಿಗೆ ಗಾಯಮಾಡಿಕೊಂಡಿದ್ದರು. ತಮ್ಮ ಮೇಲೆ ಹಲ್ಲೆಯಾಗಿದೆ ಎಂದೂ ಪ್ರತಿಪಾದಿಸಿದ್ದರು. ಕಾಲು ಗಾಯಗೊಂಡ ಪರಿಣಾಮ ಅವರು ಗಾಲಿಖುರ್ಚಿಯಲ್ಲೇ ಕುಳಿತು ರೋಡ್​ ಶೋ ನಡೆಸುತ್ತಿದ್ದಾರೆ.

ಇದೀಗ ಮಮತಾ ಬ್ಯಾನರ್ಜಿ ಮತ್ತೊಮ್ಮೆ ನರೇಂದ್ರ ಮೋದಿ, ಅಮಿತ್ ಶಾ ಸೇರಿ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ನಾನು ಒಂದೇ ಕಾಲಿನಲ್ಲಿ ಪಶ್ಚಿಮ ಬಂಗಾಳವನ್ನು ಗೆಲ್ಲುತ್ತೇನೆ. ನಂತರ ದೆಹಲಿಯಲ್ಲಿ ಎರಡೂ ಕಾಲಿಟ್ಟು ಜಯಸಾಧಿಸುತ್ತೇನೆ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಿ ನರೇಂದ್ರ ಮೋದಿಯವರು ತನ್ನನ್ನು ‘ದೀದಿ..ಓ ದೀದಿ’ ಎಂದು ಹಲವು ಬಾರಿ ವ್ಯಂಗ್ಯಮಾಡಿದ್ದಾರೆ. ಹೂಗ್ಲಿಯ ಪ್ರಚಾರದ ವೇಳೆ ಸಹ.. ಹೀಗೇ ಕರೆದು ನಿಂದಿಸಿದರು. ಆದರೆ ನಾನು ಇಂಥದ್ದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

ಮೋದಿ ಭಾಷಣದ ವೇಳೆ ಮಮತಾ ಬ್ಯಾನರ್ಜಿಯವರನ್ನು ವ್ಯಂಗ್ಯವಾಗಿ ಕರೆಯುತ್ತಾರೆ. ದೀದಿ.. ಓ ದೀದಿ ಎಂದು ಅಣುಕಿಸುವ ಧ್ವನಿಯಲ್ಲಿ ಕರೆಯುತ್ತಾರೆ. ಇದು ಮಹಿಳಾ ನಿಂದನೆ. ಮಹಿಳೆಯ ರಕ್ಷಣಾ ಕಾನೂನಿನ ಉಲ್ಲಂಘನೆ ಎಂದು ಟಿಎಂಸಿಯ ಕೆಲವು ಮಹಿಳಾ ನಾಯಕಿಯರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ

West Bengal Election 2021: ‘ದೀದಿ.. ಜನರ ನಂಬಿಕೆಗೆ ದ್ರೋಹ ಮಾಡಿದ ನೀವು ಸೋಲನ್ನು ಒಪ್ಪಿಕೊಳ್ಳಲೇಬೇಕು’-ಹೂಗ್ಲಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ