AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ನಿವೃತ್ತಿ; ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರ್ಪಡೆ

2019ರಲ್ಲಿ ಪಾಕಿಸ್ತಾನದ ಯುದ್ಧವಿಮಾನದೊಂದಿಗಿನ ವೈಮಾನಿಕ ಕಾದಾಟದ ವೇಳೆ ಶೌರ್ಯ ಮೆರೆದಿದ್ದ ಭಾರತೀಯ ವಾಯುಪಡೆಯ ಫೈಟರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರು ಸೇವಾ ಅವಧಿ ಮುಗಿಯುವ ಮುನ್ನವೇ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ಅವರು ಕಮರ್ಷಿಯಲ್ ಪೈಲಟ್ ಆಗಿ ಖಾಸಗಿ ವಿಮಾನಯಾನ ಸಂಸ್ಥೆಯೊಂದನ್ನು ಸೇರಲಿದ್ದಾರೆ. 2021ರ ಡಿಸೆಂಬರ್​ನಲ್ಲಿ ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿ ಪಡೆದಿದ್ದ ಅಭಿನಂದನ್ ಸುಮಾರು 22 ವರ್ಷಗಳ ಕಾಲ ವಾಯುಪಡೆ ಪೈಲಟ್ ಆಗಿ ಸೇವೆ ಸಲ್ಲಿಸಿದ್ದರು.

ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ನಿವೃತ್ತಿ; ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರ್ಪಡೆ
ಅಭಿನಂದನ್ ವರ್ಧಮಾನ್Image Credit source: x
ಸುಷ್ಮಾ ಚಕ್ರೆ
|

Updated on: Sep 02, 2026 | 11:12 PM

Share

ನವದೆಹಲಿ, ಸೆಪ್ಟೆಂಬರ್ 2: 2019ರ ಬಾಲಾಕೋಟ್ ವೈಮಾನಿಕ ದಾಳಿಯ ನಂತರ ಪಾಕಿಸ್ತಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿ, ಪಾಕಿಸ್ತಾನದ ಗಡಿಯೊಳಗೆ ಇಳಿದು ಶೌರ್ಯ ಮೆರೆದಿದ್ದ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ತಮ್ಮ ಸೇವಾ ಅವಧಿ ಮುಗಿಯುವ ಮುನ್ನವೇ ವಾಯುಪಡೆಯಿಂದ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ಅವರು ಖಾಸಗಿ ವಿಮಾನಯಾನ ಸಂಸ್ಥೆಯೊಂದರಲ್ಲಿ ಕಮರ್ಷಿಯಲ್ ಪೈಲಟ್ ಆಗಿ ಸೇರ್ಪಡೆಗೊಳ್ಳಲು ವಾಯುಪಡೆಯ ಸೇವೆಯಿಂದ ನಿವೃತ್ತರಾಗಿದ್ದಾರೆ.

ಅಭಿನಂದನ್ ವರ್ಧಮಾನ್ ಯಾರು?:

2019ರ ಫೆಬ್ರವರಿ 14ರಂದು ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಬಾಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿ ನಡೆಸಿತ್ತು. ಫೆಬ್ರವರಿ 27ರಂದು ಪಾಕಿಸ್ತಾನದ ಯುದ್ಧವಿಮಾನಗಳು ಭಾರತದ ಗಡಿ ಪ್ರವೇಶಿಸಿದಾಗ, ಅಭಿನಂದನ್ ತಮ್ಮ ‘ಮಿಗ್-21 ಬೈಸನ್’ ವಿಮಾನದ ಮೂಲಕ ಪಾಕಿಸ್ತಾನದ ಅತ್ಯಾಧುನಿಕ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು.

ಇದನ್ನೂ ಓದಿ: 2019ರಲ್ಲಿ ವಿಂಗ್ ಕಮಾಂಡರ್ ಅಭಿನಂದನ್​​ರನ್ನು ಸೆರೆ ಹಿಡಿದಿದ್ದ ಪಾಕ್ ಮೇಜರ್ ಮೊಯಿಜ್ ಸಾವು

ಪಾಕಿಸ್ತಾನದಲ್ಲಿ ಸೆರೆಯಾಗಿದ್ದ ಅಭಿನಂದನ್:

ಯುದ್ಧದ ಸಮಯದಲ್ಲಿ ಅಭಿನಂದನ್ ಅವರ ವಿಮಾನಕ್ಕೂ ಹಾನಿಯಾದ ಹಿನ್ನೆಲೆಯಲ್ಲಿ, ಅಭಿನಂದನ್ ಪ್ಯಾರಾಶೂಟ್ ಮೂಲಕ ಪಾಕ್ ಆಕ್ರಮಿತ ಕಾಶ್ಮೀರದ ನೆಲಕ್ಕೆ ಇಳಿದು ಪಾಕಿಸ್ತಾನಿ ಸೇನೆಯ ವಶವಾಗಿದ್ದರು. ಶತ್ರುಗಳ ವಶದಲ್ಲಿದ್ದಾಗಲೂ ಅವರು ತೋರಿಸಿದ ಧೈರ್ಯ ಮತ್ತು ಸ್ಥಿರತೆ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು. ಬಳಿಕ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಪಾಕಿಸ್ತಾನ, ಮಾರ್ಚ್ 2ರಂದು ವಾಘಾ ಗಡಿಯ ಮೂಲಕ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿತು.

ಇದನ್ನೂ ಓದಿ: ಅಭಿನಂದನ್ ವರ್ಧಮಾನ್ ಅವರನ್ನು ಸೆರೆಹಿಡಿದಿದ್ದ ಪಾಕಿಸ್ತಾನದ ಮೇಜರ್ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭಾಗಿ

ಅಪಾರ ಶೌರ್ಯ ಮತ್ತು ದೇಶಭಕ್ತಿಯನ್ನು ಪ್ರದರ್ಶಿಸಿದ್ದಕ್ಕಾಗಿ ಅಭಿನಂದನ್ ವರ್ಧಮಾನ್ ಅವರಿಗೆ ಭಾರತದ ಮೂರನೇ ಅತ್ಯುನ್ನತ ಮಿಲಿಟರಿ ಗೌರವವಾದ ‘ವೀರ್ ಚಕ್ರ’ ನೀಡಿ ಗೌರವಿಸಲಾಗಿತ್ತು. 2004ರ ಜೂನ್ 19ರಂದು ಭಾರತೀಯ ವಾಯುಪಡೆಗೆ ಫೈಟರ್ ಪೈಲಟ್ ಆಗಿ ನಿಯೋಜನೆಗೊಂಡಿದ್ದ ಅಭಿನಂದನ್, ಡಿಸೆಂಬರ್ 2021ರಲ್ಲಿ ‘ವಲ್ವಿಂಗ್ ಕಮಾಂಡರ್’ ಹುದ್ದೆಯಿಂದ ‘ಗ್ರೂಪ್ ಕ್ಯಾಪ್ಟನ್’ ಆಗಿ ಬಡ್ತಿ ಪಡೆದಿದ್ದರು. 22 ವರ್ಷಗಳಿಗೂ ಹೆಚ್ಚು ಕಾಲ ದೇಶಕ್ಕೆ ಸಲ್ಲಿಸಿದ ಸೇವೆಗೆ ವಿದಾಯ ಹೇಳಿ ಅವರು ಕಮರ್ಷಿಯಲ್ ಪೈಲಟ್ ಆಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು