AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aircraft Crash: ರಾಜಸ್ಥಾನದಲ್ಲಿ ವಾಯುಪಡೆಯ ಯುದ್ಧ ವಿಮಾನ ಪತನ; ಪೈಲಟ್ ರಕ್ಷಣೆ

IAF MiG-21 Bison Fighter Aircraft Crash: ಬರ್ಮರ್​ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ವಿಮಾನ ಪತನವಾಗಿದೆ.

Aircraft Crash: ರಾಜಸ್ಥಾನದಲ್ಲಿ ವಾಯುಪಡೆಯ ಯುದ್ಧ ವಿಮಾನ ಪತನ; ಪೈಲಟ್ ರಕ್ಷಣೆ
ಬರ್ಮರ್​ನಲ್ಲಿ ಪತನವಾದ ಯುದ್ಧವಿಮಾನ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 25, 2021 | 7:21 PM

Share

ಜೈಪುರ: ಭಾರತೀಯ ವಾಯುಸೇನೆಯ ಮಿಗ್-21 ಬೈಸನ್ ಯುದ್ಧ ವಿಮಾನ ರಾಜಸ್ಥಾನದ ಬರ್ಮರ್​ನಲ್ಲಿ ಪತನವಾಗಿದೆ. ಬರ್ಮರ್​ನಲ್ಲಿ ಯುದ್ಧ ವಿಮಾನದ ತರಬೇತಿ ವೇಳೆ ಈ ದುರಂತ ಸಂಭವಿಸಿದ್ದು, ಪೈಲಟ್ ಅನ್ನು ಸುರಕ್ಷಿತವಾಗಿ ಹೊರಗೆ ಎಳೆಯಲಾಗಿದೆ. ವಿಮಾನ ಕೆಳಗೆ ಬೀಳುತ್ತಿದ್ದಂತೆ ಹೊತ್ತಿ ಉರಿದಿದ್ದು, ಇಂದು ಸಂಜೆ 5.30ರ ವೇಳೆಗೆ ಈ ಘಟನೆ ಸಂಭವಿಸಿದೆ.

ಬರ್ಮರ್​ನಿಂದ 35 ಕಿ.ಮೀ ದೂರದಲ್ಲಿರುವ ಮತಸರ್ ಗ್ರಾಮದಲ್ಲಿ ಯುದ್ಧ ವಿಮಾನದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ವಿಮಾನ ಪತನವಾಗಿದೆ. ಪೈಲಟನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಉತ್ತರ್​ಲಾಯ್ ವಾಯುಪಡೆಯ ಅಧಿಕಾರಿಗಳು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಆಗಮಿಸಿದ್ದಾರೆ. ವಿಮಾನ ಪತನವಾಗುತ್ತಿದ್ದಂತೆ ಗ್ರಾಮಸ್ಥರು ವಾಟರ್​ ಟ್ಯಾಂಕರ್​ಗಳನ್ನು ತರಿಸಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅವರೇ ಪೈಲಟನ್ನು ಹೊರಗೆ ಎಳೆದು, ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಈ ದುರಂತಕ್ಕೆ ಕಾರಣವೇನೆಂದು ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: Russia Aircraft Crash: ರಷ್ಯಾದಲ್ಲಿ ಮಿಲಿಟರಿ ವಿಮಾನ ಪತನ; ಕೊನೆ ಕ್ಷಣದ ಶಾಕಿಂಗ್ ವಿಡಿಯೋ ಇಲ್ಲಿದೆ

Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ

(IAF MiG-21 Bison Fighter Aircraft crashes in Rajasthan’s Barmer Pilot Safe)

Published On - 7:16 pm, Wed, 25 August 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ