AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Chopper Crash ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನ; ಮೃತರ ಸಂಖ್ಯೆ 13ಕ್ಕೆ  ಏರಿಕೆ

ಸಿಡಿಎಸ್ (CDS) ಬಿಪಿನ್ ರಾವತ್ ಸೇರಿದಂತೆ 14  ಪ್ರಯಾಣಿಕರು ಹೆಲಿಕಾಪ್ಟರ್ ನಲ್ಲಿದ್ದರು. ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ  ರಾವತ್‌ಗೆ ಅವರಿಗೆ ಚಿಕಿತ್ಸೆ  ನೀಡುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ .

Tamil Nadu Chopper Crash ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನ;  ಮೃತರ ಸಂಖ್ಯೆ 13ಕ್ಕೆ  ಏರಿಕೆ
ಪತನಗೊಂಡ ಹೆಲಿಕಾಪ್ಟರ್
TV9 Web
| Edited By: |

Updated on:Dec 08, 2021 | 5:22 PM

Share

ದೆಹಲಿ:ತಮಿಳುನಾಡಿನ ಕೂನೂರ್​​ನಲ್ಲಿ ಸೇನಾ ಹೆಲಿಕಾಪ್ಟರ್​ ಪತನವಾಗಿದ್ದು ಈ ದುರಂತಲ್ಲಿ ಮೃತಪಟ್ಟವರಸಂಖ್ಯೆ  13ಕ್ಕೆ  ಏರಿಕೆಯಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.  ಸಿಡಿಎಸ್ (CDS) ಬಿಪಿನ್ ರಾವತ್ (Bipin Rawat) ಸೇರಿದಂತೆ 14  ಪ್ರಯಾಣಿಕರು ಹೆಲಿಕಾಪ್ಟರ್​​ನಲ್ಲಿದ್ದರು. ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ ರಾವತ್‌ಗೆ ಅವರಿಗೆ ಚಿಕಿತ್ಸೆ  ನೀಡುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟವರ ಗುರುತು ಪತ್ತೆಗಾಗಿ ವೈದ್ಯರು ಡಿಎನ್​​ಎ ಪರೀಕ್ಷೆ ಮಾಡುತ್ತಿದ್ದಾರೆ. ಸ್ಥಳೀಯ ಪೊಲೀಸರ ಬೆಂಬಲದೊಂದಿಗೆ ಸೇನಾ ಸಿಬ್ಬಂದಿ ಅಪಘಾತದ ಸ್ಥಳವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ಜನರು ಈ ಪ್ರದೇಶಕ್ಕೆ ಭೇಟಿ ನೀಡದಂತೆ ಕೇಳಿಕೊಳ್ಳಲಾಗಿದೆ. ರಾಜ್ಯ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೂಡ ಈ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಕೂನೂರಿನಿಂದ ಕೊಯಮತ್ತೂರಿನವರೆಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ನಾಳೆ ಸಂಸತ್​​ನಲ್ಲಿ ವಿವರಣೆ ನೀಡಲಿದ್ದಾರೆ ರಾಜನಾಥ್ ಸಿಂಗ್  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ಸಂಸತ್​​ನಲ್ಲಿ ಈ ಘಟನೆ ಬಗ್ಗೆ ಹೇಳಿಕೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ಕೂನೂರಿಗೆ ತೆರಳಲಿರುವ ಸಿಎಂ ಸ್ಟಾಲಿನ್ ಭಾರತದ ಮೊದಲ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಮಧ್ಯಾಹ್ನ 12.20 ರ ಸುಮಾರಿಗೆ ಮೇಲಿನ ಕುನೂರ್ ಪ್ರದೇಶದ ಬಳಿ ಅಪಘಾತಕ್ಕೀಡಾಯಿತು.  ನಾಲ್ವರು ಬದುಕುಳಿದವರನ್ನು ಕೂನೂರ್ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಮಿಳುನಾಡು ಪೊಲೀಸ್ ಮತ್ತು ಕೂನೂರಿನಲ್ಲಿರುವ ಭಾರತೀಯ ಸೇನಾ ಸೌಲಭ್ಯದ ಉನ್ನತ ಮೂಲಗಳು ತಿಳಿಸಿವೆ. “ಅವರೆಲ್ಲರಿಗೂ ಸುಟ್ಟ ಗಾಯಗಳಿದ್ದವು. ಕೊಯಮತ್ತೂರು ಜನರಲ್ ಆಸ್ಪತ್ರೆಯಿಂದ ಆರು ಹಿರಿಯ ವೈದ್ಯರ ಮೊದಲ ಬ್ಯಾಚ್ ಕುನ್ನೂರ್ ಆಸ್ಪತ್ರೆಗೆ ತಲುಪಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ವೆಲ್ಲಿಂಗ್ಟನ್‌ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆದ ಕೆಡೆಟ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಡಿಎಸ್ ರಾವತ್ ಅವರೊಂದಿಗೆ ಇಳಿಯಲು ಹೆಲಿಪ್ಯಾಡ್‌ನಿಂದ ಸುಮಾರು 10 ಕಿಮೀ ದೂರದಲ್ಲಿ ಅಪಘಾತ ಸಂಭವಿಸಿದೆ.

ಪರಿಶೀಲನಾ ಸಭೆ  ಅರ್ಧದಲ್ಲೇ ನಿಲ್ಲಿಸಿದ ಮಮತಾ ತಮಿಳುನಾಡಿನಲ್ಲಿ ರಕ್ಷಣಾ ಸಿಬ್ಬಂದಿ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ತಿಳಿದ ತಕ್ಷಣ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರದಂದು ಆಡಳಿತಾತ್ಮಕ ಪರಿಶೀಲನಾ ಸಭೆಯನ್ನು ಮಧ್ಯದಲ್ಲಿಯೇ ಮುಗಿಸಿದರು.

“ನಮಗೆ ದುಃಖದ ಸುದ್ದಿ ಬಂದಿದೆ. ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ದುಃಖವನ್ನು ವ್ಯಕ್ತಪಡಿಸಲು ನನ್ನಲ್ಲಿ ಪದಗಳಿಲ್ಲ. ನಾನು ಈ ಸಭೆಯನ್ನು ಕೊನೆಗೊಳಿಸುತ್ತಿದ್ದೇನೆ” ಎಂದು ಹೇಳಿ ಮಾಲ್ಡಾದಲ್ಲಿ ಸಭೆಯ ಸ್ಥಳದಿಂದ ನಿರ್ಗಮಿಸಿದರು. ಬ್ಯಾನರ್ಜಿ, ರಾಜ್ಯದಲ್ಲಿ ನಾಲ್ಕು ದಿನಗಳ ಆಡಳಿತ ಪ್ರವಾಸದಲ್ಲಿ ಹಲವಾರು ಪರಿಶೀಲನಾ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Army Chopper Crash: ಮರಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರ್​ನಿಂದ ಸಿಬ್ಬಂದಿ ನೆಲಕ್ಕೆ ಬೀಳುತ್ತಿದ್ದರು; ಭಯಾನಕ ಸನ್ನಿವೇಶ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

Published On - 5:11 pm, Wed, 8 December 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?