Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬದುಕಿರುವವರೆಗೂ ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡಲು ಬಿಡುವುದಿಲ್ಲ: ಕಾಂಗ್ರೆಸ್ ನಾಯಕ ರಶೆದ್​​ ಖಾನ್​

ಈ ರಶೆದ್​ ಖಾನ್​ ಕೂಡ ಜಿತೇಂದ್ರ ಅವರ ವಿರುದ್ಧ ತಿರುಗಿಬಿದ್ದಿದ್ದರು. ರಿಜ್ವಿ ಹಿಂದೂ ಧರ್ಮಕ್ಕೆ ಸೇರುವ ಮೂಲಕ ಇಸ್ಲಾಂಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದರು.

ನಾನು ಬದುಕಿರುವವರೆಗೂ ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡಲು ಬಿಡುವುದಿಲ್ಲ: ಕಾಂಗ್ರೆಸ್ ನಾಯಕ ರಶೆದ್​​ ಖಾನ್​
ರಶೆದ್​ ಖಾನ್​
Follow us
TV9 Web
| Updated By: Lakshmi Hegde

Updated on: Dec 28, 2021 | 4:22 PM

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ರೂಪಿಸುವ ಕನಸು ಕಾಣುತ್ತಿರುವ ಆರ್​ಎಸ್​ಎಸ್, ವಿಶ್ವ ಹಿಂದು ಪರಿಷತ್​, ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​, ಅಮಿತ್​ ಶಾರಿಗೆ ದೊಡ್ಡ ನಿರಾಸೆಯಾಗಲಿದೆ. ಅವರ ಕನಸು ಎಂದಿಗೂ ನನಸಾಗುವುದಿಲ್ಲ. ನಾನು ಬದುಕಿ ಇರುವವರೆಗೂ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ರೂಪಿಸಲು ಬಿಡುವುದಿಲ್ಲ ಎಂದು ತೆಲಂಗಾಣ ಕಾಂಗ್ರೆಸ್​ ನಾಯಕ ರಶೆದ್​ ಖಾನ್​ ತಿಳಿಸಿದ್ದಾರೆ.  ಅಲ್ಲದೆ, ಈ ದೇಶದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ ಮುಸ್ಲಿಮರಿಗೆ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ತಾರತಮ್ಯ ಮಾಡದೆ ಎಲ್ಲ ಪಕ್ಷದವರನ್ನೂ ಒಂದೇ ರೀತಿ ಕಾಣುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶ ಶಿಯಾ ವಕ್ಫ್​ ಮಂಡಳಿ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಇಸ್ಲಾಂ ತೊರೆದು ಹಿಂದು ಧರ್ಮಕ್ಕೆ ಸೇರ್ಪಡೆಯಾಗಿ, ಅವರ ಹೆಸರನ್ನು ಜಿತೇಂದ್ರ ನಾರಾಯಣ್ ಸಿಂಗ್​ ತ್ಯಾಗಿ ಎಂದು ಬದಲಿಸಿಕೊಂಡಿದ್ದಾರೆ. ಅವರು ಸನಾತನ ಧರ್ಮ ಒಪ್ಪಿಕೊಳ್ಳಲು ಮುಖ್ಯ ಕಾರಣ, ಆ ಧರ್ಮದಲ್ಲಿ ಅವರು ಸೃಷ್ಟಿಸಿಕೊಂಡಿದ್ದ ವಿವಾದ ಮತ್ತು ನಿರಂತರವಾಗಿ ಬರುತ್ತಿದ್ದ ಬೆದರಿಕೆ ಕರೆಗಳು. ಮುಸ್ಲಿಮರ ಪವಿತ್ರ ಗ್ರಂಥ ಕುರಾನ್​​ನಲ್ಲಿರುವ ಕೆಲವು ಆಯ್ದ ಭಾಗಗಳು ಹಿಂಸಾಚಾರವನ್ನು ಬೋಧಿಸುತ್ತವೆ. ಹಾಗಾಗಿ ಅವುಗಳನ್ನು ತೆಗೆದುಹಾಕಬೇಕು ಎಂದು ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹಾಗಂತ ಸುಪ್ರೀಂಕೋರ್ಟ್​ ಅವರ ಅರ್ಜಿಯನ್ನು ಮಾನ್ಯ ಮಾಡಿರಲಿಲ್ಲ. ಅದನ್ನು ತಿರಸ್ಕರಿಸಿತ್ತು.  ಅಷ್ಟೇ ಅಲ್ಲದೆ,  ಮೊಹಮ್ಮದ್​ ಎನ್ನುವ ಒಂದು ಪುಸ್ತಕ ಬಿಡುಗಡೆ ಮಾಡಿದ್ದರು. ಅದರಲ್ಲಿ ಪ್ರವಾದಿ ಮೊಹಮ್ಮದರ ವಿರುದ್ಧ ಆಕ್ಷೇಪಣೀಯ ಭಾಷೆ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ ಕೂಡ ರಿಜ್ವಿ ವಿರುದ್ಧ ಹೈದರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಾಗೇ, ರಿಜ್ವಿಯ ಈ ನಡವಳಿಕೆ ಹಿಂದೆ ಇಸ್ಲಾಂ ವಿರೋಧಿ ಶಕ್ತಿಗಳಿವೆ ಎಂದೂ ಆರೋಪ ಮಾಡಿದ್ದರು. ಜೀವ ಬೆದರಿಕೆ ಇನ್ನಷ್ಟು ಜಾಸ್ತಿಯಾಗಿತ್ತು. ಈ ವೇಳೆ ಈ ರಶೆದ್​ ಖಾನ್​ ಕೂಡ ಜಿತೇಂದ್ರ ಅವರ ವಿರುದ್ಧ ತಿರುಗಿಬಿದ್ದಿದ್ದರು. ರಿಜ್ವಿ ಹಿಂದೂ ಧರ್ಮಕ್ಕೆ ಸೇರುವ ಮೂಲಕ ಇಸ್ಲಾಂಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದಲ್ಲದೆ, ಅವರ ತಲೆಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು.

ಇದನ್ನೂ ಓದಿ: 60 ವರ್ಷ ಮೇಲ್ಪಟ್ಟು, ಇನ್ನಿತರ ಕಾಯಿಲೆಗಳಿರುವವರು ಲಸಿಕೆ 3ನೇ ಡೋಸ್ ಪಡೆಯಲು ಮೆಡಿಕಲ್​ ಸರ್ಟಿಫಿಕೇಟ್​ ಬೇಕಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್