AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aircraft Crash: ರಾಜಸ್ಥಾನದಲ್ಲಿ ವಾಯುಪಡೆಯ ಯುದ್ಧ ವಿಮಾನ ಪತನ; ಪೈಲಟ್ ರಕ್ಷಣೆ

IAF MiG-21 Bison Fighter Aircraft Crash: ಬರ್ಮರ್​ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ವಿಮಾನ ಪತನವಾಗಿದೆ.

Aircraft Crash: ರಾಜಸ್ಥಾನದಲ್ಲಿ ವಾಯುಪಡೆಯ ಯುದ್ಧ ವಿಮಾನ ಪತನ; ಪೈಲಟ್ ರಕ್ಷಣೆ
ಬರ್ಮರ್​ನಲ್ಲಿ ಪತನವಾದ ಯುದ್ಧವಿಮಾನ
TV9 Web
| Edited By: |

Updated on:Aug 25, 2021 | 7:21 PM

Share

ಜೈಪುರ: ಭಾರತೀಯ ವಾಯುಸೇನೆಯ ಮಿಗ್-21 ಬೈಸನ್ ಯುದ್ಧ ವಿಮಾನ ರಾಜಸ್ಥಾನದ ಬರ್ಮರ್​ನಲ್ಲಿ ಪತನವಾಗಿದೆ. ಬರ್ಮರ್​ನಲ್ಲಿ ಯುದ್ಧ ವಿಮಾನದ ತರಬೇತಿ ವೇಳೆ ಈ ದುರಂತ ಸಂಭವಿಸಿದ್ದು, ಪೈಲಟ್ ಅನ್ನು ಸುರಕ್ಷಿತವಾಗಿ ಹೊರಗೆ ಎಳೆಯಲಾಗಿದೆ. ವಿಮಾನ ಕೆಳಗೆ ಬೀಳುತ್ತಿದ್ದಂತೆ ಹೊತ್ತಿ ಉರಿದಿದ್ದು, ಇಂದು ಸಂಜೆ 5.30ರ ವೇಳೆಗೆ ಈ ಘಟನೆ ಸಂಭವಿಸಿದೆ.

ಬರ್ಮರ್​ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ವಿಮಾನ ಪತನವಾಗಿದೆ. ಪೈಲಟನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಉತ್ತರ್​ಲಾಯ್ ವಾಯುಪಡೆಯ ಅಧಿಕಾರಿಗಳು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಆಗಮಿಸಿದ್ದಾರೆ. ವಿಮಾನ ಪತನವಾಗುತ್ತಿದ್ದಂತೆ ಗ್ರಾಮಸ್ಥರು ವಾಟರ್​ ಟ್ಯಾಂಕರ್​ಗಳನ್ನು ತರಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅವರೇ ಪೈಲಟನ್ನು ಹೊರಗೆ ಎಳೆದು, ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಈ ದುರಂತಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: Russia Aircraft Crash: ರಷ್ಯಾದಲ್ಲಿ ಮಿಲಿಟರಿ ವಿಮಾನ ಪತನ; ಕೊನೆ ಕ್ಷಣದ ಶಾಕಿಂಗ್ ವಿಡಿಯೋ ಇಲ್ಲಿದೆ

Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ

(IAF MiG-21 Bison Fighter Aircraft crashes in Rajasthan’s Barmer Pilot Safe)

Published On - 7:16 pm, Wed, 25 August 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು