AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿಗೆ ಭೇಟಿ ನೀಡಲು ಮುಂದಾದ ಪಂಜಾಬ್​ ಸಿಎಂ; ಯುಪಿ ಸರ್ಕಾರದ ಅನುಮತಿ ಕೇಳಿ ಪತ್ರ

ಲಖಿಂಪುರ ಭೇಟಿಗೆ ಅನುಮತಿ ನೀಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಪಂಜಾಬ್​ ಸರ್ಕಾರದ ಕಚೇರಿಯಿಂದ ಪತ್ರವನ್ನೂ ಬರೆಯಲಾಗಿದೆ. ಚಾಪರ್​ ಲ್ಯಾಂಡ್​ ಆಗಲು ಅನುಮತಿ ಕೊಡಿ ಎಂದು ಕೇಳಿದೆ.

ಲಖಿಂಪುರ ಖೇರಿಗೆ ಭೇಟಿ ನೀಡಲು ಮುಂದಾದ ಪಂಜಾಬ್​ ಸಿಎಂ; ಯುಪಿ ಸರ್ಕಾರದ ಅನುಮತಿ ಕೇಳಿ ಪತ್ರ
ಚರಣಜಿತ್​ ಸಿಂಗ್​ ಛನ್ನಿ
TV9 Web
| Edited By: |

Updated on: Oct 04, 2021 | 12:46 PM

Share

ಚಂಡಿಗಢ್​: ನಿನ್ನೆ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದು ಇಬ್ಬರು ಮೃತಪಟ್ಟ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿರುವ ಲಖಿಂಪುರ ಖೇರಿ (Lakhimpur Kheri Violence)ಗೆ ಭೇಟಿ ನೀಡಲು ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ(Punjab CM Charanjit Channi) ಮುಂದಾಗಿದ್ದಾರೆ. ಟ್ವೀಟ್ ಮಾಡಿರುವ ಛನ್ನಿ, ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಹಾಗೇ, ನಾನು ಲಖಿಂಪುರ ಖೇರಿ(Lakhimpur Kheri)ಗೆ ತೆರಳಲು ಇಚ್ಛಿಸಿದ್ದೇನೆ. ಆ ರೈತರ ಕುಟುಂಬದೊಟ್ಟಿಗೆ ನಾವು ನಿಲ್ಲಬೇಕು. ಚಾಪರ್​ ಮೂಲಕ ಗಲಾಟೆ ನಡೆಯುತ್ತಿರುವ ಸ್ಥಳಕ್ಕೆ ಹೋಗಲಿದ್ದು, ಇದಕ್ಕಾಗಿ ಉತ್ತರಪ್ರದೇಶ ಸರ್ಕಾರ ಅನುಮತಿ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ.  

ಹಾಗೇ ಲಖಿಂಪುರ ಭೇಟಿಗೆ ಅನುಮತಿ ನೀಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಪಂಜಾಬ್​ ಸರ್ಕಾರದ ಕಚೇರಿಯಿಂದ ಪತ್ರವನ್ನೂ ಬರೆಯಲಾಗಿದೆ. ಉತ್ತರಪ್ರದೇಶ ಹೆಚ್ಚುವರಿ ಕಾರ್ಯದರ್ಶಿ ಅವನೀಶ್​ ಅಶ್ವಥಿ ಅವರಿಗೆ ಪತ್ರ ಬರೆದಿರುವ ಪಂಜಾಬ್​ ನಾಗರಿಕ ವಿಮಾನಯಾನ ನಿರ್ದೇಶಕ, ಲಖಿಂಪುರದಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾರು ಹರಿದು ದುರಂತ ನಡೆದಿದೆ. ಅಲ್ಲಿ ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಪಂಜಾಬ್​ ಮುಖ್ಯಮಂತ್ರಿ ಭೇಟಿ ನೀಡಲು ಇಚ್ಛಿಸಿದ್ದಾರೆ. ಅವರ ಚಾಪರ್​ ಅಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ. ಆದರೆ ಉತ್ತರ ಪ್ರದೇಶ ಸರ್ಕಾರ ಪಂಜಾಬ್​ ಸರ್ಕಾರಕ್ಕೆ ಪತ್ರ ಬರೆದು, ಸ್ಥಳದಲ್ಲಿ ಸೆಕ್ಷನ್​ 144 ಹೇರಲಾಗಿದ್ದು, ಸದ್ಯ ಅಲ್ಲಿಗೆ ಯಾರಿಗೂ ಹೋಗಲು ಬಿಡುತ್ತಿಲ್ಲ ಎಂದು ಹೇಳಿದೆ ಎಂದು ಎಎನ್​ಐ ವರದಿ ಮಾಡಿದೆ.

ಲಖಿಂಪುರ ಖೇರಿಯಲ್ಲಿ ಹಿಂಸಾಚಾರ ಶುರುವಾಗುತ್ತಿದ್ದಂತೆ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಛತ್ತೀಸ್​ಗಢ್​ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​, ಪಂಜಾಬ್​ ಡಿಸಿಎಂ ಸುಖ್​ಜಿಂದರ್ ಸಿಂಗ್ ರಾಂಧವ ಸೇರಿ ಹಲವು ಭೇಟಿ ನೀಡಲು ಮುಂದಾಗಿದ್ದರು. ಇನ್ನು ಲಖಿಂಪುರ ಖೇರಿಗೆ ಹೊರಟಿದ್ದ ಪ್ರಿಯಾಂಕಾ ಗಾಂಧಿಯನ್ನು ಸೀತಾಪುರ ಜಿಲ್ಲೆಯ ಹರಗಾಂವ್​​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರಿಯಾಂಕಾ ಮತ್ತು ಪೊಲೀಸರ ನಡುವೆ ವಾಗ್ವಾದವೂ ನಡೆದಿದೆ. ಹಾಗೇ, ಭೂಪೇಶ್​ ಬಾಘೇಲ್​ ಮತ್ತು ಸುಖ್​ಜಿಂದರ್​ ಸಿಂಗ್​ಗೆ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡಬೇಡಿ ಎಂದು ಲಖನೌ ಏರ್​ಪೋರ್ಟ್​ಗೆ ಯುಪಿ ಸರ್ಕಾರ ಹೇಳಿದೆ. ಇನ್ನು ಬೆಳಗ್ಗೆಯೇ ಲಖಿಂಪುರಕ್ಕೆ ತೆರಳಲು ಮುಂದಾಗಿದ್ದ ಅಖಿಲೇಶ್​ ಯಾದವ್​​ರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಅವರಿಗೆ ಗೃಹಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ‘ತೆಲಂಗಾಣ ಸಿಎಂ ಕೆಸಿಆರ್​ ರಾಜ್ಯದ ಗರ್ಭಿಣಿಯರಿಗೆ ಪತಿಯಿದ್ದಂತೆ..’-​ ಹೊಗಳುವ ಭರದಲ್ಲಿ ವಿವಾದ ಸೃಷ್ಟಿಸಿದ ಟಿಆರ್​ಎಸ್​ ಶಾಸಕ

ಕಂದಾಯ ಸಚಿವ ಆರ್.ಅಶೋಕರಿಂದ ಪಿಂಡ ಪ್ರದಾನ ಕಾರ್ಯ; ಕೊವಿಡ್‌ನಿಂದ ಮೃತಪಟ್ಟ 1 ಸಾವಿರಕ್ಕೂ ಹೆಚ್ಚು ಜನರ ಅಸ್ಥಿ ವಿಸರ್ಜನೆ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ