AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ವಾಯುಪಡೆಯ ಏರ್​ ಶೋ; ಕಮಾಂಡೋಗಳನ್ನು ಹೊತ್ತು ಇಳಿದ ಎಎನ್​-32 ಯುದ್ಧ ವಿಮಾನ

Purvanchal Expressway Air Show: ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧವಿಮಾನಗಳ ವೈಮಾನಿಕ ಪ್ರದರ್ಶನದಲ್ಲಿ ಮೊದಲು ಬಂದಿಳಿದಿದೆ. ಮಿರಾಜ್ 2000 ಯುದ್ಧವಿಮಾನಗಳು ಈ ಹಿಂದೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದವು.

ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ವಾಯುಪಡೆಯ ಏರ್​ ಶೋ; ಕಮಾಂಡೋಗಳನ್ನು ಹೊತ್ತು ಇಳಿದ ಎಎನ್​-32 ಯುದ್ಧ ವಿಮಾನ
ಮಿರಾಜ್ 2000 ಯುದ್ಧವಿಮಾನದ ವೈಮಾನಿಕ ಪ್ರದರ್ಶನ
TV9 Web
| Edited By: |

Updated on:Nov 16, 2021 | 4:27 PM

Share

ನವದೆಹಲಿ: ಉತ್ತರ ಪ್ರದೇಶದಲ್ಲಿ 341 ಕಿ.ಮೀ. ಉದ್ದದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. 22,500 ಕೋಟಿ ರೂ. ವೆಚ್ಚದ ಈ ಬೃಹತ್ ಹೈವೇ ಯೋಜನೆಗೆ ಚಾಲನೆ ನೀಡಿದ ಬಳಿಕ ಸುಖೋಯ್‌, ಮಿರೇಜ್‌, ರಫೇಲ್‌ ಹಾಗೂ ಎಎನ್‌-32 ವಿಮಾನಗಳು ವೈಮಾನಿಕ ಪ್ರದರ್ಶನದಲ್ಲಿ ಭಾಗಿಯಾಗಲಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಸಿ-130 ಹರ್ಕ್ಯುಲಸ್‌ ವಿಮಾನದಲ್ಲಿ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಗೆ ಬಂದಿಳಿದಿದ್ದಾರೆ. ಇಂದಿನ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ಆಯೋಜಿಸಲಾಗಿದ್ದ ವೈಮಾನಿಕ ಪ್ರದರ್ಶನದಲ್ಲಿ ಮಿರಾಜ್ 2000 ಯುದ್ಧ ವಿಮಾನ ಮೊದಲು ಪ್ರದರ್ಶನಗೊಂಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸಿ-130ಜೆ ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಗೆ ಬಂದಿಳಿದಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನು ಲ್ಯಾಂಡ್ ಮಾಡಲು ಮತ್ತು ಟೇಕಾಫ್ ಮಾಡಲು ಅನುಕೂಲವಾಗುವಂತೆ ಈ ಎಕ್ಸ್​ಪ್ರೆಸ್​ವೇಯನ್ನು ನಿರ್ಮಿಸಲಾಗಿದೆ. ಇಂದು ನಡೆದ ವೈಮಾನಿಕ ಪ್ರದರ್ಶನದಲ್ಲಿ AN-32 ವಿಶೇಷ ಕಮಾಂಡೋಗಳನ್ನು ಹೊತ್ತೊಯ್ಯುವ ಏರ್‌ಸ್ಟ್ರಿಪ್‌ನಲ್ಲಿ ಇಳಿದಿದೆ. ಈ ವೇಳೆ ವಿಶೇಷ ಕಮಾಂಡೋಗಳನ್ನು ಹೊತ್ತುಕೊಂಡು AN-32 ಏರ್‌ಸ್ಟ್ರಿಪ್‌ನಲ್ಲಿ ಇಳಿದಿದೆ.

ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧವಿಮಾನಗಳ ವೈಮಾನಿಕ ಪ್ರದರ್ಶನದಲ್ಲಿ ಮೊದಲು ಬಂದಿಳಿದಿದೆ. ಮಿರಾಜ್ 2000 ಯುದ್ಧವಿಮಾನಗಳು ಈ ಹಿಂದೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದವು. ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಿಸಲಾದ 3.20 ಕಿಮೀ ಉದ್ದದ ಏರ್‌ಸ್ಟ್ರಿಪ್‌ನಲ್ಲಿ ಏರ್ ಫೋರ್ಸ್ ಉದ್ಘಾಟನಾ ಸಮಾರಂಭದಲ್ಲಿ ಏರ್ ಶೋ ನಡೆಸಿದೆ. ಮಿರಾಜ್ 2000, ಜಾಗ್ವಾರ್ ಮತ್ತು ಸುಖೋಯ್ ಫೈಟರ್ ಏರ್‌ಕ್ರಾಫ್ಟ್‌ಗಳು, ಜೊತೆಗೆ AN-32, Kiran Mk II ಏರ್ ಶೋನಲ್ಲಿ ಭಾಗವಹಿಸಿವೆ.

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಸುಮಾರು 22,500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಸಿಎನ್‌ಜಿ ಸ್ಟೇಷನ್‌ಗಳು, ವಾಹನಗಳಿಗೆ ಎಲೆಕ್ಟ್ರಿಕ್ ರೀಚಾರ್ಜ್ ಕೇಂದ್ರಗಳನ್ನು ಹೊಂದಿದೆ. ಈ ಹೈವೇಯಲ್ಲಿ ಗಂಟೆಗೆ 120 ಕಿಮೀ ವೇಗದಲ್ಲಿ ವಾಹನಗಳು ಸಂಚರಿಸುವ ಸಾಮರ್ಥ್ಯ ಹೊಂದಿದೆ. ಈ ಹೊಸ ಯೋಜನೆಯಿಂದ ಉತ್ತರ ಪ್ರದೇಶದ ಪೂರ್ವ ಪ್ರದೇಶವು ಲಕ್ನೋಗೆ ಮಾತ್ರವಲ್ಲದೆ ಆಗ್ರಾ-ಲಕ್ನೋ ಮತ್ತು ಯಮುನಾ ಎಕ್ಸ್‌ಪ್ರೆಸ್‌ವೇಗಳ ಮೂಲಕ ನವದೆಹಲಿಗೆ ಕೂಡ ಸಂಪರ್ಕ ಕಲ್ಪಿಸುತ್ತದೆ. ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ 22 ಫ್ಲೈಓವರ್‌ಗಳು, 7 ರೈಲ್ವೆ-ಓವರ್-ಬ್ರಿಡ್ಜ್‌ಗಳು (ROB), 7 ಪ್ರಮುಖ ಸೇತುವೆಗಳು, 114 ಸಣ್ಣ ಸೇತುವೆಗಳು, 6 ಟೋಲ್ ಪ್ಲಾಜಾಗಳು, 45 ವಾಹನ-ಅಂಡರ್‌ಪಾಸ್‌ಗಳು (VUP), 139 ಲೈಟ್ VUP, 87 ಪಾದಚಾರಿ ಅಂಡರ್‌ಪಾಸ್ ಮತ್ತು 525 ಬಾಕ್ಸ್ ಕಲ್ವರ್ಟ್‌ಗಳನ್ನು ಹೊಂದಿರುತ್ತದೆ.

ಇದನ್ನೂ ಓದಿ: ಕಾನ್ಪುರದಲ್ಲಿ ವಾಯುಪಡೆಯ 6 ಸಿಬ್ಬಂದಿ ಸೇರಿ 25ಕ್ಕೂ ಹೆಚ್ಚು ಜನರಿಗೆ ಝಿಕಾ ವೈರಸ್ ಸೋಂಕು

Purvanchal Expressway Inaguration: ಉತ್ತರ ಪ್ರದೇಶದಲ್ಲಿ 22,500 ಕೋಟಿ ವೆಚ್ಚದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Published On - 4:22 pm, Tue, 16 November 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?