AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಫ್​ನ​ 30 ವಾಯುನೆಲೆಗಳಿಗೆ ಆಧುನಿಕ ಸ್ಪರ್ಶ; ಆಧುನೀಕರಣಗೊಳ್ಳಲಿವೆ ಇನ್ನೂ 37 ನೆಲೆಗಳು

ವಾಯುನೆಲೆಗಳ ಮೂಲಸೌಕರ್ಯ, ಸಾಮರ್ಥ್ಯ ವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಆ ಮೂಲಕ ಪ್ರತಿಕೂಲ ಹವಾಮಾನ ಸ್ಥಿತಿಯಲ್ಲಿಯೂ ಕಾರ್ಯಾಚರಣೆ ನಡೆಸಬಲ್ಲ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಐಎಎಫ್​ನ​ 30 ವಾಯುನೆಲೆಗಳಿಗೆ ಆಧುನಿಕ ಸ್ಪರ್ಶ; ಆಧುನೀಕರಣಗೊಳ್ಳಲಿವೆ ಇನ್ನೂ 37 ನೆಲೆಗಳು
ಸಾಂದರ್ಭಿಕ ಚಿತ್ರImage Credit source: PTI
TV9 Web
| Updated By: Ganapathi Sharma|

Updated on: Dec 10, 2022 | 6:52 PM

Share

ನವದೆಹಲಿ: ಭಾರತೀಯ ವಾಯುಪಡೆಯ (IAF) 30 ವಾಯುನೆಲೆಗಳನ್ನು ಆಧುನೀಕರಣಗೊಳಿಸಲಾಗಿದೆ. ಇನ್ನೂ 37 ವಾಯುನೆಲೆಗಳನ್ನು ಆಧುನೀಕರಣಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಶ್ನೆಯೊಂದಕ್ಕೆ ಲೋಕಸಭೆಯಲ್ಲಿ (Lok Sabha) ಲಿಖಿತ ಉತ್ತರ ನೀಡಿದ ರಕ್ಷಣಾ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಭಟ್, ಎರಡು ಹಂತಗಳಲ್ಲಿ ರಕ್ಷಣಾ ವಾಯುನೆಲೆಗಳನ್ನು ಆಧುನೀಕರಣಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಾಯುನೆಲೆಗಳ ಮೂಲಸೌಕರ್ಯ, ಸಾಮರ್ಥ್ಯ ವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಆ ಮೂಲಕ ಪ್ರತಿಕೂಲ ಹವಾಮಾನ ಸ್ಥಿತಿಯಲ್ಲಿಯೂ ಕಾರ್ಯಾಚರಣೆ ನಡೆಸಬಲ್ಲ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿಕೂಲ ಹವಾಮಾನ, ರಾತ್ರಿ ಕಾರ್ಯಾಚರಣೆ ಬಲ ವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ವಾಯುನೆಲೆ ಮೂಲಸೌಕರ್ಯ ಆಧುನೀಕರಣಕ್ಕಾಗಿ ಎರಡು ಒಪ್ಪಂದಗಳಿಗೆ ರಕ್ಷಣಾ ಸಚಿವಾಲಯ ಸಹಿ ಹಾಕಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: IAF AFCAT Recruitment 2022: 12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ

ವಾಯುನೆಲೆಗಳ ಆಧುನೀಕರಣದ ಮೊದಲ ಹಂತದ ಒಪ್ಪಂದಕ್ಕೆ 2011ರ ಮಾರ್ಚ್ 16ರಂದು ಸಹಿ ಹಾಕಲಾಗಿತ್ತು. ಅದರಡಿಯಲ್ಲಿ 30 ವಾಯುನೆಲೆಗಳ ಆಧುನೀಕರಣ ಮಾಡಲಾಗಿದೆ. ಎರಡನೇ ಹಂತದ ಆಧುನೀಕರಣಕ್ಕೆ 2020ರ ಮೇ 8ರಂದು ಸಹಿ ಹಾಕಲಾಗಿತ್ತು. ಇದರಂತೆ 37 ವಾಯುನೆಲೆಗಳ ಆಧುನೀಕರಣ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಮೊದಲ ಹಂತದ ಆಧುನೀಕರಣಕ್ಕೆ 1,215.35 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿತ್ತು. ಎರಡನೇ ಹಂತದ ಆಧುನೀಕರಣಕ್ಕೆ 1,187.17 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು