AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿಗೆ ಭೇಟಿ ನೀಡಲು ಮುಂದಾದ ಪಂಜಾಬ್​ ಸಿಎಂ; ಯುಪಿ ಸರ್ಕಾರದ ಅನುಮತಿ ಕೇಳಿ ಪತ್ರ

ಲಖಿಂಪುರ ಭೇಟಿಗೆ ಅನುಮತಿ ನೀಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಪಂಜಾಬ್​ ಸರ್ಕಾರದ ಕಚೇರಿಯಿಂದ ಪತ್ರವನ್ನೂ ಬರೆಯಲಾಗಿದೆ. ಚಾಪರ್​ ಲ್ಯಾಂಡ್​ ಆಗಲು ಅನುಮತಿ ಕೊಡಿ ಎಂದು ಕೇಳಿದೆ.

ಲಖಿಂಪುರ ಖೇರಿಗೆ ಭೇಟಿ ನೀಡಲು ಮುಂದಾದ ಪಂಜಾಬ್​ ಸಿಎಂ; ಯುಪಿ ಸರ್ಕಾರದ ಅನುಮತಿ ಕೇಳಿ ಪತ್ರ
ಚರಣಜಿತ್​ ಸಿಂಗ್​ ಛನ್ನಿ
TV9 Web
| Updated By: Lakshmi Hegde|

Updated on: Oct 04, 2021 | 12:46 PM

Share

ಚಂಡಿಗಢ್​: ನಿನ್ನೆ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದು ಇಬ್ಬರು ಮೃತಪಟ್ಟ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿರುವ ಲಖಿಂಪುರ ಖೇರಿ (Lakhimpur Kheri Violence)ಗೆ ಭೇಟಿ ನೀಡಲು ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ(Punjab CM Charanjit Channi) ಮುಂದಾಗಿದ್ದಾರೆ. ಟ್ವೀಟ್ ಮಾಡಿರುವ ಛನ್ನಿ, ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಹಾಗೇ, ನಾನು ಲಖಿಂಪುರ ಖೇರಿ(Lakhimpur Kheri)ಗೆ ತೆರಳಲು ಇಚ್ಛಿಸಿದ್ದೇನೆ. ಆ ರೈತರ ಕುಟುಂಬದೊಟ್ಟಿಗೆ ನಾವು ನಿಲ್ಲಬೇಕು. ಚಾಪರ್​ ಮೂಲಕ ಗಲಾಟೆ ನಡೆಯುತ್ತಿರುವ ಸ್ಥಳಕ್ಕೆ ಹೋಗಲಿದ್ದು, ಇದಕ್ಕಾಗಿ ಉತ್ತರಪ್ರದೇಶ ಸರ್ಕಾರ ಅನುಮತಿ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ.  

ಹಾಗೇ ಲಖಿಂಪುರ ಭೇಟಿಗೆ ಅನುಮತಿ ನೀಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಪಂಜಾಬ್​ ಸರ್ಕಾರದ ಕಚೇರಿಯಿಂದ ಪತ್ರವನ್ನೂ ಬರೆಯಲಾಗಿದೆ. ಉತ್ತರಪ್ರದೇಶ ಹೆಚ್ಚುವರಿ ಕಾರ್ಯದರ್ಶಿ ಅವನೀಶ್​ ಅಶ್ವಥಿ ಅವರಿಗೆ ಪತ್ರ ಬರೆದಿರುವ ಪಂಜಾಬ್​ ನಾಗರಿಕ ವಿಮಾನಯಾನ ನಿರ್ದೇಶಕ, ಲಖಿಂಪುರದಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾರು ಹರಿದು ದುರಂತ ನಡೆದಿದೆ. ಅಲ್ಲಿ ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಪಂಜಾಬ್​ ಮುಖ್ಯಮಂತ್ರಿ ಭೇಟಿ ನೀಡಲು ಇಚ್ಛಿಸಿದ್ದಾರೆ. ಅವರ ಚಾಪರ್​ ಅಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ. ಆದರೆ ಉತ್ತರ ಪ್ರದೇಶ ಸರ್ಕಾರ ಪಂಜಾಬ್​ ಸರ್ಕಾರಕ್ಕೆ ಪತ್ರ ಬರೆದು, ಸ್ಥಳದಲ್ಲಿ ಸೆಕ್ಷನ್​ 144 ಹೇರಲಾಗಿದ್ದು, ಸದ್ಯ ಅಲ್ಲಿಗೆ ಯಾರಿಗೂ ಹೋಗಲು ಬಿಡುತ್ತಿಲ್ಲ ಎಂದು ಹೇಳಿದೆ ಎಂದು ಎಎನ್​ಐ ವರದಿ ಮಾಡಿದೆ.

ಲಖಿಂಪುರ ಖೇರಿಯಲ್ಲಿ ಹಿಂಸಾಚಾರ ಶುರುವಾಗುತ್ತಿದ್ದಂತೆ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಛತ್ತೀಸ್​ಗಢ್​ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​, ಪಂಜಾಬ್​ ಡಿಸಿಎಂ ಸುಖ್​ಜಿಂದರ್ ಸಿಂಗ್ ರಾಂಧವ ಸೇರಿ ಹಲವು ಭೇಟಿ ನೀಡಲು ಮುಂದಾಗಿದ್ದರು. ಇನ್ನು ಲಖಿಂಪುರ ಖೇರಿಗೆ ಹೊರಟಿದ್ದ ಪ್ರಿಯಾಂಕಾ ಗಾಂಧಿಯನ್ನು ಸೀತಾಪುರ ಜಿಲ್ಲೆಯ ಹರಗಾಂವ್​​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರಿಯಾಂಕಾ ಮತ್ತು ಪೊಲೀಸರ ನಡುವೆ ವಾಗ್ವಾದವೂ ನಡೆದಿದೆ. ಹಾಗೇ, ಭೂಪೇಶ್​ ಬಾಘೇಲ್​ ಮತ್ತು ಸುಖ್​ಜಿಂದರ್​ ಸಿಂಗ್​ಗೆ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡಬೇಡಿ ಎಂದು ಲಖನೌ ಏರ್​ಪೋರ್ಟ್​ಗೆ ಯುಪಿ ಸರ್ಕಾರ ಹೇಳಿದೆ. ಇನ್ನು ಬೆಳಗ್ಗೆಯೇ ಲಖಿಂಪುರಕ್ಕೆ ತೆರಳಲು ಮುಂದಾಗಿದ್ದ ಅಖಿಲೇಶ್​ ಯಾದವ್​​ರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಅವರಿಗೆ ಗೃಹಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ‘ತೆಲಂಗಾಣ ಸಿಎಂ ಕೆಸಿಆರ್​ ರಾಜ್ಯದ ಗರ್ಭಿಣಿಯರಿಗೆ ಪತಿಯಿದ್ದಂತೆ..’-​ ಹೊಗಳುವ ಭರದಲ್ಲಿ ವಿವಾದ ಸೃಷ್ಟಿಸಿದ ಟಿಆರ್​ಎಸ್​ ಶಾಸಕ

ಕಂದಾಯ ಸಚಿವ ಆರ್.ಅಶೋಕರಿಂದ ಪಿಂಡ ಪ್ರದಾನ ಕಾರ್ಯ; ಕೊವಿಡ್‌ನಿಂದ ಮೃತಪಟ್ಟ 1 ಸಾವಿರಕ್ಕೂ ಹೆಚ್ಚು ಜನರ ಅಸ್ಥಿ ವಿಸರ್ಜನೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!