AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್‌ ವೇಳೆ ಪಾಕಿಸ್ತಾನದ 5 ಯುದ್ಧ ವಿಮಾನ ಪತನ; ಐಎಎಫ್ ಮುಖ್ಯಸ್ಥ ಮಹತ್ವದ ಮಾಹಿತಿ

ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಮಿಲಿಟರಿ ಘರ್ಷಣೆಯ ಸಮಯದಲ್ಲಿ ಭಾರತವು ಅಮೆರಿಕ ನಿರ್ಮಿತ ಎಫ್ -16 ಮತ್ತು ಚೀನಾ ನಿರ್ಮಿತ ಜೆಎಫ್ -17 ಸೇರಿದಂತೆ 4ರಿಂದ 5 ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಭಾರತೀಯ ವಾಯುಪಡೆಯ (ಐಎಎಫ್) ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ (ಎಪಿ ಸಿಂಗ್) ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ್‌ ವೇಳೆ ಪಾಕಿಸ್ತಾನದ 5 ಯುದ್ಧ ವಿಮಾನ ಪತನ; ಐಎಎಫ್ ಮುಖ್ಯಸ್ಥ ಮಹತ್ವದ ಮಾಹಿತಿ
Ap Singh
ಸುಷ್ಮಾ ಚಕ್ರೆ
|

Updated on: Oct 03, 2025 | 3:59 PM

Share

ನವದೆಹಲಿ, ಅಕ್ಟೋಬರ್ 3: ಆಪರೇಷನ್ ಸಿಂಧೂರ್ (Operation Sindoor) ಬಗ್ಗೆ ಭಾರತೀಯ ವಾಯುಪಡೆಯ (Indian Air Force) ಮುಖ್ಯಸ್ಥ ಎಪಿ ಸಿಂಗ್ ಬಹಳ ಮಹತ್ವದ ಮಾಹಿತಿ ನೀಡಿದ್ದಾರೆ. ನಾವು ಭಾರತೀಯ ಫೈಟರ್ ಜೆಟ್​​ಗಳನ್ನು ಹೊಡೆದುರುಳಿಸಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಪಾಕಿಸ್ತಾನದ ಹೇಳಿಕೆಗಳನ್ನು ಭಾರತೀಯ ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ನಿರಾಕರಿಸಿದ್ದಾರೆ. ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ದಾಳಿಯ ಸಮಯದಲ್ಲಿ ಪಾಕಿಸ್ತಾನಕ್ಕೆ ಉಂಟಾದ ಹಾನಿಯ ವಿವರವಾದ ಮಾಹಿತಿಯನ್ನು ಕೂಡ ಅವರು ನೀಡಿದ್ದಾರೆ.

ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಇಂದು (ಅಕ್ಟೋಬರ್ 3) ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ದೆಹಲಿಯಲ್ಲಿ ನಡೆದ 93ನೇ ವಾಯುಪಡೆ ದಿನಾಚರಣೆಯಲ್ಲಿ ಮಾತನಾಡಿದ ಎಪಿ ಸಿಂಗ್ ಅವರು “ನಾವು ಪಾಕಿಸ್ತಾನದ ವಾಯುನೆಲೆಯ ಮೇಲೆ ಹೆಚ್ಚಿನ ಸಂಖ್ಯೆಯ ದಾಳಿ ಮಾಡಿದ್ದೇವೆ ಮತ್ತು ನಾವು ಅವರ ಹೆಚ್ಚಿನ ಪ್ರಮಾಣದ ನೆಲೆಗಳನ್ನು ಮತ್ತು ಯುದ್ಧ ವಿಮಾನಗಳನ್ನು ಧ್ವಂಸ ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪಾಕ್ ಸೇನಾ ಮುಖ್ಯಸ್ಥ ಆಸಿಮ್​ರನ್ನು ಸೇಲ್ಸ್​ಮ್ಯಾನ್ ಎಂದು ಕರೆದು ಅಪಹಾಸ್ಯ ಮಾಡಿದ ಪಾಕಿಸ್ತಾನ ಜನ

ಪಾಕಿಸ್ತಾನ ಅನುಭವಿಸಿದ ವ್ಯಾಪಕ ನಷ್ಟಗಳನ್ನು ಅವರು ವಿವರಿಸಿದ್ದು, “ಭಾರತೀಯ ದಾಳಿಗಳು 4 ಸ್ಥಳಗಳಲ್ಲಿ ರಾಡಾರ್‌ಗಳನ್ನು ಹೊಡೆದವು. ಅವುಗಳಲ್ಲಿ ಎರಡು ಸ್ಥಳಗಳಲ್ಲಿ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು, ಎರಡು ಸ್ಥಳಗಳಲ್ಲಿ ರನ್‌ವೇಗಳು ಹಾನಿಗೊಳಗಾದವು. ನಂತರ 3 ವಿಭಿನ್ನ ನಿಲ್ದಾಣಗಳಲ್ಲಿನ ಅವುಗಳ 3 ಹ್ಯಾಂಗರ್‌ಗಳು ಹಾನಿಗೊಳಗಾಗಿವೆ” ಎಂದು ಹೇಳಿದ್ದಾರೆ.

“ಅದರೊಂದಿಗೆ ಪಾಕಿಸ್ತಾನದ ಒಂದು SAM ವ್ಯವಸ್ಥೆಯನ್ನು ನಾಶಪಡಿಸಲಾಗಿದೆ. 300 ಕಿ.ಮೀ.ಗಿಂತ ಹೆಚ್ಚು ದೂರದಲ್ಲಿ ದಾಳಿ ಮಾಡಿದ ಒಂದು ದೀರ್ಘ-ಶ್ರೇಣಿಯ ದಾಳಿಯ ಸ್ಪಷ್ಟ ಪುರಾವೆಗಳು ನಮ್ಮಲ್ಲಿವೆ. ಅದರೊಂದಿಗೆ, F-16 ಮತ್ತು JF-17 ವರ್ಗದ ನಡುವಿನ 5 ಹೈಟೆಕ್ ಯುದ್ಧವಿಮಾನಗಳನ್ನು ಹೊಡೆದುರುಳಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ ಕ್ರೀಕ್ ವಿವಾದ: ಭುಜ್ ವಾಯುನೆಲೆಯಿಂದ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನಿ ಪ್ರಧಾನಿ ಶೆಹಬಾಜ್ ಷರೀಫ್ ತಮ್ಮ ಪಡೆಗಳು 7 ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡ ಕೆಲವು ದಿನಗಳ ನಂತರ ಭಾರತದ ವಾಯುಪಡೆಯಿಂದ ಈ ಹೇಳಿಕೆಗಳು ಬಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ