Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Chopper Crash ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನ; ಮೃತರ ಸಂಖ್ಯೆ 13ಕ್ಕೆ  ಏರಿಕೆ

ಸಿಡಿಎಸ್ (CDS) ಬಿಪಿನ್ ರಾವತ್ ಸೇರಿದಂತೆ 14  ಪ್ರಯಾಣಿಕರು ಹೆಲಿಕಾಪ್ಟರ್ ನಲ್ಲಿದ್ದರು. ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ  ರಾವತ್‌ಗೆ ಅವರಿಗೆ ಚಿಕಿತ್ಸೆ  ನೀಡುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ .

Tamil Nadu Chopper Crash ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನ;  ಮೃತರ ಸಂಖ್ಯೆ 13ಕ್ಕೆ  ಏರಿಕೆ
ಪತನಗೊಂಡ ಹೆಲಿಕಾಪ್ಟರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 08, 2021 | 5:22 PM

ದೆಹಲಿ:ತಮಿಳುನಾಡಿನ ಕೂನೂರ್​​ನಲ್ಲಿ ಸೇನಾ ಹೆಲಿಕಾಪ್ಟರ್​ ಪತನವಾಗಿದ್ದು ಈ ದುರಂತಲ್ಲಿ ಮೃತಪಟ್ಟವರಸಂಖ್ಯೆ  13ಕ್ಕೆ  ಏರಿಕೆಯಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.  ಸಿಡಿಎಸ್ (CDS) ಬಿಪಿನ್ ರಾವತ್ (Bipin Rawat) ಸೇರಿದಂತೆ 14  ಪ್ರಯಾಣಿಕರು ಹೆಲಿಕಾಪ್ಟರ್​​ನಲ್ಲಿದ್ದರು. ವೆಲ್ಲಿಂಗ್ಟನ್‌ನ ಸೇನಾ ಆಸ್ಪತ್ರೆಯಲ್ಲಿ ರಾವತ್‌ಗೆ ಅವರಿಗೆ ಚಿಕಿತ್ಸೆ  ನೀಡುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟವರ ಗುರುತು ಪತ್ತೆಗಾಗಿ ವೈದ್ಯರು ಡಿಎನ್​​ಎ ಪರೀಕ್ಷೆ ಮಾಡುತ್ತಿದ್ದಾರೆ. ಸ್ಥಳೀಯ ಪೊಲೀಸರ ಬೆಂಬಲದೊಂದಿಗೆ ಸೇನಾ ಸಿಬ್ಬಂದಿ ಅಪಘಾತದ ಸ್ಥಳವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ಜನರು ಈ ಪ್ರದೇಶಕ್ಕೆ ಭೇಟಿ ನೀಡದಂತೆ ಕೇಳಿಕೊಳ್ಳಲಾಗಿದೆ. ರಾಜ್ಯ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೂಡ ಈ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಕೂನೂರಿನಿಂದ ಕೊಯಮತ್ತೂರಿನವರೆಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ನಾಳೆ ಸಂಸತ್​​ನಲ್ಲಿ ವಿವರಣೆ ನೀಡಲಿದ್ದಾರೆ ರಾಜನಾಥ್ ಸಿಂಗ್  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ಸಂಸತ್​​ನಲ್ಲಿ ಈ ಘಟನೆ ಬಗ್ಗೆ ಹೇಳಿಕೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ಕೂನೂರಿಗೆ ತೆರಳಲಿರುವ ಸಿಎಂ ಸ್ಟಾಲಿನ್ ಭಾರತದ ಮೊದಲ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಮಧ್ಯಾಹ್ನ 12.20 ರ ಸುಮಾರಿಗೆ ಮೇಲಿನ ಕುನೂರ್ ಪ್ರದೇಶದ ಬಳಿ ಅಪಘಾತಕ್ಕೀಡಾಯಿತು.  ನಾಲ್ವರು ಬದುಕುಳಿದವರನ್ನು ಕೂನೂರ್ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಮಿಳುನಾಡು ಪೊಲೀಸ್ ಮತ್ತು ಕೂನೂರಿನಲ್ಲಿರುವ ಭಾರತೀಯ ಸೇನಾ ಸೌಲಭ್ಯದ ಉನ್ನತ ಮೂಲಗಳು ತಿಳಿಸಿವೆ. “ಅವರೆಲ್ಲರಿಗೂ ಸುಟ್ಟ ಗಾಯಗಳಿದ್ದವು. ಕೊಯಮತ್ತೂರು ಜನರಲ್ ಆಸ್ಪತ್ರೆಯಿಂದ ಆರು ಹಿರಿಯ ವೈದ್ಯರ ಮೊದಲ ಬ್ಯಾಚ್ ಕುನ್ನೂರ್ ಆಸ್ಪತ್ರೆಗೆ ತಲುಪಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ವೆಲ್ಲಿಂಗ್ಟನ್‌ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆದ ಕೆಡೆಟ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಡಿಎಸ್ ರಾವತ್ ಅವರೊಂದಿಗೆ ಇಳಿಯಲು ಹೆಲಿಪ್ಯಾಡ್‌ನಿಂದ ಸುಮಾರು 10 ಕಿಮೀ ದೂರದಲ್ಲಿ ಅಪಘಾತ ಸಂಭವಿಸಿದೆ.

ಪರಿಶೀಲನಾ ಸಭೆ  ಅರ್ಧದಲ್ಲೇ ನಿಲ್ಲಿಸಿದ ಮಮತಾ ತಮಿಳುನಾಡಿನಲ್ಲಿ ರಕ್ಷಣಾ ಸಿಬ್ಬಂದಿ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ತಿಳಿದ ತಕ್ಷಣ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರದಂದು ಆಡಳಿತಾತ್ಮಕ ಪರಿಶೀಲನಾ ಸಭೆಯನ್ನು ಮಧ್ಯದಲ್ಲಿಯೇ ಮುಗಿಸಿದರು.

“ನಮಗೆ ದುಃಖದ ಸುದ್ದಿ ಬಂದಿದೆ. ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ದುಃಖವನ್ನು ವ್ಯಕ್ತಪಡಿಸಲು ನನ್ನಲ್ಲಿ ಪದಗಳಿಲ್ಲ. ನಾನು ಈ ಸಭೆಯನ್ನು ಕೊನೆಗೊಳಿಸುತ್ತಿದ್ದೇನೆ” ಎಂದು ಹೇಳಿ ಮಾಲ್ಡಾದಲ್ಲಿ ಸಭೆಯ ಸ್ಥಳದಿಂದ ನಿರ್ಗಮಿಸಿದರು. ಬ್ಯಾನರ್ಜಿ, ರಾಜ್ಯದಲ್ಲಿ ನಾಲ್ಕು ದಿನಗಳ ಆಡಳಿತ ಪ್ರವಾಸದಲ್ಲಿ ಹಲವಾರು ಪರಿಶೀಲನಾ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Army Chopper Crash: ಮರಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರ್​ನಿಂದ ಸಿಬ್ಬಂದಿ ನೆಲಕ್ಕೆ ಬೀಳುತ್ತಿದ್ದರು; ಭಯಾನಕ ಸನ್ನಿವೇಶ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

Published On - 5:11 pm, Wed, 8 December 21

ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ