AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ವಾಯುಪಡೆಯ ಏರ್​ ಶೋ; ಕಮಾಂಡೋಗಳನ್ನು ಹೊತ್ತು ಇಳಿದ ಎಎನ್​-32 ಯುದ್ಧ ವಿಮಾನ

Purvanchal Expressway Air Show: ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧವಿಮಾನಗಳ ವೈಮಾನಿಕ ಪ್ರದರ್ಶನದಲ್ಲಿ ಮೊದಲು ಬಂದಿಳಿದಿದೆ. ಮಿರಾಜ್ 2000 ಯುದ್ಧವಿಮಾನಗಳು ಈ ಹಿಂದೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದವು.

ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ವಾಯುಪಡೆಯ ಏರ್​ ಶೋ; ಕಮಾಂಡೋಗಳನ್ನು ಹೊತ್ತು ಇಳಿದ ಎಎನ್​-32 ಯುದ್ಧ ವಿಮಾನ
ಮಿರಾಜ್ 2000 ಯುದ್ಧವಿಮಾನದ ವೈಮಾನಿಕ ಪ್ರದರ್ಶನ
TV9 Web
| Edited By: |

Updated on:Nov 16, 2021 | 4:27 PM

Share

ನವದೆಹಲಿ: ಉತ್ತರ ಪ್ರದೇಶದಲ್ಲಿ 341 ಕಿ.ಮೀ. ಉದ್ದದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. 22,500 ಕೋಟಿ ರೂ. ವೆಚ್ಚದ ಈ ಬೃಹತ್ ಹೈವೇ ಯೋಜನೆಗೆ ಚಾಲನೆ ನೀಡಿದ ಬಳಿಕ ಸುಖೋಯ್‌, ಮಿರೇಜ್‌, ರಫೇಲ್‌ ಹಾಗೂ ಎಎನ್‌-32 ವಿಮಾನಗಳು ವೈಮಾನಿಕ ಪ್ರದರ್ಶನದಲ್ಲಿ ಭಾಗಿಯಾಗಲಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಸಿ-130 ಹರ್ಕ್ಯುಲಸ್‌ ವಿಮಾನದಲ್ಲಿ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಗೆ ಬಂದಿಳಿದಿದ್ದಾರೆ. ಇಂದಿನ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ಆಯೋಜಿಸಲಾಗಿದ್ದ ವೈಮಾನಿಕ ಪ್ರದರ್ಶನದಲ್ಲಿ ಮಿರಾಜ್ 2000 ಯುದ್ಧ ವಿಮಾನ ಮೊದಲು ಪ್ರದರ್ಶನಗೊಂಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸಿ-130ಜೆ ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಗೆ ಬಂದಿಳಿದಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನು ಲ್ಯಾಂಡ್ ಮಾಡಲು ಮತ್ತು ಟೇಕಾಫ್ ಮಾಡಲು ಅನುಕೂಲವಾಗುವಂತೆ ಈ ಎಕ್ಸ್​ಪ್ರೆಸ್​ವೇಯನ್ನು ನಿರ್ಮಿಸಲಾಗಿದೆ. ಇಂದು ನಡೆದ ವೈಮಾನಿಕ ಪ್ರದರ್ಶನದಲ್ಲಿ AN-32 ವಿಶೇಷ ಕಮಾಂಡೋಗಳನ್ನು ಹೊತ್ತೊಯ್ಯುವ ಏರ್‌ಸ್ಟ್ರಿಪ್‌ನಲ್ಲಿ ಇಳಿದಿದೆ. ಈ ವೇಳೆ ವಿಶೇಷ ಕಮಾಂಡೋಗಳನ್ನು ಹೊತ್ತುಕೊಂಡು AN-32 ಏರ್‌ಸ್ಟ್ರಿಪ್‌ನಲ್ಲಿ ಇಳಿದಿದೆ.

ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧವಿಮಾನಗಳ ವೈಮಾನಿಕ ಪ್ರದರ್ಶನದಲ್ಲಿ ಮೊದಲು ಬಂದಿಳಿದಿದೆ. ಮಿರಾಜ್ 2000 ಯುದ್ಧವಿಮಾನಗಳು ಈ ಹಿಂದೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದವು. ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಿಸಲಾದ 3.20 ಕಿಮೀ ಉದ್ದದ ಏರ್‌ಸ್ಟ್ರಿಪ್‌ನಲ್ಲಿ ಏರ್ ಫೋರ್ಸ್ ಉದ್ಘಾಟನಾ ಸಮಾರಂಭದಲ್ಲಿ ಏರ್ ಶೋ ನಡೆಸಿದೆ. ಮಿರಾಜ್ 2000, ಜಾಗ್ವಾರ್ ಮತ್ತು ಸುಖೋಯ್ ಫೈಟರ್ ಏರ್‌ಕ್ರಾಫ್ಟ್‌ಗಳು, ಜೊತೆಗೆ AN-32, Kiran Mk II ಏರ್ ಶೋನಲ್ಲಿ ಭಾಗವಹಿಸಿವೆ.

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಸುಮಾರು 22,500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಸಿಎನ್‌ಜಿ ಸ್ಟೇಷನ್‌ಗಳು, ವಾಹನಗಳಿಗೆ ಎಲೆಕ್ಟ್ರಿಕ್ ರೀಚಾರ್ಜ್ ಕೇಂದ್ರಗಳನ್ನು ಹೊಂದಿದೆ. ಈ ಹೈವೇಯಲ್ಲಿ ಗಂಟೆಗೆ 120 ಕಿಮೀ ವೇಗದಲ್ಲಿ ವಾಹನಗಳು ಸಂಚರಿಸುವ ಸಾಮರ್ಥ್ಯ ಹೊಂದಿದೆ. ಈ ಹೊಸ ಯೋಜನೆಯಿಂದ ಉತ್ತರ ಪ್ರದೇಶದ ಪೂರ್ವ ಪ್ರದೇಶವು ಲಕ್ನೋಗೆ ಮಾತ್ರವಲ್ಲದೆ ಆಗ್ರಾ-ಲಕ್ನೋ ಮತ್ತು ಯಮುನಾ ಎಕ್ಸ್‌ಪ್ರೆಸ್‌ವೇಗಳ ಮೂಲಕ ನವದೆಹಲಿಗೆ ಕೂಡ ಸಂಪರ್ಕ ಕಲ್ಪಿಸುತ್ತದೆ. ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ 22 ಫ್ಲೈಓವರ್‌ಗಳು, 7 ರೈಲ್ವೆ-ಓವರ್-ಬ್ರಿಡ್ಜ್‌ಗಳು (ROB), 7 ಪ್ರಮುಖ ಸೇತುವೆಗಳು, 114 ಸಣ್ಣ ಸೇತುವೆಗಳು, 6 ಟೋಲ್ ಪ್ಲಾಜಾಗಳು, 45 ವಾಹನ-ಅಂಡರ್‌ಪಾಸ್‌ಗಳು (VUP), 139 ಲೈಟ್ VUP, 87 ಪಾದಚಾರಿ ಅಂಡರ್‌ಪಾಸ್ ಮತ್ತು 525 ಬಾಕ್ಸ್ ಕಲ್ವರ್ಟ್‌ಗಳನ್ನು ಹೊಂದಿರುತ್ತದೆ.

ಇದನ್ನೂ ಓದಿ: ಕಾನ್ಪುರದಲ್ಲಿ ವಾಯುಪಡೆಯ 6 ಸಿಬ್ಬಂದಿ ಸೇರಿ 25ಕ್ಕೂ ಹೆಚ್ಚು ಜನರಿಗೆ ಝಿಕಾ ವೈರಸ್ ಸೋಂಕು

Purvanchal Expressway Inaguration: ಉತ್ತರ ಪ್ರದೇಶದಲ್ಲಿ 22,500 ಕೋಟಿ ವೆಚ್ಚದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Published On - 4:22 pm, Tue, 16 November 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು