AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿಗೆ ಭೇಟಿ ನೀಡಲು ಮುಂದಾದ ಪಂಜಾಬ್​ ಸಿಎಂ; ಯುಪಿ ಸರ್ಕಾರದ ಅನುಮತಿ ಕೇಳಿ ಪತ್ರ

ಲಖಿಂಪುರ ಭೇಟಿಗೆ ಅನುಮತಿ ನೀಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಪಂಜಾಬ್​ ಸರ್ಕಾರದ ಕಚೇರಿಯಿಂದ ಪತ್ರವನ್ನೂ ಬರೆಯಲಾಗಿದೆ. ಚಾಪರ್​ ಲ್ಯಾಂಡ್​ ಆಗಲು ಅನುಮತಿ ಕೊಡಿ ಎಂದು ಕೇಳಿದೆ.

ಲಖಿಂಪುರ ಖೇರಿಗೆ ಭೇಟಿ ನೀಡಲು ಮುಂದಾದ ಪಂಜಾಬ್​ ಸಿಎಂ; ಯುಪಿ ಸರ್ಕಾರದ ಅನುಮತಿ ಕೇಳಿ ಪತ್ರ
ಚರಣಜಿತ್​ ಸಿಂಗ್​ ಛನ್ನಿ
TV9 Web
| Edited By: |

Updated on: Oct 04, 2021 | 12:46 PM

Share

ಚಂಡಿಗಢ್​: ನಿನ್ನೆ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದು ಇಬ್ಬರು ಮೃತಪಟ್ಟ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿರುವ ಲಖಿಂಪುರ ಖೇರಿ (Lakhimpur Kheri Violence)ಗೆ ಭೇಟಿ ನೀಡಲು ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ(Punjab CM Charanjit Channi) ಮುಂದಾಗಿದ್ದಾರೆ. ಟ್ವೀಟ್ ಮಾಡಿರುವ ಛನ್ನಿ, ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಹಾಗೇ, ನಾನು ಲಖಿಂಪುರ ಖೇರಿ(Lakhimpur Kheri)ಗೆ ತೆರಳಲು ಇಚ್ಛಿಸಿದ್ದೇನೆ. ಆ ರೈತರ ಕುಟುಂಬದೊಟ್ಟಿಗೆ ನಾವು ನಿಲ್ಲಬೇಕು. ಚಾಪರ್​ ಮೂಲಕ ಗಲಾಟೆ ನಡೆಯುತ್ತಿರುವ ಸ್ಥಳಕ್ಕೆ ಹೋಗಲಿದ್ದು, ಇದಕ್ಕಾಗಿ ಉತ್ತರಪ್ರದೇಶ ಸರ್ಕಾರ ಅನುಮತಿ ನೀಡಬೇಕು ಎಂದೂ ಕೇಳಿಕೊಂಡಿದ್ದಾರೆ.  

ಹಾಗೇ ಲಖಿಂಪುರ ಭೇಟಿಗೆ ಅನುಮತಿ ನೀಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಪಂಜಾಬ್​ ಸರ್ಕಾರದ ಕಚೇರಿಯಿಂದ ಪತ್ರವನ್ನೂ ಬರೆಯಲಾಗಿದೆ. ಉತ್ತರಪ್ರದೇಶ ಹೆಚ್ಚುವರಿ ಕಾರ್ಯದರ್ಶಿ ಅವನೀಶ್​ ಅಶ್ವಥಿ ಅವರಿಗೆ ಪತ್ರ ಬರೆದಿರುವ ಪಂಜಾಬ್​ ನಾಗರಿಕ ವಿಮಾನಯಾನ ನಿರ್ದೇಶಕ, ಲಖಿಂಪುರದಲ್ಲಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾರು ಹರಿದು ದುರಂತ ನಡೆದಿದೆ. ಅಲ್ಲಿ ಮೃತ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಪಂಜಾಬ್​ ಮುಖ್ಯಮಂತ್ರಿ ಭೇಟಿ ನೀಡಲು ಇಚ್ಛಿಸಿದ್ದಾರೆ. ಅವರ ಚಾಪರ್​ ಅಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ. ಆದರೆ ಉತ್ತರ ಪ್ರದೇಶ ಸರ್ಕಾರ ಪಂಜಾಬ್​ ಸರ್ಕಾರಕ್ಕೆ ಪತ್ರ ಬರೆದು, ಸ್ಥಳದಲ್ಲಿ ಸೆಕ್ಷನ್​ 144 ಹೇರಲಾಗಿದ್ದು, ಸದ್ಯ ಅಲ್ಲಿಗೆ ಯಾರಿಗೂ ಹೋಗಲು ಬಿಡುತ್ತಿಲ್ಲ ಎಂದು ಹೇಳಿದೆ ಎಂದು ಎಎನ್​ಐ ವರದಿ ಮಾಡಿದೆ.

ಲಖಿಂಪುರ ಖೇರಿಯಲ್ಲಿ ಹಿಂಸಾಚಾರ ಶುರುವಾಗುತ್ತಿದ್ದಂತೆ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಛತ್ತೀಸ್​ಗಢ್​ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​, ಪಂಜಾಬ್​ ಡಿಸಿಎಂ ಸುಖ್​ಜಿಂದರ್ ಸಿಂಗ್ ರಾಂಧವ ಸೇರಿ ಹಲವು ಭೇಟಿ ನೀಡಲು ಮುಂದಾಗಿದ್ದರು. ಇನ್ನು ಲಖಿಂಪುರ ಖೇರಿಗೆ ಹೊರಟಿದ್ದ ಪ್ರಿಯಾಂಕಾ ಗಾಂಧಿಯನ್ನು ಸೀತಾಪುರ ಜಿಲ್ಲೆಯ ಹರಗಾಂವ್​​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರಿಯಾಂಕಾ ಮತ್ತು ಪೊಲೀಸರ ನಡುವೆ ವಾಗ್ವಾದವೂ ನಡೆದಿದೆ. ಹಾಗೇ, ಭೂಪೇಶ್​ ಬಾಘೇಲ್​ ಮತ್ತು ಸುಖ್​ಜಿಂದರ್​ ಸಿಂಗ್​ಗೆ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಲು ಅನುಮತಿ ನೀಡಬೇಡಿ ಎಂದು ಲಖನೌ ಏರ್​ಪೋರ್ಟ್​ಗೆ ಯುಪಿ ಸರ್ಕಾರ ಹೇಳಿದೆ. ಇನ್ನು ಬೆಳಗ್ಗೆಯೇ ಲಖಿಂಪುರಕ್ಕೆ ತೆರಳಲು ಮುಂದಾಗಿದ್ದ ಅಖಿಲೇಶ್​ ಯಾದವ್​​ರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಅವರಿಗೆ ಗೃಹಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ‘ತೆಲಂಗಾಣ ಸಿಎಂ ಕೆಸಿಆರ್​ ರಾಜ್ಯದ ಗರ್ಭಿಣಿಯರಿಗೆ ಪತಿಯಿದ್ದಂತೆ..’-​ ಹೊಗಳುವ ಭರದಲ್ಲಿ ವಿವಾದ ಸೃಷ್ಟಿಸಿದ ಟಿಆರ್​ಎಸ್​ ಶಾಸಕ

ಕಂದಾಯ ಸಚಿವ ಆರ್.ಅಶೋಕರಿಂದ ಪಿಂಡ ಪ್ರದಾನ ಕಾರ್ಯ; ಕೊವಿಡ್‌ನಿಂದ ಮೃತಪಟ್ಟ 1 ಸಾವಿರಕ್ಕೂ ಹೆಚ್ಚು ಜನರ ಅಸ್ಥಿ ವಿಸರ್ಜನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ