AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬದುಕಿರುವವರೆಗೂ ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡಲು ಬಿಡುವುದಿಲ್ಲ: ಕಾಂಗ್ರೆಸ್ ನಾಯಕ ರಶೆದ್​​ ಖಾನ್​

ಈ ರಶೆದ್​ ಖಾನ್​ ಕೂಡ ಜಿತೇಂದ್ರ ಅವರ ವಿರುದ್ಧ ತಿರುಗಿಬಿದ್ದಿದ್ದರು. ರಿಜ್ವಿ ಹಿಂದೂ ಧರ್ಮಕ್ಕೆ ಸೇರುವ ಮೂಲಕ ಇಸ್ಲಾಂಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದರು.

ನಾನು ಬದುಕಿರುವವರೆಗೂ ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡಲು ಬಿಡುವುದಿಲ್ಲ: ಕಾಂಗ್ರೆಸ್ ನಾಯಕ ರಶೆದ್​​ ಖಾನ್​
ರಶೆದ್​ ಖಾನ್​
TV9 Web
| Edited By: |

Updated on: Dec 28, 2021 | 4:22 PM

Share

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ರೂಪಿಸುವ ಕನಸು ಕಾಣುತ್ತಿರುವ ಆರ್​ಎಸ್​ಎಸ್, ವಿಶ್ವ ಹಿಂದು ಪರಿಷತ್​, ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​, ಅಮಿತ್​ ಶಾರಿಗೆ ದೊಡ್ಡ ನಿರಾಸೆಯಾಗಲಿದೆ. ಅವರ ಕನಸು ಎಂದಿಗೂ ನನಸಾಗುವುದಿಲ್ಲ. ನಾನು ಬದುಕಿ ಇರುವವರೆಗೂ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ರೂಪಿಸಲು ಬಿಡುವುದಿಲ್ಲ ಎಂದು ತೆಲಂಗಾಣ ಕಾಂಗ್ರೆಸ್​ ನಾಯಕ ರಶೆದ್​ ಖಾನ್​ ತಿಳಿಸಿದ್ದಾರೆ.  ಅಲ್ಲದೆ, ಈ ದೇಶದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ ಮುಸ್ಲಿಮರಿಗೆ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ತಾರತಮ್ಯ ಮಾಡದೆ ಎಲ್ಲ ಪಕ್ಷದವರನ್ನೂ ಒಂದೇ ರೀತಿ ಕಾಣುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶ ಶಿಯಾ ವಕ್ಫ್​ ಮಂಡಳಿ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಇಸ್ಲಾಂ ತೊರೆದು ಹಿಂದು ಧರ್ಮಕ್ಕೆ ಸೇರ್ಪಡೆಯಾಗಿ, ಅವರ ಹೆಸರನ್ನು ಜಿತೇಂದ್ರ ನಾರಾಯಣ್ ಸಿಂಗ್​ ತ್ಯಾಗಿ ಎಂದು ಬದಲಿಸಿಕೊಂಡಿದ್ದಾರೆ. ಅವರು ಸನಾತನ ಧರ್ಮ ಒಪ್ಪಿಕೊಳ್ಳಲು ಮುಖ್ಯ ಕಾರಣ, ಆ ಧರ್ಮದಲ್ಲಿ ಅವರು ಸೃಷ್ಟಿಸಿಕೊಂಡಿದ್ದ ವಿವಾದ ಮತ್ತು ನಿರಂತರವಾಗಿ ಬರುತ್ತಿದ್ದ ಬೆದರಿಕೆ ಕರೆಗಳು. ಮುಸ್ಲಿಮರ ಪವಿತ್ರ ಗ್ರಂಥ ಕುರಾನ್​​ನಲ್ಲಿರುವ ಕೆಲವು ಆಯ್ದ ಭಾಗಗಳು ಹಿಂಸಾಚಾರವನ್ನು ಬೋಧಿಸುತ್ತವೆ. ಹಾಗಾಗಿ ಅವುಗಳನ್ನು ತೆಗೆದುಹಾಕಬೇಕು ಎಂದು ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹಾಗಂತ ಸುಪ್ರೀಂಕೋರ್ಟ್​ ಅವರ ಅರ್ಜಿಯನ್ನು ಮಾನ್ಯ ಮಾಡಿರಲಿಲ್ಲ. ಅದನ್ನು ತಿರಸ್ಕರಿಸಿತ್ತು.  ಅಷ್ಟೇ ಅಲ್ಲದೆ,  ಮೊಹಮ್ಮದ್​ ಎನ್ನುವ ಒಂದು ಪುಸ್ತಕ ಬಿಡುಗಡೆ ಮಾಡಿದ್ದರು. ಅದರಲ್ಲಿ ಪ್ರವಾದಿ ಮೊಹಮ್ಮದರ ವಿರುದ್ಧ ಆಕ್ಷೇಪಣೀಯ ಭಾಷೆ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ ಕೂಡ ರಿಜ್ವಿ ವಿರುದ್ಧ ಹೈದರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಾಗೇ, ರಿಜ್ವಿಯ ಈ ನಡವಳಿಕೆ ಹಿಂದೆ ಇಸ್ಲಾಂ ವಿರೋಧಿ ಶಕ್ತಿಗಳಿವೆ ಎಂದೂ ಆರೋಪ ಮಾಡಿದ್ದರು. ಜೀವ ಬೆದರಿಕೆ ಇನ್ನಷ್ಟು ಜಾಸ್ತಿಯಾಗಿತ್ತು. ಈ ವೇಳೆ ಈ ರಶೆದ್​ ಖಾನ್​ ಕೂಡ ಜಿತೇಂದ್ರ ಅವರ ವಿರುದ್ಧ ತಿರುಗಿಬಿದ್ದಿದ್ದರು. ರಿಜ್ವಿ ಹಿಂದೂ ಧರ್ಮಕ್ಕೆ ಸೇರುವ ಮೂಲಕ ಇಸ್ಲಾಂಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದಲ್ಲದೆ, ಅವರ ತಲೆಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು.

ಇದನ್ನೂ ಓದಿ: 60 ವರ್ಷ ಮೇಲ್ಪಟ್ಟು, ಇನ್ನಿತರ ಕಾಯಿಲೆಗಳಿರುವವರು ಲಸಿಕೆ 3ನೇ ಡೋಸ್ ಪಡೆಯಲು ಮೆಡಿಕಲ್​ ಸರ್ಟಿಫಿಕೇಟ್​ ಬೇಕಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

Follow Us
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ