AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೀದೀ.. ಓ ದೀದಿ’ ಎಂದು ಕರೆದ ಪ್ರಧಾನಿ ಮೋದಿ; ‘ಒಂದೇ ಕಾಲಲ್ಲಿ ಪಶ್ಚಿಮ ಬಂಗಾಳವನ್ನು ಗೆಲ್ಲುತ್ತೇನೆಂದು’ ಗುಡುಗಿದ ಮಮತಾ ಬ್ಯಾನರ್ಜಿ

ಮೋದಿ ಭಾಷಣದ ವೇಳೆ ಮಮತಾ ಬ್ಯಾನರ್ಜಿಯವರನ್ನು ವ್ಯಂಗ್ಯವಾಗಿ ಕರೆಯುತ್ತಾರೆ. ದೀದಿ.. ಓ ದೀದಿ ಎಂದು ಅಣುಕಿಸುವ ಧ್ವನಿಯಲ್ಲಿ ಕರೆಯುತ್ತಾರೆ. ಇದು ಮಹಿಳಾ ನಿಂದನೆ ಎಂದು ಟಿಎಂಸಿ ನಾಯಕಿಯರು ಆರೋಪಿಸಿದ್ದಾರೆ.

‘ದೀದೀ.. ಓ ದೀದಿ’ ಎಂದು ಕರೆದ ಪ್ರಧಾನಿ ಮೋದಿ; ‘ಒಂದೇ ಕಾಲಲ್ಲಿ ಪಶ್ಚಿಮ ಬಂಗಾಳವನ್ನು ಗೆಲ್ಲುತ್ತೇನೆಂದು’ ಗುಡುಗಿದ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ ಮತ್ತು ನರೇಂದ್ರ ಮೋದಿ
Lakshmi Hegde
|

Updated on: Apr 05, 2021 | 7:18 PM

Share

ಚುಂಚುರಾ: ಪಶ್ಚಿಮ ಬಂಗಾಳದಲ್ಲಿ ನಾಳೆ ಮೂರನೇ ಹಂತದ ಮತದಾನ ನಡೆಯಲಿದೆ. ಬಿಜೆಪಿಯಂತೂ ಈ ಬಾರಿ ಪಶ್ಚಿಮ ಬಂಗಾಳವನ್ನು ಹೇಗಾದರೂ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಶತಾಯಗತಾಯ ಪ್ರಯತ್ನದಲ್ಲಿದೆ. ಹಾಗಾಗಿ, ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಸೇರಿ ಹಲವು ಅಲ್ಲಿ ಪದೇಪದೆ ಪ್ರಚಾರ ನಡೆಸುತ್ತಿದ್ದಾರೆ. ಹಾಗೇ ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ, ಹೂಗ್ಲಿ ಜಿಲ್ಲೆಯ ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು.

ಇನ್ನೊಂದೆಡೆ ಮಮತಾ ಬ್ಯಾನರ್ಜಿ ಈ ಬಾರಿಯೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿದು ಹ್ಯಾಟ್ರಿಕ್​ ಬಾರಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಗುಜರಾತಿಗಳು ಪಶ್ಚಿಮ ಬಂಗಾಳವನ್ನು ಆಳಲು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಖಡಕ್​ ಆಗಿ ಹೇಳಿಬಿಟ್ಟಿದ್ದಾರೆ. ಈ ಬಾರಿ ನಂದಿಗ್ರಾಮದಿಂದ ಸ್ಪರ್ಧೆಗೆ ಇಳಿದಿರುವ ಮಮತಾ ಬ್ಯಾನರ್ಜಿ ಮಾರ್ಚ್​ 10ರಂದು ಅಲ್ಲಿ ಪ್ರಚಾರ ನಡೆಸುತ್ತಿರುವ ವೇಳೆ ಬಿದ್ದು ಕಾಲಿಗೆ ಗಾಯಮಾಡಿಕೊಂಡಿದ್ದರು. ತಮ್ಮ ಮೇಲೆ ಹಲ್ಲೆಯಾಗಿದೆ ಎಂದೂ ಪ್ರತಿಪಾದಿಸಿದ್ದರು. ಕಾಲು ಗಾಯಗೊಂಡ ಪರಿಣಾಮ ಅವರು ಗಾಲಿಖುರ್ಚಿಯಲ್ಲೇ ಕುಳಿತು ರೋಡ್​ ಶೋ ನಡೆಸುತ್ತಿದ್ದಾರೆ.

ಇದೀಗ ಮಮತಾ ಬ್ಯಾನರ್ಜಿ ಮತ್ತೊಮ್ಮೆ ನರೇಂದ್ರ ಮೋದಿ, ಅಮಿತ್ ಶಾ ಸೇರಿ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ನಾನು ಒಂದೇ ಕಾಲಿನಲ್ಲಿ ಪಶ್ಚಿಮ ಬಂಗಾಳವನ್ನು ಗೆಲ್ಲುತ್ತೇನೆ. ನಂತರ ದೆಹಲಿಯಲ್ಲಿ ಎರಡೂ ಕಾಲಿಟ್ಟು ಜಯಸಾಧಿಸುತ್ತೇನೆ ಎಂದು ಹೇಳಿದ್ದಾರೆ. ಹಾಗೇ ಪ್ರಧಾನಿ ನರೇಂದ್ರ ಮೋದಿಯವರು ತನ್ನನ್ನು ‘ದೀದಿ..ಓ ದೀದಿ’ ಎಂದು ಹಲವು ಬಾರಿ ವ್ಯಂಗ್ಯಮಾಡಿದ್ದಾರೆ. ಹೂಗ್ಲಿಯ ಪ್ರಚಾರದ ವೇಳೆ ಸಹ.. ಹೀಗೇ ಕರೆದು ನಿಂದಿಸಿದರು. ಆದರೆ ನಾನು ಇಂಥದ್ದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

ಮೋದಿ ಭಾಷಣದ ವೇಳೆ ಮಮತಾ ಬ್ಯಾನರ್ಜಿಯವರನ್ನು ವ್ಯಂಗ್ಯವಾಗಿ ಕರೆಯುತ್ತಾರೆ. ದೀದಿ.. ಓ ದೀದಿ ಎಂದು ಅಣುಕಿಸುವ ಧ್ವನಿಯಲ್ಲಿ ಕರೆಯುತ್ತಾರೆ. ಇದು ಮಹಿಳಾ ನಿಂದನೆ. ಮಹಿಳೆಯ ರಕ್ಷಣಾ ಕಾನೂನಿನ ಉಲ್ಲಂಘನೆ ಎಂದು ಟಿಎಂಸಿಯ ಕೆಲವು ಮಹಿಳಾ ನಾಯಕಿಯರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: West Bengal Election 2021: ಬಿಜೆಪಿ ಅಭ್ಯರ್ಥಿ ಪಾಯಲ್​ ಸರ್ಕಾರ್, ಬೆಂಗಾವಲು ಪಡೆ​ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರಿಂದ ದಾಳಿ

West Bengal Election 2021: ‘ದೀದಿ.. ಜನರ ನಂಬಿಕೆಗೆ ದ್ರೋಹ ಮಾಡಿದ ನೀವು ಸೋಲನ್ನು ಒಪ್ಪಿಕೊಳ್ಳಲೇಬೇಕು’-ಹೂಗ್ಲಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Follow Us
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ