AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಪುಣೆಯಿಂದ ದೆಹಲಿಗೆ 2 ಕಿಡ್ನಿ, ಲಿವರ್ ರವಾನಿಸಿ ಜೀವ ಉಳಿಸಲು ನೆರವಾದ ಐಎಎಫ್

ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯ ಅಂಗಾಂಗ ದಾನದಿಂದ ದೇಶದ ಐದು ಕಡೆಗಳಲ್ಲಿ ರೋಗಿಗಳಿಗೆ ಪುನರ್ಜನ್ಮ ದೊರೆತಿತ್ತು. ಅದರಲ್ಲಿ ಒಂದು ಕಿಡ್ನಿ ಮತ್ತು ಕಣ್ಣುಗಳನ್ನು ಭಾರತೀಯ ವಾಯುಪಡೆಯ ವಿಮಾನ ದೆಹಲಿಗೆ ಒಯ್ದು ಜೀವ ಉಳಿಸಲು ನೆರವಾಗಿತ್ತು. ಇದೀಗ ಪುಣೆಯಿಂದ ದೆಹಲಿಗೆ ಕಿಡ್ನಿಗಳು ಮತ್ತು ಲಿವರ್ ಸಾಗಿಸಿ ನೆರವಾಗಿದೆ.

ರಾತ್ರೋರಾತ್ರಿ ಪುಣೆಯಿಂದ ದೆಹಲಿಗೆ 2 ಕಿಡ್ನಿ, ಲಿವರ್ ರವಾನಿಸಿ ಜೀವ ಉಳಿಸಲು ನೆರವಾದ ಐಎಎಫ್
ರಾತ್ರೋರಾತ್ರಿ ಪುಣೆಯಿಂದ ದೆಹಲಿಗೆ 2 ಕಿಡ್ನಿ, ಲಿವರ್ ರವಾನಿಸಿ ಜೀವ ಉಳಿಸಲು ನೆರವಾದ ಐಎಎಫ್Image Credit source: IAF
Ganapathi Sharma
|

Updated on: Jun 21, 2025 | 2:42 PM

Share

ನವದೆಹಲಿ, ಜೂನ್ 21: ಭಾರತೀಯ ವಾಯುಪಡೆ (IAF) ಅಂದರೆ ಹಾಗೆಯೇ. ಶತ್ರುಗಳನ್ನು ನುಗ್ಗಿ ಹೊಡೆಯುವುದರಲ್ಲಿಯೂ ಮುಂದೆ, ಅದೇ ರೀತಿ ಜೀವ ಉಳಿಸುಂಥ ಸಂದರ್ಭ ಬಂದರೆ ಅದಕ್ಕೂ ಸೈ. ಇದಕ್ಕೆ ತಕ್ಕ ಉದಾಹರಣೆಯಾಗಿ, ಶುಕ್ರವಾರ ರಾತ್ರೋರಾತ್ರಿ ಪುಣೆಯ ಕಮಾಂಡ್ ಆಸ್ಪತ್ರೆಯಿಂದ ದೆಹಲಿಯ ಸೇನಾ ಆಸ್ಪತ್ರೆಗೆ (R&R) 1 ಲಿವರ್, 2 ಕಿಡ್ನಿಗಳನ್ನು ರವಾನಿಸಿ ರೋಗಿಗಳ ಜೀವ ಉಳಿಸಲು ನೆರವಾಗಿದೆ. ಈ ಕುರಿತು ಶನಿವಾರ ಎಕ್ಸ್ ಹ್ಯಾಂಡಲ್​​ನಲ್ಲಿ ಪೋಸ್ಟ್ ಮಾಡಿರುವ ಐಎಎಫ್, ಕಾರ್ಯಾಚರಣೆಯ ವಿವರಗಳನ್ನು, ಛಾಯಾಚಿತ್ರಗಳು ಮತ್ತು ಏರ್‌ಲಿಫ್ಟ್‌ನ ವೀಡಿಯೊವನ್ನು ಹಂಚಿಕೊಂಡಿದೆ.

ರಾತ್ರಿಯ ಕ್ಷಿಪ್ರ ಕಾರ್ಯಾಚರಣೆಯಲ್ಲಿ, ಭಾರತೀಯ ವಾಯುಪಡೆಯು ಪುಣೆಯ ಕಮಾಂಡ್ ಆಸ್ಪತ್ರೆಯಿಂದ ದೆಹಲಿಯ ಸೇನಾ ಆಸ್ಪತ್ರೆಗೆ ಒಂದು ಯಕೃತ್ತು ಮತ್ತು ಎರಡು ಮೂತ್ರಪಿಂಡಗಳನ್ನು ವಿಮಾನದ ಮೂಲಕ ಸಾಗಿಸಿತು. ಯೋಧರೊಬ್ಬರ ಅವಲಂಬಿತ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡಿತ್ತು. ಅವರು ದಾನ ಮಾಡಿದ ಅಂಗಗಳು ಬಹು ಇತರ ವ್ಯಕ್ತಿಗಳಿಗೆ ಹೊಸ ಜೀವನವನ್ನು ನೀಡಿವೆ. ಎಎಫ್‌ಎಂಎಸ್ ಮತ್ತು ಐಎಎಫ್ ಜಂಟಿಯಾಗಿ ನಿರ್ವಹಿಸಿವೆ ಎಂದು ಭಾರತೀಯ ವಾಯುಪಡೆ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ
Image
ಧಮ್ಕಿಯಿಂದ ಪ್ರಯೋಜನವಾಗಿಲ್ಲ, ಇರಾನ್ ವಿರುದ್ಧ ಯುದ್ಧಕ್ಕೆ ಸಿದ್ಧವಾದ ಟ್ರಂಪ್
Image
ಭಾರತದ ಕಡೆಯಿಂದ ಮೋದಿ ಯುದ್ಧ ನಿಲ್ಲಿಸಿದರು; ವರಸೆ ಬದಲಿಸಿದ ಟ್ರಂಪ್
Image
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
Image
ಇರಾನ್ ಶರಣಾಗುವುದಿಲ್ಲ, ಮಧ್ಯಪ್ರವೇಶಿಸಬೇಡಿ; ಟ್ರಂಪ್​ಗೆ ಖಮೇನಿ ಎಚ್ಚರಿಕೆ

ಭಾರತೀಯ ವಾಯುಪಡೆ ಎಕ್ಸ್ ಸಂದೇಶ

ಈ ತಿಂಗಳ ಆರಂಭದಲ್ಲಿ, ಬೆಂಗಳೂರಿನಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಗಳನ್ನು ದೇಶದ ವಿವಿಧ ಭಾಗಗಳಿಗೆ ಕಳುಹಿಸಲಾಗಿತ್ತು. ಪರಿಣಾಮವಾಗಿ ಐದು ಜನರಿಗೆ ಜೀವದಾನವಾಗಿತ್ತು. ಒಂದು ಮೂತ್ರಪಿಂಡ ಮತ್ತು ಕಣ್ಣುಗಳನ್ನು ಐಎಎಫ್​ ವಿಮಾನವು ಬೆಂಗಳೂರಿನಿಂದ ದೆಹಲಿಗೆ ವಿಮಾನದ ಮೂಲಕ ಸಾಗಿಸಿತ್ತು.

ಐಎಎಫ್​ ಪ್ರಕಾರ, ಒಂದು ಮೂತ್ರಪಿಂಡ ಮತ್ತು ಕಣ್ಣುಗಳನ್ನು ದೆಹಲಿಯ ಸೇನಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇನ್ನೊಂದು ಮೂತ್ರಪಿಂಡ, ಕಾರ್ನಿಯಾವನ್ನು ಹಾಗೂ ಚರ್ಮದ ಅಂಗಾಂಶವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ತಂಡದ ಸಹಯೋಗದೊಂದಿಗೆ ಸಿಎಚ್​ಎಎಫ್​ಬಿಯಲ್ಲಿ ಕಸಿ ಮಾಡಲಾಗಿತ್ತು. ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯಲ್ಲಿ ಯಕೃತ್ತನ್ನು ಯಶಸ್ವಿಯಾಗಿ ಕಸಿ ಮಾಡಲಾಗಿತ್ತು.

ಇದನ್ನೂ ಓದಿ: ನೇಪಾಳ, ಶ್ರೀಲಂಕಾ ನಾಗರಿಕರ ಸ್ಥಳಾಂತರಕ್ಕೆ ಭಾರತ ಸಿದ್ಧತೆ, 517 ಭಾರತೀಯರ ಸ್ಥಳಾಂತರ

ಕರ್ನಾಟಕ ಸರ್ಕಾರದ ‘‘ಜೀವನಸಾರ್ಥಕತೆ’’ ಸಹಯೋಗದೊಂದಿಗೆ ಸುಗಮ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಇದು ಸಶಸ್ತ್ರ ಪಡೆಗಳ ವೈದ್ಯಕೀಯ ಸಮುದಾಯದ ಅಸಾಧಾರಣ ಬದ್ಧತೆ ಮತ್ತು ವೈದ್ಯಕೀಯ ಪರಿಣತಿಯನ್ನು ಪ್ರತಿಬಿಂಬಿಸಿದೆ ಎಂದು ಎಂದು ಐಎಎಫ್​ ಪ್ರಕಟಣೆ ತಿಳಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್
ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್
ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಜನ ಸದುಪಯೋಗ ಮಾಡಿಕೊಳ್ಳಬೇಕು: ಸಚಿವ
ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಜನ ಸದುಪಯೋಗ ಮಾಡಿಕೊಳ್ಳಬೇಕು: ಸಚಿವ
ಸಿಎಂ ಸಿದ್ದರಾಮಯ್ಯ ಪ್ರತಾಪ್​ನಂತೆ ಕೆಲಸವಿಲ್ಲದವರಲ್ಲ: ಪ್ರದೀಪ್ ಈಶ್ವರ್
ಸಿಎಂ ಸಿದ್ದರಾಮಯ್ಯ ಪ್ರತಾಪ್​ನಂತೆ ಕೆಲಸವಿಲ್ಲದವರಲ್ಲ: ಪ್ರದೀಪ್ ಈಶ್ವರ್
ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಧಿಕಾರಿ ರಮ್ಮಿ ಆಟದಲ್ಲಿ ಮಗ್ನ
ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಧಿಕಾರಿ ರಮ್ಮಿ ಆಟದಲ್ಲಿ ಮಗ್ನ