AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aircraft Crash: ರಾಜಸ್ಥಾನದಲ್ಲಿ ವಾಯುಪಡೆಯ ಯುದ್ಧ ವಿಮಾನ ಪತನ; ಪೈಲಟ್ ರಕ್ಷಣೆ

IAF MiG-21 Bison Fighter Aircraft Crash: ಬರ್ಮರ್​ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ವಿಮಾನ ಪತನವಾಗಿದೆ.

Aircraft Crash: ರಾಜಸ್ಥಾನದಲ್ಲಿ ವಾಯುಪಡೆಯ ಯುದ್ಧ ವಿಮಾನ ಪತನ; ಪೈಲಟ್ ರಕ್ಷಣೆ
ಬರ್ಮರ್​ನಲ್ಲಿ ಪತನವಾದ ಯುದ್ಧವಿಮಾನ
TV9 Web
| Edited By: |

Updated on:Aug 25, 2021 | 7:21 PM

Share

ಜೈಪುರ: ಭಾರತೀಯ ವಾಯುಸೇನೆಯ ಮಿಗ್-21 ಬೈಸನ್ ಯುದ್ಧ ವಿಮಾನ ರಾಜಸ್ಥಾನದ ಬರ್ಮರ್​ನಲ್ಲಿ ಪತನವಾಗಿದೆ. ಬರ್ಮರ್​ನಲ್ಲಿ ಯುದ್ಧ ವಿಮಾನದ ತರಬೇತಿ ವೇಳೆ ಈ ದುರಂತ ಸಂಭವಿಸಿದ್ದು, ಪೈಲಟ್ ಅನ್ನು ಸುರಕ್ಷಿತವಾಗಿ ಹೊರಗೆ ಎಳೆಯಲಾಗಿದೆ. ವಿಮಾನ ಕೆಳಗೆ ಬೀಳುತ್ತಿದ್ದಂತೆ ಹೊತ್ತಿ ಉರಿದಿದ್ದು, ಇಂದು ಸಂಜೆ 5.30ರ ವೇಳೆಗೆ ಈ ಘಟನೆ ಸಂಭವಿಸಿದೆ.

ಬರ್ಮರ್​ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ವಿಮಾನ ಪತನವಾಗಿದೆ. ಪೈಲಟನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಉತ್ತರ್​ಲಾಯ್ ವಾಯುಪಡೆಯ ಅಧಿಕಾರಿಗಳು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಆಗಮಿಸಿದ್ದಾರೆ. ವಿಮಾನ ಪತನವಾಗುತ್ತಿದ್ದಂತೆ ಗ್ರಾಮಸ್ಥರು ವಾಟರ್​ ಟ್ಯಾಂಕರ್​ಗಳನ್ನು ತರಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅವರೇ ಪೈಲಟನ್ನು ಹೊರಗೆ ಎಳೆದು, ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಈ ದುರಂತಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: Russia Aircraft Crash: ರಷ್ಯಾದಲ್ಲಿ ಮಿಲಿಟರಿ ವಿಮಾನ ಪತನ; ಕೊನೆ ಕ್ಷಣದ ಶಾಕಿಂಗ್ ವಿಡಿಯೋ ಇಲ್ಲಿದೆ

Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ

(IAF MiG-21 Bison Fighter Aircraft crashes in Rajasthan’s Barmer Pilot Safe)

Published On - 7:16 pm, Wed, 25 August 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ